AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭಾ ಕಲಾಪದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಸ್ತಾಪ; ಬಿಸಿಬಿಸಿ ಚರ್ಚೆ, ವಿರೋಧ ಪಕ್ಷಕ್ಕೆ ಶ್ಲಾಘನೆ

12,900 ಕೋಟಿಯಲ್ಲಿ ಯೋಜನೆ ಮುಗಿಸಬಹುದು, ಯೋಜನೆಗೆ26 ಸಾವಿರ ಕೋಟಿ ಹೆಚ್ಚುವರಿ ಯಾಕೆ? ನಿಮಗೆ ಇಚ್ಚಾಶಕ್ತಿಯಿದ್ದರೆ ಯೋಜನೆ ಮಾಡಬಹುದು ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಪರಮೇಶ್ವರ್ ಗರಂ ಆದರು.

ವಿಧಾನಸಭಾ ಕಲಾಪದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಸ್ತಾಪ; ಬಿಸಿಬಿಸಿ ಚರ್ಚೆ, ವಿರೋಧ ಪಕ್ಷಕ್ಕೆ ಶ್ಲಾಘನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 14, 2021 | 3:14 PM

Share

ಬೆಂಗಳೂರು: ವಿಧಾನಸಭಾ ಅಧಿವೇಶನಲ್ಲಿ ಎತ್ತಿನಹೊಳೆ ಮತ್ತು ಮೇಕೆದಾಟು ಯೋಜನೆಗಳ ಪ್ರಸ್ತಾಪಗೊಂಡವು. ಎತ್ತಿನಹೊಳೆ ಯೋಜನೆಯ ಅನುಷ್ಠಾನದ ಬಗ್ಗೆ ಸಚಿವ ಮಾಧುಸ್ವಾಮಿ ಮತ್ತು ಡಾ.ಜಿ.ಪರಮೇಶ್ವರ್ ನಡುವೆ ಜೋರುಧ್ವನಿಯ ಮಾತುಕತೆಯೂ ನಡೆಯಿತು. ಜತೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಎತ್ತಿನಹೊಳೆ ಕಾಮಗಾರಿ ಇದುವರೆಗೆ ನಡೆಯಲು ಈ ಹಿಂದೆ ಅಧಿಕಾರದಲ್ಲಿದ್ದ ನಿಮ್ಮ ಸರ್ಕಾರವೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಜಿ.ಪರಮೇಶ್ವರ್ ಅವರನ್ನು ಶ್ಲಾಘಿಸಿದರು.

