AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಕರ್ನಾಟಕ ಬಂದ್​ ಕೈ ಬಿಡುವಂತೆ ವಾಟಾಳ್​ ನಾಗರಾಜ್​ಗೆ ಫೋನ್ ಮಾಡಿದ ಸಿಎಂ ಬೊಮ್ಮಾಯಿ

Karnataka Bandh December 31: ಈ ಬಂದ್​ನಿಂದ ಜನರಿಗೆ ತೊಂದರೆಯಾಗುವುದರಿಂದ ಕರ್ನಾಟಕ ಬಂದ್​ ಕೈಬಿಡಲು ವಾಟಾಳ್ ನಾಗರಾಜ್​ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ದೂರವಾಣಿ ಕರೆ ಮಾಡಿ ಮನವಿ ಮಾಡಿದ್ದಾರೆ.

Karnataka Bandh: ಕರ್ನಾಟಕ ಬಂದ್​ ಕೈ ಬಿಡುವಂತೆ ವಾಟಾಳ್​ ನಾಗರಾಜ್​ಗೆ ಫೋನ್ ಮಾಡಿದ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ- ವಾಟಾಳ್ ನಾಗರಾಜ್
TV9 Web
| Edited By: |

Updated on: Dec 30, 2021 | 5:19 PM

Share

ಬೆಂಗಳೂರು: ಎಂಇಎಸ್​ ಸಂಘಟನೆಯನ್ನು ನಿಷೇಧಿಸಬೇಕು ಎಂದು ಶುಕ್ರವಾರ (ಡಿ. 31) ವಾಟಾಳ್ ನಾಗರಾಜ್ ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ಈ ಬಂದ್​ನಿಂದ ಜನರಿಗೆ ತೊಂದರೆಯಾಗುವುದರಿಂದ ಕರ್ನಾಟಕ ಬಂದ್​ ಕೈಬಿಡಲು ವಾಟಾಳ್ ನಾಗರಾಜ್​ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಇಂದು ದೂರವಾಣಿ ಕರೆ ಮಾಡಿ ವಾಟಾಳ್ ನಾಗರಾಜ್​ ಅವರಿಗೆ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೆ, ಮಾತುಕತೆಗೆ ಕಚೇರಿಗೆ ಬರುವಂತೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.

ಎಂಇಎಸ್​ ಸಂಘಟನೆಯ ನಿಷೇಧಕ್ಕೆ ಆಗ್ರಹಿಸಿ ನಾಳೆ ಕನ್ನಡಪರ ಸಂಘಟನೆಗಳು ಬಂದ್​ಗೆ ಕರೆನೀಡಿವೆ. ಇಂದು ಬೆಳಗ್ಗೆ ಪ್ರತಿಕ್ರಿಯೆ ನೀಡಿದ್ದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಬಂದ್ ವಾಪಾಸ್ ಪಡೆಯುವುದಿಲ್ಲ. ಹಾಗೇನಾದರೂ ಬಂದ್ ವಾಪಾಸ್ ಪಡೆದರೆ ಅಥವಾ ಮುಂದೂಡಿದರೆ ರಾಜ್ಯದ ಜನರಿಗೆ ಕೆಟ್ಟ ಸಂದೇಶ ಹೋಗುತ್ತದೆ ಎಂದಿದ್ದರು.

MES ನಿಷೇಧಕ್ಕೆ ಒತ್ತಾಯಿಸಿ ಡಿ.31ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ, K.R. ಕುಮಾರ್​ ಚರ್ಚೆ ನಡೆಸಿದ್ದರು. ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಜೀಪ್​ನಲ್ಲಿ ಕುಳಿತು ಮಾತುಕತೆ ನಡೆಸಿದ್ದರು. ವಾಟಾಳ್ ನಾಗರಾಜ್ ಮನವೊಲಿಕೆಗೆ ಮುಖಂಡರು ಪ್ರಯತ್ನ ಮಾಡಿದ್ದರು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್​ ಶೆಟ್ಟಿ, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್​ ಮನವೊಲಿಕೆ ಯತ್ನ ಮಾಡಿದ್ದರು. ವಾಟಾಳ್ ನಾಗರಾಜ್ ಅವರ ಕಾಲು ಮುಟ್ಟಿ ಪ್ರವೀಣ್ ಕುಮಾರ್​ ಶೆಟ್ಟಿ ಮನವಿ ಮಾಡಿದ್ದರು. ನಾನು ನಿಮ್ಮ ಕಾಲಿಗೆ ಬೀಳುತ್ತೇನೆ. ಆದರೆ ಬಂದ್​ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದರು.

MES ನಿಷೇಧಕ್ಕೆ ಒತ್ತಾಯಿಸಿ ಡಿ.31ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ವಾಟಾಳ್​ ಧರಣಿ ನಡೆಯಲಿದೆ. ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ವಾಟಾಳ್ ಪ್ರತಿಭಟನೆ ನಡೆಸಲಿದ್ದಾರೆ. ಯಾರು ಬೆಂಬಲ ಕೊಡಲಿ ಬಿಡಲಿ ನಾಳೆ ಬಂದ್ ಮಾಡುತ್ತೇವೆ ಎಂದು ಧರಣಿ ವೇಳೆ ಹೋರಾಟಗಾರ ವಾಟಾಳ್ ನಾಗರಾಜ್​ ಹೇಳಿಕೆ ನೀಡಿದ್ದರು. ಬಂದ್​ಗೆ ಬೆಂಬಲ ನೀಡುವಂತೆ ತೆರೆದ ಜೀಪ್​ನಲ್ಲಿ ಮೆರವಣಿಗೆ ನಡೆಸಲಾಗಿತ್ತು. ನಾಳೆ ಅಂಗಡಿ ಮುಚ್ಚುವಂತೆ ಮಾಲೀಕರಿಗೆ ವಾಟಾಳ್​ ನಾಗರಾಜ್ ಮನವಿ ಮಾಡಿದ್ದರು.

ಇದನ್ನೂ ಓದಿ: ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್​; ಸಿನಿಮಾ ಪ್ರದರ್ಶನ ಇರುತ್ತಾ? ಇಲ್ಲಿದೆ ಮಾಹಿತಿ

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿ 31ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