AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋ ಟೆನ್ಷನ್, ನಾಳೆ ಬಂದ್‌ ಇದ್ರೂ ಬಹುತೇಕ ಸೇವೆಗಳು ಲಭ್ಯ.. ಏನಿರುತ್ತೆ? ಏನಿರಲ್ಲ

ಬೆಂಗಳೂರು: ಅಯ್ಯೋ ಲಾಕ್‌ಡೌನ್‌ನಿಂದ ಜೀವನ ಅಯೋಮಯವಾಗಿದೆ. ಈಗ ಮತ್ತೆ ಬಂದ್.. ಸೋಮವಾರ ಅಂದ್ರೆ ನಾಳೆ ಏನಾದ್ರೂ ಪ್ಲಾನ್ ಮಾಡಿಕೊಂಡಿದ್ರೆ, ಅದರಲ್ಲಿ ಸ್ವಲ್ಪ ವ್ಯತ್ಯಯ ಆಗಲಿದೆ. ಹಾಗಿದ್ರೆ ನಾಳೆ ಯಾವೆಲ್ಲಾ ಸೇವೆ ಇರುತ್ತೆ, ಏನ್ ಇರಲ್ಲ ಅಂತ ನೋಡೋದಾದ್ರೆ. ಬಂದ್ ಬಂದ್‌ ಬಂದ್‌.. ನಾಳೆ ಕರುನಾಡು ಬಂದ್ ಆಗಲಿದೆ. ಸರ್ಕಾರದ ವಿರುದ್ಧ ರೈತರು ರೊಚ್ಚಿಗೆದ್ದು ನಾಳೆ ರಾಜ್ಯ ಬಂದ್ ಮಾಡೋಕೆ ಹೊರಟಿದ್ದಾರೆ. ಇದರ ನಡುವೆ ಕೊರೊನಾದಿಂದ ಕಂಗೆಟ್ಟ ಜನಕ್ಕೆ ನಾಳೆ ಏನು ಇರುತ್ತೆ. ಏನು ಇರಲ್ಲ ಅನ್ನೋ ಟೆಕ್ಷನ್ […]

ನೋ ಟೆನ್ಷನ್, ನಾಳೆ ಬಂದ್‌ ಇದ್ರೂ ಬಹುತೇಕ ಸೇವೆಗಳು ಲಭ್ಯ.. ಏನಿರುತ್ತೆ? ಏನಿರಲ್ಲ
ಆಯೇಷಾ ಬಾನು
|

Updated on: Sep 27, 2020 | 7:22 AM

Share

ಬೆಂಗಳೂರು: ಅಯ್ಯೋ ಲಾಕ್‌ಡೌನ್‌ನಿಂದ ಜೀವನ ಅಯೋಮಯವಾಗಿದೆ. ಈಗ ಮತ್ತೆ ಬಂದ್.. ಸೋಮವಾರ ಅಂದ್ರೆ ನಾಳೆ ಏನಾದ್ರೂ ಪ್ಲಾನ್ ಮಾಡಿಕೊಂಡಿದ್ರೆ, ಅದರಲ್ಲಿ ಸ್ವಲ್ಪ ವ್ಯತ್ಯಯ ಆಗಲಿದೆ. ಹಾಗಿದ್ರೆ ನಾಳೆ ಯಾವೆಲ್ಲಾ ಸೇವೆ ಇರುತ್ತೆ, ಏನ್ ಇರಲ್ಲ ಅಂತ ನೋಡೋದಾದ್ರೆ.

ಬಂದ್ ಬಂದ್‌ ಬಂದ್‌.. ನಾಳೆ ಕರುನಾಡು ಬಂದ್ ಆಗಲಿದೆ. ಸರ್ಕಾರದ ವಿರುದ್ಧ ರೈತರು ರೊಚ್ಚಿಗೆದ್ದು ನಾಳೆ ರಾಜ್ಯ ಬಂದ್ ಮಾಡೋಕೆ ಹೊರಟಿದ್ದಾರೆ. ಇದರ ನಡುವೆ ಕೊರೊನಾದಿಂದ ಕಂಗೆಟ್ಟ ಜನಕ್ಕೆ ನಾಳೆ ಏನು ಇರುತ್ತೆ. ಏನು ಇರಲ್ಲ ಅನ್ನೋ ಟೆಕ್ಷನ್ ಶುರುವಾಗಿದೆ. ಬಂದ್ ಆದ್ರೆ, ಹೆಂಗಪ್ಪ ಅನ್ನೋ ಚಿಂತೆ ಜನರನ್ನ ಕಾಡ್ತಿದೆ.

