ಡಾ. ಸರೋಜಿನಿ ಮಹಿಷಿ ‌ವರದಿ‌: ಱಲಿ ವೇಳೆ ತಟ್ಟಲಿದೆ ಟ್ರಾಫಿಕ್ ಜಾಮ್ ಸಮಸ್ಯೆ

ಬೆಂಗಳೂರು: ಡಾ. ಸರೋಜಿನಿ ಮಹಿಷಿ ‌ವರದಿ‌ ಜಾರಿ ಮಾಡುವಂತೆ ಒತ್ತಾಯಿಸಿ ಇಂದು 10 ಗಂಟೆಗೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಹೋರಾಟಗಾರರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ‌ರೈಲು‌ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಸುಮಾರು 11 ಗಂಟೆಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ರ್ಯಾಲಿ ‌ಆರಂಭವಾಗಲಿದೆ. 11:30 ಕ್ಕೆ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ, 12 ಗಂಟೆಗೆ ಆನಂದ್ ರಾವ್ ಸರ್ಕಲ್​ಗೆ ಆಗಮಿಸಿ. 12 :30 ಕ್ಕೆ ಆನಂದ್ ರಾವ್ ಸರ್ಕಲ್ ಪ್ಲೈ-ಓವರ್​ಗೆ ತಲುಪಲಿದ್ದಾರೆ. […]

ಡಾ. ಸರೋಜಿನಿ ಮಹಿಷಿ ‌ವರದಿ‌: ಱಲಿ ವೇಳೆ ತಟ್ಟಲಿದೆ ಟ್ರಾಫಿಕ್ ಜಾಮ್ ಸಮಸ್ಯೆ
ಸಾಧು ಶ್ರೀನಾಥ್​

Updated on: Feb 13, 2020 | 10:11 AM

ಬೆಂಗಳೂರು: ಡಾ. ಸರೋಜಿನಿ ಮಹಿಷಿ ‌ವರದಿ‌ ಜಾರಿ ಮಾಡುವಂತೆ ಒತ್ತಾಯಿಸಿ ಇಂದು 10 ಗಂಟೆಗೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಹೋರಾಟಗಾರರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ‌ರೈಲು‌ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ಸುಮಾರು 11 ಗಂಟೆಗೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರತಿಭಟನಾ ರ್ಯಾಲಿ ‌ಆರಂಭವಾಗಲಿದೆ.

11:30 ಕ್ಕೆ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ, 12 ಗಂಟೆಗೆ ಆನಂದ್ ರಾವ್ ಸರ್ಕಲ್​ಗೆ ಆಗಮಿಸಿ. 12 :30 ಕ್ಕೆ ಆನಂದ್ ರಾವ್ ಸರ್ಕಲ್ ಪ್ಲೈ-ಓವರ್​ಗೆ ತಲುಪಲಿದ್ದಾರೆ. 1 ಗಂಟೆಗೆ ಫ್ರೀಡಂ ಪಾರ್ಕ್​ಗೆ ಬಂದು ಸುಮಾರು ‌2ಗಂಟೆವರೆಗೂ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಲಿದ್ದಾರೆ. ಸರ್ಕಾರಕ್ಕೆ ವರದಿ ಜಾರಿಗೆ ಒತ್ತಾಯಿಸಿ ಮನವಿ ಮಾಡಲು ಹೋರಾಟದ ಪ್ರತಿಭಟನೆ ನಡೆಯಲಿದೆ.

ವಾಹನ ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಬಿಸಿ:
ಕನ್ನಡಪರ ಸಂಘಟನೆಗಳಿಂದ ಬೃಹತ್ ಱಲಿ ಹಮ್ಮಿಕೊಂಡಿರುವುದರಿಂದಾಗಿ ಕೆಎಸ್‌ಆರ್‌ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್‌ಗೆ ಱಲಿ ನಡೆಯುವ ವೇಳೆ ಹಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಾಗುವ ಸಾಧ್ಯತೆ ಹೆಚ್ಚಿದೆ. ಮೆಜೆಸ್ಟಿಕ್, ಕೆ.ಜಿ.ರಸ್ತೆ, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ರಸ್ತೆ, ಆನಂದ್‌ರಾವ್ ಸರ್ಕಲ್, ರೇಸ್ ಕೋರ್ಸ್ ರೋಡ್, K.R.ಸರ್ಕಲ್ ಸಂಪರ್ಕಿಸುವ ರಸ್ತೆ, ಕಾರ್ಪೊರೇಷನ್ ‌ಸರ್ಕಲ್, ಫ್ರೀಡಂಪಾರ್ಕ್‌ ‌ರಸ್ತೆಯಲ್ಲಿ ಟ್ರಾಫಿಕ್ ‌ಜಾಮ್ ಉಂಟಾಗಲಿದೆ.

Published On - 10:07 am, Thu, 13 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us