AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 8: ಭಾರತ್ ಬಂದ್ ದಿನ ಕರ್ನಾಟಕ ಕೂಡ ಬಂದ್.. ಬಂದ್..​ ಬಂದ್​..

ಡಿಸೆಂಬರ್ 8ರಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ಅಂದು ಕರ್ನಾಟಕ ಕೂಡ ಬಂದ್ ಮಾಡಲು ಚಿಂತಿಸಲಾಗಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಬಂದ್ ಮಾಡಲಾಗುತ್ತೆ.

ಡಿಸೆಂಬರ್​ 8: ಭಾರತ್ ಬಂದ್ ದಿನ ಕರ್ನಾಟಕ ಕೂಡ ಬಂದ್.. ಬಂದ್..​ ಬಂದ್​..
ಆಯೇಷಾ ಬಾನು
|

Updated on:Dec 06, 2020 | 1:13 PM

Share

ಬೆಂಗಳೂರು: ಡಿಸೆಂಬರ್ ​5ರ ಕರ್ನಾಟಕ ಬಂದ್​ ಬಳಿಕ ಮತ್ತೊಂದು ಬಂದ್ ಮಾಡಲು ಸಿದ್ಧತೆಗಳು ನಡೆದಿವೆ. ಡಿಸೆಂಬರ್ 8ರಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ಅಂದು ಕರ್ನಾಟಕ ಕೂಡ ಬಂದ್ ಮಾಡಲು ಚಿಂತಿಸಲಾಗಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಬಂದ್ ಮಾಡಲಾಗುತ್ತೆ.

ಹಾಗೂ ಡಿಸೆಂಬರ್ 9ರಂದು ಬಾರು ಕೋಲು ಚಳವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮಾಹಿತಿ ನೀಡಿದೆ. ಬಂದ್ ಹಾಗೂ ಪ್ರತಿಭಟನೆ ಕುರಿತು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ.

ಡಿ.8ರಂದು ರಾಜ್ಯದಲ್ಲೂ ಭಾರತ್ ಬಂದ್ ಆಚರಿಸುತ್ತೇವೆ: ಇನ್ನು ಬಂದ್ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕೇಂದ್ರ ಸರ್ಕಾರ ರೈತರ ದೆಹಲಿ ಪ್ರವೇಶ ತಡೆದಿದೆ. ರೈತ ವಿರೋಧಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿದೆ. ಹೊಸ ಕೃಷಿ ಸುಧಾರಣಾ ಕಾನೂನುಗಳ ರೈತ ವಿರೋಧಿ ಮಸೂದೆ ವಿರೋಧಿಸಿ ಭಾರತ ಬಂದ್ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ರೈತ ಸಂಘಟನೆಯಿಂದ ಬಂದ್ ಆಚರಿಸಲಾಗುತ್ತೆ. 8 ರಂದು ರಾಜ್ಯದಲ್ಲಿ ಎಲ್ಲಾ ಹೆದ್ದಾರಿಗಳು ಹಾಗೂ ಎಲ್ಲಾ ಜಿಲ್ಲೆ ಕೇಂದ್ರದಲ್ಲಿಯೂ ರೈತರಿಂದ ಬಂದ್ ಮಾಡಲಾಗುತ್ತೆ. ಡಿಸೆಂಬರ್‌ 9ರಂದು ರೈತರಿಂದ ಬಾರುಕೋಲು ಚಳವಳಿ ನಡೆಯುತ್ತೆ ಎಂದು ತಿಳಿಸಿದ್ರು.

ಡಿ.8ಕ್ಕೆ ಕರ್ನಾಟಕ ಬಂದ್ ಆದ್ರೂ ಸ್ತಬ್ಧವಾಗಲ್ಲ ಬೆಂಗಳೂರು: ಡಿ.8 ಮಂಗಳವಾರ ‘ಬೆಂಗಳೂರು ಬಂದ್’ ಆಗಲ್ಲ. ಡಿಸೆಂಬರ್ 9 ರಂದು ಬೆಂಗಳೂರು ಬಂದ್ ಆಗಲಿದೆ. ಮಂಗಳವಾರ ಕರ್ನಾಟಕ ಬಂದ್, ಬುಧವಾರ ಬೆಂಗಳೂರು ಬಂದ್ ಮಾಡಲಾಗುತ್ತೆ. ಬಾರುಕೋಲು ಚಳವಳಿ ಮೂಲಕ 10 ಸಾವಿರ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ನಾವು ಹಿಂಸಾತ್ಮಕ ಬಂದ್ ಮಾಡಲ್ಲ, ನಮ್ಮದು ಶಾಂತಿಯುತ ಬಂದ್. ರೈತರ ಬಂದ್ ತಡೆಯವ ಕೆಲಸವನ್ನು ಸಿಎಂ ಮಾಡಬಾರದು ಎಂದು ಸಿಎಂ BSYಗೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.

Published On - 12:30 pm, Sun, 6 December 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!