AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋ ಟೆನ್ಷನ್, ನಾಳೆ ಬಂದ್‌ ಇದ್ರೂ ಬಹುತೇಕ ಸೇವೆಗಳು ಲಭ್ಯ.. ಏನಿರುತ್ತೆ? ಏನಿರಲ್ಲ

ಬೆಂಗಳೂರು: ಅಯ್ಯೋ ಲಾಕ್‌ಡೌನ್‌ನಿಂದ ಜೀವನ ಅಯೋಮಯವಾಗಿದೆ. ಈಗ ಮತ್ತೆ ಬಂದ್.. ಸೋಮವಾರ ಅಂದ್ರೆ ನಾಳೆ ಏನಾದ್ರೂ ಪ್ಲಾನ್ ಮಾಡಿಕೊಂಡಿದ್ರೆ, ಅದರಲ್ಲಿ ಸ್ವಲ್ಪ ವ್ಯತ್ಯಯ ಆಗಲಿದೆ. ಹಾಗಿದ್ರೆ ನಾಳೆ ಯಾವೆಲ್ಲಾ ಸೇವೆ ಇರುತ್ತೆ, ಏನ್ ಇರಲ್ಲ ಅಂತ ನೋಡೋದಾದ್ರೆ. ಬಂದ್ ಬಂದ್‌ ಬಂದ್‌.. ನಾಳೆ ಕರುನಾಡು ಬಂದ್ ಆಗಲಿದೆ. ಸರ್ಕಾರದ ವಿರುದ್ಧ ರೈತರು ರೊಚ್ಚಿಗೆದ್ದು ನಾಳೆ ರಾಜ್ಯ ಬಂದ್ ಮಾಡೋಕೆ ಹೊರಟಿದ್ದಾರೆ. ಇದರ ನಡುವೆ ಕೊರೊನಾದಿಂದ ಕಂಗೆಟ್ಟ ಜನಕ್ಕೆ ನಾಳೆ ಏನು ಇರುತ್ತೆ. ಏನು ಇರಲ್ಲ ಅನ್ನೋ ಟೆಕ್ಷನ್ […]

ನೋ ಟೆನ್ಷನ್, ನಾಳೆ ಬಂದ್‌ ಇದ್ರೂ ಬಹುತೇಕ ಸೇವೆಗಳು ಲಭ್ಯ.. ಏನಿರುತ್ತೆ? ಏನಿರಲ್ಲ
ಆಯೇಷಾ ಬಾನು
|

Updated on: Sep 27, 2020 | 7:22 AM

Share

ಬೆಂಗಳೂರು: ಅಯ್ಯೋ ಲಾಕ್‌ಡೌನ್‌ನಿಂದ ಜೀವನ ಅಯೋಮಯವಾಗಿದೆ. ಈಗ ಮತ್ತೆ ಬಂದ್.. ಸೋಮವಾರ ಅಂದ್ರೆ ನಾಳೆ ಏನಾದ್ರೂ ಪ್ಲಾನ್ ಮಾಡಿಕೊಂಡಿದ್ರೆ, ಅದರಲ್ಲಿ ಸ್ವಲ್ಪ ವ್ಯತ್ಯಯ ಆಗಲಿದೆ. ಹಾಗಿದ್ರೆ ನಾಳೆ ಯಾವೆಲ್ಲಾ ಸೇವೆ ಇರುತ್ತೆ, ಏನ್ ಇರಲ್ಲ ಅಂತ ನೋಡೋದಾದ್ರೆ.

ಬಂದ್ ಬಂದ್‌ ಬಂದ್‌.. ನಾಳೆ ಕರುನಾಡು ಬಂದ್ ಆಗಲಿದೆ. ಸರ್ಕಾರದ ವಿರುದ್ಧ ರೈತರು ರೊಚ್ಚಿಗೆದ್ದು ನಾಳೆ ರಾಜ್ಯ ಬಂದ್ ಮಾಡೋಕೆ ಹೊರಟಿದ್ದಾರೆ. ಇದರ ನಡುವೆ ಕೊರೊನಾದಿಂದ ಕಂಗೆಟ್ಟ ಜನಕ್ಕೆ ನಾಳೆ ಏನು ಇರುತ್ತೆ. ಏನು ಇರಲ್ಲ ಅನ್ನೋ ಟೆಕ್ಷನ್ ಶುರುವಾಗಿದೆ. ಬಂದ್ ಆದ್ರೆ, ಹೆಂಗಪ್ಪ ಅನ್ನೋ ಚಿಂತೆ ಜನರನ್ನ ಕಾಡ್ತಿದೆ.

