AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಡುವು ಮುಗಿಯುವುದರೊಳಿಗೆ ಅಂಗಡಿ ಬೋರ್ಡ್​ ಬದಲಾಗದಿದ್ದರೆ ಕರ್ನಾಟಕ ಬಂದ್​: ವಾಟಾಳ್ ಎಚ್ಚರಿಕೆ

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಎಂದು ಕನ್ನಡ ಪರ ಸಂಘಟನೆಗಳು ಪರಭಾಷಾ ಬೋರ್ಡ್ಗಳ ಮೇಲೆ ಸಮರ ಸಾರಿದ್ದವು. ಈ ಮೂಲಕ ವರ್ತಕರು ಹಾಗೂ ಕನ್ನಡ ಪರ ಹೋರಾಟಗಾರರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಸದ್ಯ ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಹೋರಾಟಗಾರ ವಾಟಾಳ್ ನಾಗರಾಜ್​​ ಗಡುವು ಮುಗಿಯೋದರೊಳಗೆ ಬೋರ್ಡ್ ಬದಲಾಗದಿದ್ದರೆ ಕರ್ನಾಟಕ ಬಂದ್​ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಗಡುವು ಮುಗಿಯುವುದರೊಳಿಗೆ ಅಂಗಡಿ ಬೋರ್ಡ್​ ಬದಲಾಗದಿದ್ದರೆ ಕರ್ನಾಟಕ ಬಂದ್​: ವಾಟಾಳ್ ಎಚ್ಚರಿಕೆ
ಹೋರಾಟಗಾರ ವಾಟಾಳ್ ನಾಗರಾಜ್
ಗಂಗಾಧರ​ ಬ. ಸಾಬೋಜಿ
|

Updated on:Feb 25, 2024 | 3:15 PM

Share

ಬೆಂಗಳೂರು, ಫೆಬ್ರವರಿ 25: ನಾಮಫಲಕಕ್ಕಾಗಿ ಮತ್ತೆ ಕನ್ನಡದ ರಣಕಹಳೆ ಮೊಳಗಲಿದೆ. ಕನ್ನಡ ನಾಮಫಲಕ ಕಡ್ಡಾಯಕ್ಕೆ 3 ದಿನಗಳಷ್ಟೇ ಬಾಕಿ ಉಳಿದಿದೆ. ಗಡುವು ಮುಗಿಯೋದರೊಳಗೆ ಬೋರ್ಡ್ ಬದಲಾಗದಿದ್ದರೆ ಕರ್ನಾಟಕ ಬಂದ್​ ಮಾಡುತ್ತೇವೆ ಎಂದು ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಟಿವಿ9 ಜೊತೆ ಮಾತನಾಡಿದ ಅವರು, ಕನ್ನಡ ನಾಮಫಲಕಕ್ಕೆ ಇನ್ನೂ ಕೆಲವರು ಆಸಕ್ತಿ ತೋರಿಲ್ಲ. ನಾಮಫಲಕದ ಜೊತೆಗೆ ಕನ್ನಡಿಗರಿಗೆ ಉದ್ಯೋಗ ಬೇಕು. ಐಟಿ-ಬಿಟಿ ಕಂಪನಿಗಳಲ್ಲಿ ಉದ್ಯೋಗವನ್ನ ಕೊಡಬೇಕು ಎಂದು ಆಗ್ರಹ ಮಾಡಿದ್ದಾರೆ. ಮುಂದಿನ ತಿಂಗಳು ಎಲ್ಲಾ ಸಂಘಟನೆ ಒಗ್ಗೂಡಿಸುತ್ತೇವೆ. ಕನ್ನಡ ಬೋರ್ಡ್ ಕಡ್ಡಾಯ ಆಗದಿದ್ದರೆ ಕರ್ನಾಟಕ ಬಂದ್​ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕನ್ನಡ ಮರೆತ ಅಂಗಡಿ-ಮುಂಗಟ್ಟು ಮಾಲೀಕರ ವಿರುದ್ಧ ಕನ್ನಡ ಪರ ಸಂಘಟನೆಗಳು ಇತ್ತೀಚೆಗೆ ಪ್ರತಿಭಟಿಸಿದ್ದರು. ಬಳಿಕ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸೂಚನೆಯನ್ನ ಸರ್ಕಾರ ನೀಡಿತ್ತು. ಫೆಬ್ರವರಿ 28ರ ಡೆಡ್​ಲೈನ್ ನೀಡಿದೆ. ಈ ಗಡುವು ಮುಗಿಯಲು ಸದ್ಯ ಮೂರು ದಿನವಷ್ಟೇ ಬಾಕಿ ಇದೆ.

