AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭಾ ಕಲಾಪದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಸ್ತಾಪ; ಬಿಸಿಬಿಸಿ ಚರ್ಚೆ, ವಿರೋಧ ಪಕ್ಷಕ್ಕೆ ಶ್ಲಾಘನೆ

12,900 ಕೋಟಿಯಲ್ಲಿ ಯೋಜನೆ ಮುಗಿಸಬಹುದು, ಯೋಜನೆಗೆ26 ಸಾವಿರ ಕೋಟಿ ಹೆಚ್ಚುವರಿ ಯಾಕೆ? ನಿಮಗೆ ಇಚ್ಚಾಶಕ್ತಿಯಿದ್ದರೆ ಯೋಜನೆ ಮಾಡಬಹುದು ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಪರಮೇಶ್ವರ್ ಗರಂ ಆದರು.

ವಿಧಾನಸಭಾ ಕಲಾಪದಲ್ಲಿ ಎತ್ತಿನಹೊಳೆ ಯೋಜನೆಯ ಪ್ರಸ್ತಾಪ; ಬಿಸಿಬಿಸಿ ಚರ್ಚೆ, ವಿರೋಧ ಪಕ್ಷಕ್ಕೆ ಶ್ಲಾಘನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 14, 2021 | 3:14 PM

Share

ಬೆಂಗಳೂರು: ವಿಧಾನಸಭಾ ಅಧಿವೇಶನಲ್ಲಿ ಎತ್ತಿನಹೊಳೆ ಮತ್ತು ಮೇಕೆದಾಟು ಯೋಜನೆಗಳ ಪ್ರಸ್ತಾಪಗೊಂಡವು. ಎತ್ತಿನಹೊಳೆ ಯೋಜನೆಯ ಅನುಷ್ಠಾನದ ಬಗ್ಗೆ ಸಚಿವ ಮಾಧುಸ್ವಾಮಿ ಮತ್ತು ಡಾ.ಜಿ.ಪರಮೇಶ್ವರ್ ನಡುವೆ ಜೋರುಧ್ವನಿಯ ಮಾತುಕತೆಯೂ ನಡೆಯಿತು. ಜತೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಎತ್ತಿನಹೊಳೆ ಕಾಮಗಾರಿ ಇದುವರೆಗೆ ನಡೆಯಲು ಈ ಹಿಂದೆ ಅಧಿಕಾರದಲ್ಲಿದ್ದ ನಿಮ್ಮ ಸರ್ಕಾರವೇ ಕಾರಣ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಜಿ.ಪರಮೇಶ್ವರ್ ಅವರನ್ನು ಶ್ಲಾಘಿಸಿದರು.