ಸಾರಿಗೆ ಸಂಚಾರ ಸೇರಿ ಲಭ್ಯವಿರುತ್ತೆ ಅಗತ್ಯ ಸೇವೆ! ಶುಕ್ರವಾರ ಹೆದ್ದಾರಿ ತಡೆದು ಆಕ್ರೋಶ ಹೊರ ಹಾಕಿದ ಅನ್ನದಾತರು ನಾಳೆ ಕರ್ನಾಟಕ ಬಂದ್‌ಗೆ ಮುಂದಾಗಿದ್ದಾರೆ. ಈ ಬಂದ್‌ಗೆ ಕೆಲ ಸಂಘಟನೆಗಳು ಕೇವಲ ನೈತಿಕ ಬೆಂಬಲ ನೀಡಲು ಮುಂದಾಗಿವೆ. ಅರ್ಥಾತ್, ಬಂದ್​ಗೆ ಬೆಂಬಲ ಇರುತ್ತೆ. ಆದ್ರೆ ಬಂದ್ ಮಾಡೋದಿಲ್ಲ. ಹೀಗಾಗಿ ಅಗತ್ಯ ಸೇವೆಗಳಿಗೆ ಯಾವುದೇ ತೊಂದ್ರೆ ಆಗಲ್ಲ. ಅಷ್ಟಕ್ಕೂ ಒಂದ್ವೇಳೆ ಬಂದ್ ಆದ್ರೂ ಏನೆಲ್ಲ ಓಪನ್ ಇರುತ್ತೆ ಅನ್ನೋದನ್ನ ನೋಡೋಣ ಬನ್ನಿ,

ನಾಳೆ ಕರ್ನಾಟಕ ಬಂದ್ ಏನಿರುತ್ತೆ? ಹಾಲು, ಪೇಪರ್, ಹಣ್ಣು, ತರಕಾರಿ ಎಂದಿನಂತೆ ನಾಳೆಯೂ ಇರಲಿದೆ. ಆಸ್ಪತ್ರೆ, ಮೆಡಿಕಲ್ ಸೇವೆಗಳಿಗೆ ಯಾವುದೇ ಅಡಚಣೆಯಾಗಲ್ಲ. ಪೆಟ್ರೋಲ್ ಬಂಕ್‌ ಮಾಲೀಕರು ನೈತಿಕವಾಗಿ ಬಂದ್‌ಗೆ ಬೆಂಬಲ ನೀಡಿರೋದ್ರಿಂದ ಪೆಟ್ರೋಲ್ ಬಂಕ್ ಓಪನ್ ಇರುತ್ತೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಮೆಟ್ರೋ, ವಿಮಾನ, ರೈಲು ಸಂಚಾರ ಬಂದ್ ಆಗೋದಿಲ್ಲ. ರಾಜ್ಯ ಸರ್ಕಾರಿ ಸಾರಿಗೆ ನೌಕರರ ಸಂಘ ನೈತಿಕ ಬೆಂಬಲವನ್ನಷ್ಟೇ ನೀಡಿದ್ದು, ಎಂದಿನಂತೆ ಬಸ್ ಸಂಚಾರ ಇರಲಿದೆ. . ಹೋಟೆಲ್ ಮಾಲೀಕರು ಸಹ ನೈತಿಕ ಬೆಂಬಲ ನೀಡಿದ್ದು, ಶುಕ್ರವಾರ ಹೋಟೆಲ್ ಸೇವೆ ಇರುತ್ತೆ ಅಂದಿದ್ದಾರೆ. ಮದ್ಯದ ಅಂಗಡಿ ಮಾಲೀಕರು ನೈತಿಕ ಬೆಂಬಲ ನೀಡಿದ್ದು, ಎಲ್ಲಾ ಮದ್ಯದ ಅಂಗಡಿಗಳು ಓಪನ್ ಇರುತ್ತೆ.

ನಾಳೆ ಬಂದ್‌ವೇಳೆ ಏನಿರಲ್ಲ? ನಾಳೆ ಓಲಾ-ಉಬರ್ ಸೇವೆ ಸಿಗೋದು ಬಹುತೇಕ ಅನುಮಾನವಾಗಿದೆ. ಇದೇ ರೀತಿ ಆಟೋ-ಟ್ಯಾಕ್ಸಿಗಳು ಸಹ ರಸ್ತೆಗಿಳಿಯೋದು ಡೌಟ್. ಖಾಸಗಿ ಬಸ್​ ಸೇವೆ ನಾಳೆ ಬಂದ್ ಆಗುವ ಸಾಧ್ಯತೆ ಇದೆ.

ಒಟ್ನಲ್ಲಿ ನಾಳೆ ಕರ್ನಾಟಕ ಬಂದ್ ಎಂದು ಹೇಳುತ್ತಿದ್ದರು ಬಹುತೇಕ ಎಲ್ಲಾ ಓಪನ್ ಇರಲಿದೆ. ಮೊದಲೇ ಕೊರೊನಾ ಲಾಕ್‌ಡೌನ್‌ನಿಂದ ವ್ಯಾಪಾರಸ್ಥರು ಕಂಗೆಟ್ಟು ಹೋಗಿದ್ದು, ಮತ್ತೆ ಬಾಗಿಲು ಹಾಕಿದ್ರೆ ಜೀವನ ನಡೆಯಲ್ಲ ಅನ್ನೋದು ಗೊತ್ತಾಗಿದೆ. ಹಾಗಾಗಿ ರೈತರಿಗೆ ನೈತಿಕ ಬೆಂಬಲ ನೀಡಿ, ವ್ಯಾಪಾರ ಮಾಡಲು ನಿರ್ಧಾರಿಸಿದ್ದಾರೆ.

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್