AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸೆಂಬರ್​ 8: ಭಾರತ್ ಬಂದ್ ದಿನ ಕರ್ನಾಟಕ ಕೂಡ ಬಂದ್.. ಬಂದ್..​ ಬಂದ್​..

ಡಿಸೆಂಬರ್ 8ರಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ಅಂದು ಕರ್ನಾಟಕ ಕೂಡ ಬಂದ್ ಮಾಡಲು ಚಿಂತಿಸಲಾಗಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಬಂದ್ ಮಾಡಲಾಗುತ್ತೆ.

ಡಿಸೆಂಬರ್​ 8: ಭಾರತ್ ಬಂದ್ ದಿನ ಕರ್ನಾಟಕ ಕೂಡ ಬಂದ್.. ಬಂದ್..​ ಬಂದ್​..
ಆಯೇಷಾ ಬಾನು
|

Updated on:Dec 06, 2020 | 1:13 PM

Share

ಬೆಂಗಳೂರು: ಡಿಸೆಂಬರ್ ​5ರ ಕರ್ನಾಟಕ ಬಂದ್​ ಬಳಿಕ ಮತ್ತೊಂದು ಬಂದ್ ಮಾಡಲು ಸಿದ್ಧತೆಗಳು ನಡೆದಿವೆ. ಡಿಸೆಂಬರ್ 8ರಂದು ಭಾರತ್ ಬಂದ್ ಹಿನ್ನೆಲೆಯಲ್ಲಿ ಅಂದು ಕರ್ನಾಟಕ ಕೂಡ ಬಂದ್ ಮಾಡಲು ಚಿಂತಿಸಲಾಗಿದೆ. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ಬಂದ್ ಮಾಡಲಾಗುತ್ತೆ.

ಹಾಗೂ ಡಿಸೆಂಬರ್ 9ರಂದು ಬಾರು ಕೋಲು ಚಳವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮಾಹಿತಿ ನೀಡಿದೆ. ಬಂದ್ ಹಾಗೂ ಪ್ರತಿಭಟನೆ ಕುರಿತು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಲಾಗುತ್ತಿದೆ.

ಡಿ.8ರಂದು ರಾಜ್ಯದಲ್ಲೂ ಭಾರತ್ ಬಂದ್ ಆಚರಿಸುತ್ತೇವೆ: ಇನ್ನು ಬಂದ್ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ಕೇಂದ್ರ ಸರ್ಕಾರ ರೈತರ ದೆಹಲಿ ಪ್ರವೇಶ ತಡೆದಿದೆ. ರೈತ ವಿರೋಧಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿದೆ. ಹೊಸ ಕೃಷಿ ಸುಧಾರಣಾ ಕಾನೂನುಗಳ ರೈತ ವಿರೋಧಿ ಮಸೂದೆ ವಿರೋಧಿಸಿ ಭಾರತ ಬಂದ್ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ರೈತ ಸಂಘಟನೆಯಿಂದ ಬಂದ್ ಆಚರಿಸಲಾಗುತ್ತೆ. 8 ರಂದು ರಾಜ್ಯದಲ್ಲಿ ಎಲ್ಲಾ ಹೆದ್ದಾರಿಗಳು ಹಾಗೂ ಎಲ್ಲಾ ಜಿಲ್ಲೆ ಕೇಂದ್ರದಲ್ಲಿಯೂ ರೈತರಿಂದ ಬಂದ್ ಮಾಡಲಾಗುತ್ತೆ. ಡಿಸೆಂಬರ್‌ 9ರಂದು ರೈತರಿಂದ ಬಾರುಕೋಲು ಚಳವಳಿ ನಡೆಯುತ್ತೆ ಎಂದು ತಿಳಿಸಿದ್ರು.

ಡಿ.8ಕ್ಕೆ ಕರ್ನಾಟಕ ಬಂದ್ ಆದ್ರೂ ಸ್ತಬ್ಧವಾಗಲ್ಲ ಬೆಂಗಳೂರು: ಡಿ.8 ಮಂಗಳವಾರ ‘ಬೆಂಗಳೂರು ಬಂದ್’ ಆಗಲ್ಲ. ಡಿಸೆಂಬರ್ 9 ರಂದು ಬೆಂಗಳೂರು ಬಂದ್ ಆಗಲಿದೆ. ಮಂಗಳವಾರ ಕರ್ನಾಟಕ ಬಂದ್, ಬುಧವಾರ ಬೆಂಗಳೂರು ಬಂದ್ ಮಾಡಲಾಗುತ್ತೆ. ಬಾರುಕೋಲು ಚಳವಳಿ ಮೂಲಕ 10 ಸಾವಿರ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ನಾವು ಹಿಂಸಾತ್ಮಕ ಬಂದ್ ಮಾಡಲ್ಲ, ನಮ್ಮದು ಶಾಂತಿಯುತ ಬಂದ್. ರೈತರ ಬಂದ್ ತಡೆಯವ ಕೆಲಸವನ್ನು ಸಿಎಂ ಮಾಡಬಾರದು ಎಂದು ಸಿಎಂ BSYಗೆ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.

Published On - 12:30 pm, Sun, 6 December 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?