ಡಾ.ಜಿ.ಪರಮೇಶ್ವರ್‌ ಮೇಕೆದಾಟು ಯೋಜನೆಯ ಕುರಿತು ಪ್ರಸ್ತಾಪವೆತ್ತಿದಾಗ ಅವರಿಗೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮೊದಲು ಯೋಜನೆಗೆ ₹12,900 ಕೋಟಿ ಮೀಸಲಾಗಿತ್ತು. ಆದರೆ ಎರಡು ಕಡೆ ಭೂಮಿಯ ಮೌಲ್ಯದ ಬಗ್ಗೆ ಗೊಂದಲವಿದೆ. ಕೊರಟಗೆರೆ, ದೊಡ್ಡಬಳ್ಳಾಪುರದಲ್ಲಿ ಭೂಮಿಯ ಮೌಲ್ಯದಲ್ಲಿ ವ್ಯತ್ಯಾಸವಿದೆ. ಕೊರಟಗೆರೆ ರೈತರು ವ್ಯತ್ಯಾಸದ ಮೊತ್ತವನ್ನು ಪ್ರಶ್ನಿಸುತ್ತಿದ್ದಾರೆ. ಈಕುರಿತು ನಡೆದ ಸಭೆಯಲ್ಲಿ ಡಾ.ಜಿ.ಪರಮೇಶ್ವರ್ ಕೂಡ ಇದ್ದರು. ಈ ಯೋಜನೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ನೀರು ಲಿಫ್ಟ್, ಸ್ಟೋರೇಜ್ ಸೇರಿ ಎಲ್ಲ ಕಾಮಗಾರಿಗಳೂ ನಡೆಯುತ್ತಿವೆ. ಯೋಜನೆಗೆ 39 ಎಕರೆ ಜಮೀನು ಹೆಚ್ಚುವರಿ ಬೇಕಿದೆ. ಇದರ ಬಗ್ಗೆ ಡಿಸಿ, ಸ್ವಾಧೀನಾಧಿಕಾರಿಗೆ ತಿಳಿಸಿದ್ದು, ಈಕುರಿತು ಚರ್ಚಿಸುತ್ತೇವೆ. ಇವತ್ತು ಇದರ ಬಗ್ಗೆ ಚರ್ಚೆ ಮಾಡುತ್ತೇವೆ. ಮೊದಲ ಹಂತದ ಕಾಮಗಾರಿ ಮುಗಿದಿದೆ. ಟ್ರಯಲ್‌ರನ್ ಮಾಡಲು ಪ್ರಯತ್ನ ನಡೆಸಿದ್ದೇವೆ. ಇದನ್ನು ಮುಗಿಸುವ ಕೆಲಸ ಮಾಡುತ್ತೇವೆ. ಈ ಯೋಜನೆ ವೆಚ್ಚ ₹26 ಸಾವಿರ ಕೋಟಿ ಹೋಗಿದೆ. ಇಲ್ಲಿಯವರೆಗೆ ಕಾಮಗಾರಿ ನಡೆಯಲು ಈ ಹಿಂದೆ ಇದ್ದ ನೀವು ಕಾರಣ ಎಂದು ಶ್ಲಾಘನೆಯನ್ನೂ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಶಾಸಕ ಪರಮೇಶ್ವರ್ ಮತ್ತು ಸಚಿವ ಮಾಧುಸ್ವಾಮಿ ನಡುವೆ ಏರುಧ್ವನಿಯ ಜಟಾಪಟಿ ನಡೆಯಿತು. ಯೋಜನೆಯನ್ನೇ ರಿಜೆಕ್ಟ್ ಮಾಡ್ತೇವೆ ಅಂದರೆ ಹೇಗೆ? 12,900 ಕೋಟಿಯಲ್ಲಿ ಯೋಜನೆ ಮುಗಿಸಬಹುದು, ಯೋಜನೆಗೆ26 ಸಾವಿರ ಕೋಟಿ ಹೆಚ್ಚುವರಿ ಯಾಕೆ? ನಿಮಗೆ ಇಚ್ಚಾಶಕ್ತಿಯಿದ್ದರೆ ಯೋಜನೆ ಮಾಡಬಹುದು ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಪರಮೇಶ್ವರ್ ಗರಂ ಆದರು.

ಯೋಜನೆಗೆ ನಾವು ಅವಕಾಶ ಕೊಟ್ಟಿದ್ದೇವೆ, ಹಣವಿಲ್ಲದಿದ್ರೂ ರೈತರನ್ನು ನಾವು ಒಪ್ಪಿಸಿದ್ದೇವೆ. ಯೋಜನೆ ಕಾಮಗಾರಿಗೆ ಅನುವು ಮಾಡಿದ್ದೇವೆ. ಆದರೆ ಕೊರಟಗೆರೆಯಲ್ಲಿ‌ಸಮಸ್ಯೆ ಶುರುವಾಗಿದೆ.  ಹಾಗಾಗಿ ಯೋಜನೆಗೆ ತೊಡಕಾಗುತ್ತಿದೆ ಎಂದು ಪರಮೇಶ್ವರ್ ಹೇಳಿಕೆಗೆ ಸಚಿವ ಮಾಧುಸ್ವಾಮಿ ತಿರುಗೇಟು ನೀಡಿದರು.

ಯೋಜನೆ ಕಾಮಗಾರಿ ನಡೆಯುತ್ತಿದೆ. ಯೋಜನೆ ಕಾರ್ಯಗತಕ್ಕೆ ಹತ್ತಿರ ಬಂದಾಗ ನಿಂತಿದೆ. ಕೇವಲ 400 ಕೋಟಿ ರೂ. ನೀಡಲು ಸಬೂಬು ಏಕೆ? ರೈತರ ಭೂ ಸ್ವಾಧೀನಕ್ಕೆ ಹಣ ನೀಡಲು ಯಾಕೆ ತಡೆ? ಎಲ್ಲವೂ ಆಗಿದೆ, ಮೊದಲು ಅದನ್ನು ಸರಿಪಡಿಸಿ ಎಂದು ವಿಧಾನಸಭೆಯಲ್ಲಿ ಶಾಸಕ ರಮೇಶ್‌ಕುಮಾರ್ ಸಹ ಆಗ್ರಹಿಸಿದರು.

ಇದನ್ನೂ ಓದಿ: 

ಎಂಟು ವರ್ಷ ಕಳೆದರೂ ಮುಗಿಯದ ಎತ್ತಿನಹೊಳೆ ಕಾಮಗಾರಿ; 23 ಸಾವಿರ ಕೋಟಿ ರೂ. ತಲುಪಿದ ಯೋಜನೆಯ ವೆಚ್ಚ

(Karnataka Assembly Session Live Discussion on Yettinahole Project)

Published On - 3:01 pm, Tue, 14 September 21

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