Karnataka Bandh Live Updates: ಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್, ಸುಪ್ರೀಂನಲ್ಲಿ ಇಂದು ಕಾವೇರಿ ಅರ್ಜಿ ವಿಚಾರಣೆ ಇಲ್ಲ
ಕರ್ನಾಟಕ ಬಂದ್ ಲೈವ್: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಬೆಂಗಳೂರಿನಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದ್ದು, ಸಾರ್ವಜನಿಕ ಸಾರಿಗೆ ಸಂಚಾರದಲ್ಲಿ ವ್ಯತ್ಯಾಸವಿಲ್ಲ. ಶಾಂತಿಯುತ ಪ್ರತಿಭಟನೆಗೆ ಪೊಲೀಸರು ಮನವಿ ಮಾಡಿದ್ದು, ಬಲವಂತದ ಅಂಗಡಿ ಮುಚ್ಚಿಸುವಿಕೆಗೆ ನಿಷೇಧವಿದೆ. ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನವೂ ಇಂದು ಆರಂಭ.

LIVE NEWS & UPDATES
-
ನಾಳೆ ವಿಧಾನಪರಿಷತ್ ಸಭಾಪತಿ ಚುನಾವಣೆ: ಇಂದು ಕಾಂಗ್ರೆಸ್ನಿಂದ ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆ
ಕರ್ನಾಟಕ ವಿಧಾನಪರಿಷತ್ತಿನ ನೂತನ ಸಭಾಪತಿ (Council Chairman) ಆಯ್ಕೆಗೆ ವೇದಿಕೆ ಸಿದ್ಧಗೊಂಡಿದ್ದು, ನಾಳೆ (ಆಗಸ್ಟ್ 14) ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಲೀಂ ಅಹ್ಮದ್ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
-
ಬಂದ್ ನಡುವೆಯೂ ರಾಜಧಾನಿಯಲ್ಲಿ ಶಾಲೆ-ಕಾಲೇಜುಗಳು ಎಂದಿನಂತೆ ಆರಂಭ
ಕಾವೇರಿ ನೀರು ಬಿಡುಗಡೆ ಖಂಡಿಸಿ ರಾಜ್ಯಾದ್ಯಂತ ಬಂದ್ಗೆ ಕರೆ ನೀಡಲಾಗಿದ್ದರೂ, ರಾಜಧಾನಿ ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳು ಎಂದಿನಂತೆ ಸಹಜವಾಗಿ ಕಾರ್ಯನಿರ್ವಹಿಸುತ್ತಿವೆ. ವಿದ್ಯಾರ್ಥಿಗಳು ಬೆಳಿಗ್ಗೆಯಿಂದಲೇ ನಿಯಮಿತವಾಗಿ ಶಾಲೆಗಳತ್ತ ಬರುತ್ತಿರುವುದು ಕಂಡುಬಂದಿದೆ.
-
-
ಸುಪ್ರೀಂ ಕೋರ್ಟ್ನಲ್ಲಿ ಇಂದು ಕಾವೇರಿ ಅರ್ಜಿ ವಿಚಾರಣೆ ಇಲ್ಲ: ಸೋಮವಾರಕ್ಕೆ ಮುಂದೂಡಿಕೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು (ಆಗಸ್ಟ್ 13) ಸುಪ್ರೀಂ ಕೋರ್ಟ್ನಲ್ಲಿ ನಡೆಯುವುದಿಲ್ಲ. ಪ್ರಕರಣದ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ (ಆಗಸ್ಟ್ 17) ಮುಂದೂಡುವ ಸಾಧ್ಯತೆಯಿದೆ.
-
ಕಾವೇರಿ ಕಿಚ್ಚು: ಖಾಲಿ ಕೊಡ ಹಿಡಿದು ಕರುನಾಡು ಸೇನೆ ಹಾಗೂ ಕರವೇ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿರುವುದನ್ನು ಖಂಡಿಸಿ ಇಂದು ಕರೆಯಲಾಗಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ, ರಾಮನಗರದಲ್ಲಿ ಪ್ರತಿಭಟನೆಯ ಕಾವು ತೀವ್ರಗೊಂಡಿದೆ. ರಾಮನಗರ ನಗರದ ಪ್ರಮುಖ ಜಂಕ್ಷನ್ ಆದ ಐಜೂರು ವೃತ್ತದಲ್ಲಿ ಕರುನಾಡು ಸೇನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುತ್ತಿರುವಾಗ ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಕಾರ್ಯಕರ್ತರು ಕೈಯಲ್ಲಿ ಖಾಲಿ ಕೊಡಗಳನ್ನು ಹಿಡಿದು ಸರ್ಕಾರದ ಗಮನ ಸೆಳೆದರು.
-
ಬಂದ್ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮ: ವಾಟಾಳ್ ಆಪ್ತ ಗಿರೀಶ್ ಗೌಡ ಪೊಲೀಸ್ ವಶಕ್ಕೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ‘ಕರ್ನಾಟಕ ಬಂದ್’ ಹಿನ್ನೆಲೆಯಲ್ಲಿ, ವಾಟಾಳ್ ನಾಗರಾಜ್ ಅವರ ಆಪ್ತ ಹಾಗೂ ಕನ್ನಡ ಚಳವಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
-
ಕೆಎಸ್ಆರ್ಟಿಸಿ, ಬಿಎಂಆರ್ಟಿಸಿ ಬಸ್ ಸಂಚಾರ ಯಥಾಸ್ಥಿತಿ
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಖಂಡಿಸಿ ಹಾಗೂ ನೀರು ಹರಿಸುವುದನ್ನು ತಡೆಯುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಬಂದ್ ಕರೆ ನೀಡಲಾಗಿದ್ದರೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಸಾರ್ವಜನಿಕ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ
ಬೆಂಗಳೂರು, ಆ.13: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಖಂಡಿಸಿ ಹಾಗೂ ನೀರು ಹರಿಸುವುದನ್ನು ತಡೆಯುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಬಲವನ್ನು ನಿಯೋಜಿಸಲಾಗಿದೆ. ಬಂದ್ ಕರೆ ನೀಡಲಾಗಿದ್ದರೂ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಸಾರ್ವಜನಿಕ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದು, ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸುವುದು ಅಥವಾ ವಾಹನ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇಂದಿನಿಂದ ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನವೂ ಆರಂಭ. ಇನ್ನು ಇದರ ಜತೆಗೆ ಸುಪ್ರೀಂ ಕೋರ್ಟ್ನಲ್ಲಿ ತಮಿಳುನಾಡು ಸಲ್ಲಿಸಿರುವ ಕಾವೇರಿ ಅರ್ಜಿ ವಿಚಾರಣೆ ನಡೆಯಲಿದೆ.
Published On - Aug 13,2026 7:56 AM




