AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 8: ಭಾರತ್ ಬಂದ್ ದಿನ ಕರ್ನಾಟಕ ಕೂಡ ಬಂದ್.. ಬಂದ್..​ ಬಂದ್​..

ಡಿಸೆಂಬರ್ 8ರಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ಅಂದು ಕರ್ನಾಟಕ ಕೂಡ ಬಂದ್ ಮಾಡಲು ಚಿಂತಿಸಲಾಗಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಬಂದ್ ಮಾಡಲಾಗುತ್ತೆ.

ಡಿಸೆಂಬರ್​ 8: ಭಾರತ್ ಬಂದ್ ದಿನ ಕರ್ನಾಟಕ ಕೂಡ ಬಂದ್.. ಬಂದ್..​ ಬಂದ್​..
ಆಯೇಷಾ ಬಾನು
ಆಯೇಷಾ ಬಾನು|

Updated on:Dec 06, 2020 | 1:13 PM

Share

ಬೆಂಗಳೂರು: ಡಿಸೆಂಬರ್ ​5ರ ಕರ್ನಾಟಕ ಬಂದ್​ ಬಳಿಕ ಮತ್ತೊಂದು ಬಂದ್ ಮಾಡಲು ಸಿದ್ಧತೆಗಳು ನಡೆದಿವೆ. ಡಿಸೆಂಬರ್ 8ರಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ಅಂದು ಕರ್ನಾಟಕ ಕೂಡ ಬಂದ್ ಮಾಡಲು ಚಿಂತಿಸಲಾಗಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಬಂದ್ ಮಾಡಲಾಗುತ್ತೆ.

ಹಾಗೂ ಡಿಸೆಂಬರ್ 9ರಂದು ಬಾರು ಕೋಲು ಚಳವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮಾಹಿತಿ ನೀಡಿದೆ. ಬಂದ್ ಹಾಗೂ ಪ್ರತಿಭಟನೆ ಕುರಿತು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ.

ಡಿ.8ರಂದು ರಾಜ್ಯದಲ್ಲೂ ಭಾರತ್ ಬಂದ್ ಆಚರಿಸುತ್ತೇವೆ: ಇನ್ನು ಬಂದ್ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕೇಂದ್ರ ಸರ್ಕಾರ ರೈತರ ದೆಹಲಿ ಪ್ರವೇಶ ತಡೆದಿದೆ. ರೈತ ವಿರೋಧಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿದೆ. ಹೊಸ ಕೃಷಿ ಸುಧಾರಣಾ ಕಾನೂನುಗಳ ರೈತ ವಿರೋಧಿ ಮಸೂದೆ ವಿರೋಧಿಸಿ ಭಾರತ ಬಂದ್ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ರೈತ ಸಂಘಟನೆಯಿಂದ ಬಂದ್ ಆಚರಿಸಲಾಗುತ್ತೆ. 8 ರಂದು ರಾಜ್ಯದಲ್ಲಿ ಎಲ್ಲಾ ಹೆದ್ದಾರಿಗಳು ಹಾಗೂ ಎಲ್ಲಾ ಜಿಲ್ಲೆ ಕೇಂದ್ರದಲ್ಲಿಯೂ ರೈತರಿಂದ ಬಂದ್ ಮಾಡಲಾಗುತ್ತೆ. ಡಿಸೆಂಬರ್‌ 9ರಂದು ರೈತರಿಂದ ಬಾರುಕೋಲು ಚಳವಳಿ ನಡೆಯುತ್ತೆ ಎಂದು ತಿಳಿಸಿದ್ರು.

ಡಿ.8ಕ್ಕೆ ಕರ್ನಾಟಕ ಬಂದ್ ಆದ್ರೂ ಸ್ತಬ್ಧವಾಗಲ್ಲ ಬೆಂಗಳೂರು: ಡಿ.8 ಮಂಗಳವಾರ ‘ಬೆಂಗಳೂರು ಬಂದ್’ ಆಗಲ್ಲ. ಡಿಸೆಂಬರ್ 9 ರಂದು ಬೆಂಗಳೂರು ಬಂದ್ ಆಗಲಿದೆ. ಮಂಗಳವಾರ ಕರ್ನಾಟಕ ಬಂದ್, ಬುಧವಾರ ಬೆಂಗಳೂರು ಬಂದ್ ಮಾಡಲಾಗುತ್ತೆ. ಬಾರುಕೋಲು ಚಳವಳಿ ಮೂಲಕ 10 ಸಾವಿರ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ನಾವು ಹಿಂಸಾತ್ಮಕ ಬಂದ್ ಮಾಡಲ್ಲ, ನಮ್ಮದು ಶಾಂತಿಯುತ ಬಂದ್. ರೈತರ ಬಂದ್ ತಡೆಯವ ಕೆಲಸವನ್ನು ಸಿಎಂ ಮಾಡಬಾರದು ಎಂದು ಸಿಎಂ BSYಗೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.

Published On - 12:30 pm, Sun, 6 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