AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 21 ರಿಂದ 3 ದಿನ ವಿಧಾನಮಂಡಲದ ವಿಶೇಷ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಕುರಿತಷ್ಟೇ ವಿಸ್ತೃತ ಚರ್ಚೆ ಎಂದ ಸರ್ಕಾರ

ರಾಜ್ಯದಲ್ಲಿ ಭೀಕರ ಬರಗಾಲ, ಜಾನುವಾರುಗಳ ಮೇವಿನ ಕೊರತೆ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ವಿಧಾನಮಂಡಲದ ವಿಶೇಷ ಅಧಿವೇಶನ ನಡೆಯಲಿದೆ. ಪ್ರಶ್ನೋತ್ತರ ಕಲಾಪವಿಲ್ಲದೆ ಅಧಿವೇಶನ ನಡೆಯಲಿದೆ ಎಂದು ಸರ್ಕಾರ ಹೇಳಿದ್ದು, ಕಸ್ತೂರಿ ರಂಗನ್ ವರದಿಗೆ ವಿರೋಧವಾಗಿ ಕೇಂದ್ರಕ್ಕೆ ಒಮ್ಮತದ ನಿರ್ಣಯ ಕಳುಹಿಸಲು ಯೋಜಿಸಿದೆ.

ಸೆಪ್ಟೆಂಬರ್ 21 ರಿಂದ 3 ದಿನ ವಿಧಾನಮಂಡಲದ ವಿಶೇಷ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಕುರಿತಷ್ಟೇ ವಿಸ್ತೃತ ಚರ್ಚೆ ಎಂದ ಸರ್ಕಾರ
ಕರ್ನಾಟಕ ವಿಧಾನಸಭೆ ಅಧಿವೇಶನ (ಸಂಗ್ರಹ ಚಿತ್ರ)Image Credit source: tv9
ಹರೀಶ್ ಜಿ.ಆರ್​.
| Edited By: |

Updated on: Sep 15, 2026 | 6:45 AM

Share

ಬೆಂಗಳೂರು, ಸೆಪ್ಟೆಂಬರ್ 15: ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21 ರಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ತೀರ್ಮಾನಿಸಿದೆ. ಯಾವುದೇ ಪ್ರಶ್ನೋತ್ತರ ಕಲಾಪವಿಲ್ಲದೆ ಕೇವಲ ಪ್ರಮುಖ ರೈತ ಮತ್ತು ರಾಜ್ಯದ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ಈ ಅಧಿವೇಶನ ಮೀಸಲಿರಲಿದೆ. ಮಳೆಗಾಲದ ಅಧಿವೇಶನ ಯಾವುದೇ ಚರ್ಚೆಯಿಲ್ಲದೆ, ಪ್ರತಿಪಕ್ಷಗಳ ಪ್ರತಿಭಟನೆಯಲ್ಲೇ ತೊಳೆದುಹೋಗಿತ್ತು. ಹೀಗಾಗಿ ರಾಜ್ಯದಲ್ಲಿ ಎದುರಾಗಿರುವ ಭೀಕರ ಬರ ಪರಿಸ್ಥಿತಿ, ಜಾನುವಾರುಗಳ ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಚರ್ಚಿಸಲು ಸರ್ಕಾರ ಸೆಪ್ಟೆಂಬರ್ 21, 22 ಮತ್ತು 23 ರಂದು ವಿಶೇಷ ಅಧಿವೇಶನ ಕರೆದಿದೆ. ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿರುವ ತಾಲೂಕುಗಳ ಸ್ಥಿತಿಗತಿ ಹಾಗೂ ಕೇಂದ್ರದಿಂದ ಬರಬೇಕಾದ ಅನುದಾನದ ಬಗ್ಗೆ ಸದನದಲ್ಲಿ ವಿಸ್ತೃತವಾಗಿ ಸಂವಾದ ನಡೆಯಲಿದೆ.

ವಿಶೇಷ ಅಧಿವೇಶನದ ಪ್ರಮುಖ ಅಜೆಂಡಾಗಳು

  • 101 ತಾಲೂಕುಗಳಲ್ಲಿ ತೀವ್ರ ಬರ: ಕುಡಿಯುವ ನೀರು ಹಾಗೂ ಮೇವಿನ ಬಿಕ್ಕಟ್ಟಿನ ಬಗ್ಗೆ ಚರ್ಚೆ.
  • ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ವಲಯದ ಜನರ ಹಿತರಕ್ಷಣೆಗಾಗಿ ಜಂಟಿ ವಿರೋಧ ನಿರ್ಣಯ.
  • ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಇದನ್ನು ಈ ಹಿಂದೆಯೇ ತಿರಸ್ಕರಿಸಿರುವ ರಾಜ್ಯ ಸರ್ಕಾರ.
  • ತೋಟಗಾರಿಕೆ ಫಾರ್ಮ್‌ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕದ ಬಗ್ಗೆ ಸ್ಪಷ್ಟನೆ.
  • ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮರುಪರಿಶೀಲನೆಗೆ ಒತ್ತಾಯ.

