AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಕರ್ನಾಟಕ ಬಂದ್ ದಿನ ಏನೇನಿರುತ್ತೆ, ಏನೇನಿರಲ್ಲ? ಇಲ್ಲಿದೆ ವಿವರ

ಕರ್ನಾಟಕ ಬಂದ್​ ಮಾರ್ಚ್​ 22: ಬೆಳಗಾವಿ ಗಡಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟದ ವಿರುದ್ಧ ಧ್ವನಿ ಎತ್ತಲು ಹೊರಟಿರುವ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ಬಂದ್​ಗೆ ಇನ್ನೆರಡೇ ದಿನ ಬಾಕಿ ಇದೆ. ಬಂದ್ ದಿನ ಏನೇನು ಸೇವೆಗಳು ಇರಲಿವೆ? ಏನೇನು ಇರುವುದಿಲ್ಲ ಎಂಬ ಮಾಹಿತಿ ಇಲ್ಲಿದೆ.

Karnataka Bandh: ಕರ್ನಾಟಕ ಬಂದ್ ದಿನ ಏನೇನಿರುತ್ತೆ, ಏನೇನಿರಲ್ಲ? ಇಲ್ಲಿದೆ ವಿವರ
ಕರ್ನಾಟಕ ಬಂದ್ (ಸಾಂದರ್ಭಿಕ ಚಿತ್ರ)
ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on:Mar 20, 2025 | 4:55 PM

Share

ಬೆಂಗಳೂರು, ಮಾರ್ಚ್ 20: ಬೆಳಗಾವಿಯಲ್ಲಿ (Belagavi) ಪದೇ ಪದೇ ಕಾಲು ಕೆರೆದುಕೊಂಡು ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳ ವಿರುದ್ಧ ಕನ್ನಡ ಪರ ಸಂಘಟನೆಗಳ ಹೋರಾಟದ ಕಿಚ್ಚು ಹೆಚ್ಚಾಗಿದೆ. ಎಂಇಎಸ್ ಪುಂಡಾಟ ಹಾಗೂ ಮರಾಠಿ ಸಂಘಟನೆಗಳ ದಾಂಧಲೆ ವಿರುದ್ಧ ಮಾರ್ಚ್​ 22 ರಂದು ಕರ್ನಾಟಕ ಬಂದ್ (Karnataka Bandh) ಮಾಡುವ ಮೂಲಕ ಎಚ್ಚರಿಕೆ ನೀಡಲು ಕನ್ನಡಪರ ಸಘಟನೆಗಳು ಸಜ್ಜಾಗಿವೆ. ಈ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಮಾಹಿತಿ ನೀಡಿದ್ದು, ಬಂದ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕ ಬಂದ್ ಸಮಯ

ಮಾರ್ಚ್ 22 ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆ ತನಕ ಬಂದ್ ಮಾಡಲು ಉದ್ದೇಶಿಸಲಾಗಿದೆ. ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ನಡೆಸಲು ಉದ್ದೇಶಿಸಲಾಗಿದೆ. ಬಂದ್ ವೇಳೆ ಬಸ್, ಆಟೋ, ವಾಹನಗಳ ಸಂಚಾರ ಬಂದ್ ಆಗಬೇಕು ಎಂದು ಕನ್ನಡಪರ ಸಂಘಟನೆಗಳು ಕರೆ ನೀಡಿವೆ.

ಕರ್ನಾಟಕ ಬಂದ್​ಗೆ ಬೆಂಬಲ ನೀಡಿರುವ ಸಂಘಟನೆಗಳು ಯಾವುವು?