ಡಾ.ಜಿ.ಪರಮೇಶ್ವರ್‌ ಮೇಕೆದಾಟು ಯೋಜನೆಯ ಕುರಿತು ಪ್ರಸ್ತಾಪವೆತ್ತಿದಾಗ ಅವರಿಗೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮೊದಲು ಯೋಜನೆಗೆ ₹12,900 ಕೋಟಿ ಮೀಸಲಾಗಿತ್ತು. ಆದರೆ ಎರಡು ಕಡೆ ಭೂಮಿಯ ಮೌಲ್ಯದ ಬಗ್ಗೆ ಗೊಂದಲವಿದೆ. ಕೊರಟಗೆರೆ, ದೊಡ್ಡಬಳ್ಳಾಪುರದಲ್ಲಿ ಭೂಮಿಯ ಮೌಲ್ಯದಲ್ಲಿ ವ್ಯತ್ಯಾಸವಿದೆ. ಕೊರಟಗೆರೆ ರೈತರು ವ್ಯತ್ಯಾಸದ ಮೊತ್ತವನ್ನು ಪ್ರಶ್ನಿಸುತ್ತಿದ್ದಾರೆ. ಈಕುರಿತು ನಡೆದ ಸಭೆಯಲ್ಲಿ ಡಾ.ಜಿ.ಪರಮೇಶ್ವರ್ ಕೂಡ ಇದ್ದರು. ಈ ಯೋಜನೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ನೀರು ಲಿಫ್ಟ್, ಸ್ಟೋರೇಜ್ ಸೇರಿ ಎಲ್ಲ ಕಾಮಗಾರಿಗಳೂ ನಡೆಯುತ್ತಿವೆ. ಯೋಜನೆಗೆ 39 ಎಕರೆ ಜಮೀನು ಹೆಚ್ಚುವರಿ ಬೇಕಿದೆ. ಇದರ ಬಗ್ಗೆ ಡಿಸಿ, ಸ್ವಾಧೀನಾಧಿಕಾರಿಗೆ ತಿಳಿಸಿದ್ದು, ಈಕುರಿತು ಚರ್ಚಿಸುತ್ತೇವೆ. ಇವತ್ತು ಇದರ ಬಗ್ಗೆ ಚರ್ಚೆ ಮಾಡುತ್ತೇವೆ. ಮೊದಲ ಹಂತದ ಕಾಮಗಾರಿ ಮುಗಿದಿದೆ. ಟ್ರಯಲ್‌ರನ್ ಮಾಡಲು ಪ್ರಯತ್ನ ನಡೆಸಿದ್ದೇವೆ. ಇದನ್ನು ಮುಗಿಸುವ ಕೆಲಸ ಮಾಡುತ್ತೇವೆ. ಈ ಯೋಜನೆ ವೆಚ್ಚ ₹26 ಸಾವಿರ ಕೋಟಿ ಹೋಗಿದೆ. ಇಲ್ಲಿಯವರೆಗೆ ಕಾಮಗಾರಿ ನಡೆಯಲು ಈ ಹಿಂದೆ ಇದ್ದ ನೀವು ಕಾರಣ ಎಂದು ಶ್ಲಾಘನೆಯನ್ನೂ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಶಾಸಕ ಪರಮೇಶ್ವರ್ ಮತ್ತು ಸಚಿವ ಮಾಧುಸ್ವಾಮಿ ನಡುವೆ ಏರುಧ್ವನಿಯ ಜಟಾಪಟಿ ನಡೆಯಿತು. ಯೋಜನೆಯನ್ನೇ ರಿಜೆಕ್ಟ್ ಮಾಡ್ತೇವೆ ಅಂದರೆ ಹೇಗೆ? 12,900 ಕೋಟಿಯಲ್ಲಿ ಯೋಜನೆ ಮುಗಿಸಬಹುದು, ಯೋಜನೆಗೆ26 ಸಾವಿರ ಕೋಟಿ ಹೆಚ್ಚುವರಿ ಯಾಕೆ? ನಿಮಗೆ ಇಚ್ಚಾಶಕ್ತಿಯಿದ್ದರೆ ಯೋಜನೆ ಮಾಡಬಹುದು ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಪರಮೇಶ್ವರ್ ಗರಂ ಆದರು.

ಯೋಜನೆಗೆ ನಾವು ಅವಕಾಶ ಕೊಟ್ಟಿದ್ದೇವೆ, ಹಣವಿಲ್ಲದಿದ್ರೂ ರೈತರನ್ನು ನಾವು ಒಪ್ಪಿಸಿದ್ದೇವೆ. ಯೋಜನೆ ಕಾಮಗಾರಿಗೆ ಅನುವು ಮಾಡಿದ್ದೇವೆ. ಆದರೆ ಕೊರಟಗೆರೆಯಲ್ಲಿ‌ಸಮಸ್ಯೆ ಶುರುವಾಗಿದೆ.  ಹಾಗಾಗಿ ಯೋಜನೆಗೆ ತೊಡಕಾಗುತ್ತಿದೆ ಎಂದು ಪರಮೇಶ್ವರ್ ಹೇಳಿಕೆಗೆ ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದರು.

ಯೋಜನೆ ಕಾಮಗಾರಿ ನಡೆಯುತ್ತಿದೆ. ಯೋಜನೆ ಕಾರ್ಯಗತಕ್ಕೆ ಹತ್ತಿರ ಬಂದಾಗ ನಿಂತಿದೆ. ಕೇವಲ 400 ಕೋಟಿ ರೂ. ನೀಡಲು ಸಬೂಬು ಏಕೆ? ರೈತರ ಭೂ ಸ್ವಾಧೀನಕ್ಕೆ ಹಣ ನೀಡಲು ಯಾಕೆ ತಡೆ? ಎಲ್ಲವೂ ಆಗಿದೆ, ಮೊದಲು ಅದನ್ನು ಸರಿಪಡಿಸಿ ಎಂದು ವಿಧಾನಸಭೆಯಲ್ಲಿ ಶಾಸಕ ರಮೇಶ್‌ಕುಮಾರ್ ಸಹ ಆಗ್ರಹಿಸಿದರು.

ಇದನ್ನೂ ಓದಿ: 

ಎಂಟು ವರ್ಷ ಕಳೆದರೂ ಮುಗಿಯದ ಎತ್ತಿನಹೊಳೆ ಕಾಮಗಾರಿ; 23 ಸಾವಿರ ಕೋಟಿ ರೂ. ತಲುಪಿದ ಯೋಜನೆಯ ವೆಚ್ಚ

(Karnataka Assembly Session Live Discussion on Yettinahole Project)

Published On - 3:01 pm, Tue, 14 September 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್