ಸಾರಿಗೆ ಸಂಚಾರ ಸೇರಿ ಲಭ್ಯವಿರುತ್ತೆ ಅಗತ್ಯ ಸೇವೆ! ಶುಕ್ರವಾರ ಹೆದ್ದಾರಿ ತಡೆದು ಆಕ್ರೋಶ ಹೊರ ಹಾಕಿದ ಅನ್ನದಾತರು ನಾಳೆ ಕರ್ನಾಟಕ ಬಂದ್‌ಗೆ ಮುಂದಾಗಿದ್ದಾರೆ. ಈ ಬಂದ್‌ಗೆ ಕೆಲ ಸಂಘಟನೆಗಳು ಕೇವಲ ನೈತಿಕ ಬೆಂಬಲ ನೀಡಲು ಮುಂದಾಗಿವೆ. ಅರ್ಥಾತ್, ಬಂದ್​ಗೆ ಬೆಂಬಲ ಇರುತ್ತೆ. ಆದ್ರೆ ಬಂದ್ ಮಾಡೋದಿಲ್ಲ. ಹೀಗಾಗಿ ಅಗತ್ಯ ಸೇವೆಗಳಿಗೆ ಯಾವುದೇ ತೊಂದ್ರೆ ಆಗಲ್ಲ. ಅಷ್ಟಕ್ಕೂ ಒಂದ್ವೇಳೆ ಬಂದ್ ಆದ್ರೂ ಏನೆಲ್ಲ ಓಪನ್ ಇರುತ್ತೆ ಅನ್ನೋದನ್ನ ನೋಡೋಣ ಬನ್ನಿ,

ನಾಳೆ ಕರ್ನಾಟಕ ಬಂದ್ ಏನಿರುತ್ತೆ? ಹಾಲು, ಪೇಪರ್, ಹಣ್ಣು, ತರಕಾರಿ ಎಂದಿನಂತೆ ನಾಳೆಯೂ ಇರಲಿದೆ. ಆಸ್ಪತ್ರೆ, ಮೆಡಿಕಲ್ ಸೇವೆಗಳಿಗೆ ಯಾವುದೇ ಅಡಚಣೆಯಾಗಲ್ಲ. ಪೆಟ್ರೋಲ್ ಬಂಕ್‌ ಮಾಲೀಕರು ನೈತಿಕವಾಗಿ ಬಂದ್‌ಗೆ ಬೆಂಬಲ ನೀಡಿರೋದ್ರಿಂದ ಪೆಟ್ರೋಲ್ ಬಂಕ್ ಓಪನ್ ಇರುತ್ತೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಮೆಟ್ರೋ, ವಿಮಾನ, ರೈಲು ಸಂಚಾರ ಬಂದ್ ಆಗೋದಿಲ್ಲ. ರಾಜ್ಯ ಸರ್ಕಾರಿ ಸಾರಿಗೆ ನೌಕರರ ಸಂಘ ನೈತಿಕ ಬೆಂಬಲವನ್ನಷ್ಟೇ ನೀಡಿದ್ದು, ಎಂದಿನಂತೆ ಬಸ್ ಸಂಚಾರ ಇರಲಿದೆ. . ಹೋಟೆಲ್ ಮಾಲೀಕರು ಸಹ ನೈತಿಕ ಬೆಂಬಲ ನೀಡಿದ್ದು, ಶುಕ್ರವಾರ ಹೋಟೆಲ್ ಸೇವೆ ಇರುತ್ತೆ ಅಂದಿದ್ದಾರೆ. ಮದ್ಯದ ಅಂಗಡಿ ಮಾಲೀಕರು ನೈತಿಕ ಬೆಂಬಲ ನೀಡಿದ್ದು, ಎಲ್ಲಾ ಮದ್ಯದ ಅಂಗಡಿಗಳು ಓಪನ್ ಇರುತ್ತೆ.

ನಾಳೆ ಬಂದ್‌ವೇಳೆ ಏನಿರಲ್ಲ? ನಾಳೆ ಓಲಾ-ಉಬರ್ ಸೇವೆ ಸಿಗೋದು ಬಹುತೇಕ ಅನುಮಾನವಾಗಿದೆ. ಇದೇ ರೀತಿ ಆಟೋ-ಟ್ಯಾಕ್ಸಿಗಳು ಸಹ ರಸ್ತೆಗಿಳಿಯೋದು ಡೌಟ್. ಖಾಸಗಿ ಬಸ್​ ಸೇವೆ ನಾಳೆ ಬಂದ್ ಆಗುವ ಸಾಧ್ಯತೆ ಇದೆ.

ಒಟ್ನಲ್ಲಿ ನಾಳೆ ಕರ್ನಾಟಕ ಬಂದ್ ಎಂದು ಹೇಳುತ್ತಿದ್ದರು ಬಹುತೇಕ ಎಲ್ಲಾ ಓಪನ್ ಇರಲಿದೆ. ಮೊದಲೇ ಕೊರೊನಾ ಲಾಕ್‌ಡೌನ್‌ನಿಂದ ವ್ಯಾಪಾರಸ್ಥರು ಕಂಗೆಟ್ಟು ಹೋಗಿದ್ದು, ಮತ್ತೆ ಬಾಗಿಲು ಹಾಕಿದ್ರೆ ಜೀವನ ನಡೆಯಲ್ಲ ಅನ್ನೋದು ಗೊತ್ತಾಗಿದೆ. ಹಾಗಾಗಿ ರೈತರಿಗೆ ನೈತಿಕ ಬೆಂಬಲ ನೀಡಿ, ವ್ಯಾಪಾರ ಮಾಡಲು ನಿರ್ಧಾರಿಸಿದ್ದಾರೆ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!