ಕಸ್ತೂರಿ ರಂಗನ್ ವರದಿ: ಕೇಂದ್ರಕ್ಕೆ ಒಮ್ಮತದ ವಿರೋಧ ನಿರ್ಣಯ ಕಳುಹಿಸಲು ಯೋಜನೆ

ಕಸ್ತೂರಿ ರಂಗನ್ ವರದಿಯಡಿ ಪಶ್ಚಿಮ ಘಟ್ಟದ ಶೇ 37 ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ಇದನ್ನು ಈ ಹಿಂದೆಯೇ ತಿರಸ್ಕರಿಸಿರುವ ರಾಜ್ಯ ಸರ್ಕಾರ, ಈ ಅಧಿವೇಶನದಲ್ಲಿ ಪಶ್ಚಿಮ ಘಟ್ಟ ವ್ಯಾಪ್ತಿಯ ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು, ಕೃಷಿ ಹಾಗೂ ಮೂಲಸೌಕರ್ಯಕ್ಕೆ ಧಕ್ಕೆಯಾಗದಂತೆ ಕೇಂದ್ರಕ್ಕೆ ಜಂಟಿ ಸದನದ ಮೂಲಕ ಒಮ್ಮತದ ವಿರೋಧ ನಿರ್ಣಯ ಕಳುಹಿಸಲು ಯೋಜಿಸಿದೆ.

ವಿಶೇಷ ಅಧಿವೇಶನದ ಬಗ್ಗೆ ಸಿಎಂ, ಡಿಸಿಎಂ ಹೇಳಿದ್ದೇನು?

ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳ ಗದ್ದಲದಿಂದ ಬರಗಾಲದ ಚರ್ಚೆ ನಡೆದಿರಲಿಲ್ಲ, ಹೀಗಾಗಿ ಈ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ರೈತರ ಸದ್ಯದ ಬದುಕಿನ ಸವಾಲುಗಳ ಬಗ್ಗೆ ಚರ್ಚಿಸಲೇ ಈ ಅಧಿವೇಶನ ಮೀಸಲು ಮೀಸಲಾಗಿದೆ ಎಂದು ಡಿಸಿಎಂ ಪರಮೇಶ್ವರ ಹೇಳಿದ್ದಾರೆ.

ಪ್ರತಿಪಕ್ಷಗಳು ಹೇಳುವುದೇನು?

ವಿದ್ಯುತ್ ಅಭಾವ, ಮೋಡ ಬಿತ್ತನೆ ವೈಫಲ್ಯದ ಬಗ್ಗೆ ಅಧಿವೇಶನದಲ್ಲಿ ತರಾಟೆಗೆ ತೆಗೆದುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅಧಿವೇಶನ ಯಾವ ರೀತಿ ಇರಲಿದೆ ಎಂಬ ಮುನ್ಸೂಚನೆ ನೀಡಿದ್ದಾರೆ. ಇನ್ನೊಂದೆಡೆ, ರಾಜ್ಯದಲ್ಲಿನ ವಿದ್ಯುತ್ ಅಭಾವ, 28 ಕೋಟಿ ರೂ. ವೆಚ್ಚದ ಮೋಡ ಬಿತ್ತನೆ ಯೋಜನೆಯ ವೈಫಲ್ಯ ಹಾಗೂ ಬಿಡದಿ ಟೌನ್ ಶಿಫ್, ನೈಸ್ ಟೋಲ್ ವಿಚಾರಗಳನ್ನು ಎತ್ತಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ.

LIVE TV

ವಾಲ್ಮೀಕಿ ನಿಗಮದ ಅಕ್ರಮದ ಗದ್ದಲದಿಂದಾಗಿ ಹಿಂದಿನ ಅಧಿವೇಶನ ಅವಧಿಗಿಂತ ಮುಂಚಿತವಾಗಿಯೇ ಮುಕ್ತಾಯಗೊಂಡಿತ್ತು. ಇದೀಗ ಸಿಕ್ಕಿರುವ ಈ ಮೂರು ದಿನಗಳ ವಿಶೇಷ ಅಧಿವೇಶನದಲ್ಲಾದರೂ ರೈತರ ನೈಜ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗುತ್ತದೆಯೇ ಎಂದು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