ಕನ್ನಡ ನಿರ್ಲಕ್ಷಿಸಿದರೆ ದೂರು 

ಕನ್ನಡ ನಾಮಫಲಕ ಅಳವಡಿಕೆ ವಿಚಾರ ವಿಧಾನಸಭೆ, ಪರಿಷತ್​ನಲ್ಲೂ ಚರ್ಚೆಯಾಗಿ, ಅಂಗೀಕಾರ ಪಡೆದಿದೆ. ಕನ್ನಡ ನಾಮಫಲಕ ಕುರಿತು ಸಮಿತಿ ರಚಿಸಲಾಗಿದ್ದು, ಕೈಗಾರಿಕೆಗಳು ಕೂಡ ಕನ್ನಡ ಬಳಕೆ ಮಾಡಬೇಕು ಅಂತ ಸಚಿವ ಶಿವರಾಜ್ ತಂಗಡಗಿ ಎಚ್ಚರಿಸಿದ್ದರು. ಕನ್ನಡ ಕಣ್ಗಾವಲು ಆ್ಯಪ್​ ಅಭಿವೃದ್ಧಿಪಡಿಸಲಾಗಿದ್ದು, ಕನ್ನಡ ನಿರ್ಲಕ್ಷಿಸಿದರೆ ದೂರು ನೀಡಬಹುದು ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಕನ್ನಡ ನಾಮಫಲಕ: ರಾಜ್ಯ ಸರ್ಕಾರ ಮಾತು ತಪ್ಪಿದರೆ ಎಲ್ಲಾ ಜಿಲ್ಲೆ ಗುಡುಗುತ್ತದೆ: ಕರವೇ ಅಧ್ಯಕ್ಷ ನಾರಾಯಣಗೌಡ

ಬೆಂಗಳೂರಿನ ಬ್ರಿಗೇಡ್ ರೋಡ್, ಎಂ.ಜಿ. ರಸ್ತೆಯಲ್ಲಿ ಕನ್ನಡ ಫಲಕ ಕಾಣುತ್ತಿಲ್ಲ. ಕೆಲ ಅಂಗಡಿಗಳು ಕಾಟಾಚಾರಕ್ಕೆ ಚಿಕ್ಕದಾಗಿ ಕನ್ನಡ ಬೋರ್ಡ್ ಹಾಕಿವೆ. ಬೇರೆ ಭಾಷೆಯ ಬೋರ್ಡ್​​​​ಗಳಿಗೆ ಬಟ್ಟೆ ಮುಚ್ಚಿದ ಮಾಲೀಕರು ಕಣ್ಣಾಮುಚ್ಚಾಲೆ ಆಡುತ್ತಿರುವುದು ಇತ್ತೀಚೆಗೆ ಟಿವಿ9 ನಡೆಸಿದ ರಿಯಾಲಿಟಿ ಚೆಕ್​​ನಲ್ಲಿ ಬಯಲಾಗಿತ್ತು. ಶಾಪ್ ಮುಂದೆ ಕಾಟಾಚಾರಕ್ಕೆ ಕನ್ನಡ ಬಾವುಟ ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಹೋರಾಟಗಾರರು ಕಿಡಿಕಾರಿದ್ದರು.

ಇದನ್ನೂ ಓದಿ: ಕನ್ನಡಿಗರಿಗೆ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿಗಾಗಿ ಮುಂದಿನ ಹೋರಾಟ: ಕರವೇ ನಾರಾಯಣಗೌಡ

ನಿನ್ನೆ ಬೆಳಗಾವಿಯಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಮಾತನಾಡಿದ್ದು, ಫೇ.28 ರ ಒಳಗೆ ಕನ್ನಡಮಯವಾಗುತ್ತದೆ ಎಂದು ಸರಕಾರ ಹೇಳಿ ಸಮಯ ತೆಗೆದುಕೊಂಡಿದೆ. ಸರಕಾರ ಮಾತು ತಪ್ಪಿದರೆ 32 ಜಿಲ್ಲೆಯವರು ಗುಡುಗಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ಇನ್ನೊಂದು ಹೋರಾಟದಲ್ಲಿ ನಮ್ಮನ್ನ ಬಂಧಿಸಿ, ಆಗ ಗೊತ್ತಾಗುತ್ತದೆ. ಇಡೀ ರಾಜ್ಯವೇ ಹೊತ್ತಿ ಉರಿಯುತ್ತದೆ ಎಂದು ಹೇಳಿದ್ದರು.

ವರದಿ: ಶಾಂತಾಮೂರ್ತಿ ಎಂ ಟಿವಿ9 

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:08 pm, Sun, 25 February 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