ಸದ್ಯ ಕರ್ನಾಟಕ ಬಂದ್​​ಗೆ ಕರ್ನಾಟಕ ಸಾರಿಗೆ ನೌಕರರ ಒಕ್ಕೂಟ ಬೆಂಬಲ ನೀಡುವ ಭರವಸೆ ನೀಡಿದೆ. ಕೆಎಸ್​ಆರ್​​ಟಿಸಿ, ಬಿಎಂಟಿಸಿ ನೌಕರರ ಸಂಘದಿಂದ ಕೂಡ ಬೆಂಬಲ ವ್ಯಕ್ತವಾಗಿದೆ. ಕನ್ನಡ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಬೆಂಬಲ ಸೂಚಿಸಿದ್ದರೆ, ಇತ್ತ ಹೊಟೇಲ್ ಮಾಲೀಕರ ಸಂಘ ನೈತಿಕ ಬೆಂಬಲ ಮಾತ್ರ ಘೋಷಿಸಿದೆ. ಉಳಿದಂತೆ ಓಲಾ, ಉಬರ್ ಅಸೋಸಿಯೋಷನ್, ಎಪಿಎಂಸಿ ಸೇರಿ ಕೆಲ ಸಂಘಟನೆಗಳು ಬಂದ್​ಗೆ ಬೆಂಬಲ ನೀಡಲು ಸಜ್ಜಾಗಿವೆ.

ಇದನ್ನೂ ಓದಿ
Image
ಬೆಂಗಳೂರು: ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ಬಂಧನ
Image
ಬೆಳಗಾವಿ: ಯುವಕನಿಂದ ದೇವಾಲಯದ ಮೇಲೆ ಕಲ್ಲು ತೂರಾಟ, ಪಾಂಗುಳ ಗಲ್ಲಿ ಉದ್ವಿಗ್ನ
Image
ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ:ಹುಟ್ಟುವ ಮಕ್ಕಳು ಅಂಗವಿಕಲರು
Image
ಇಬ್ಬರು ಹೆಂಡರ ನೀಚ ಗಂಡ: ಬಾಬುನ ಕ್ರೌರ್ಯಕ್ಕೆ ನರಳಿ ನರಳಿ ಪ್ರಾಣಬಿಟ್ಟಳು!

ಕರ್ನಾಟಕ ಬಂದ್​ಗೆ ಭಾಗಶಃ ಬೆಂಬಲ ನೀಡಿರುವವರು ಯಾರೆಲ್ಲ?

ಸಿನಿಮಾ ಥಿಯೇಟರ್, ಚಲನಚಿತ್ರ ವಾಣಿಜ್ಯ ಮಂಡಳಿ, ಮಾಲ್, ಬೇಕರಿ, ಬಾರ್ ಅಂಡ್ ರೆಸ್ಟೋರೆಂಟ್, ಅಂಗಡಿ‌ ಮುಗ್ಗಟ್ಟು, ಬೀದಿಬದಿ ವ್ಯಾಪಾರಿಗಳಿಂದ ಬಂದ್​ಗೆ ಭಾಗಶಃ ಬೆಂಬಲ ವ್ಯಕ್ತವಾಗಿದೆ.

ಕರ್ನಾಟಕ ಬಂದ್​ ದಿನ ಏನೇನಿರುತ್ತೆ?

  • ಆಸ್ಪತ್ರೆ, ವೈದ್ಯಕೀಯ ಸೇವೆ
  • ಮೆಡಿಕಲ್
  • ಹಾಲು
  • ಅಗತ್ಯ ವಸ್ತುಗಳು
  • ನಮ್ಮ ಮೆಟ್ರೋ

ಕರ್ನಾಟಕ ಬಂದ್ ದಿನ ಏನೇನಿರಲ್ಲ?

  • ಓಲಾ, ಉಬರ್
  • ಕೆಲ ಖಾಸಗಿ ವಾಹನಗಳ ಸಂಚಾರ

ಇದನ್ನೂ ಓದಿ: ಮಾ.22ರಂದು ಕರ್ನಾಟಕ ಬಂದ್ ಫಿಕ್ಸ್

1 ರಿಂದ 9ನೇ ತರಗತಿಯವರೆಗೆ ಕೆಲ ತರಗತಿಗಳಿಗೆ ಪರೀಕ್ಷೆ ನಡೆಯುತ್ತಿರುವುದರಿಂದ ಬಂದ್ ದಿನಾಂಕ ಮುಂದೂಡಬೇಕು ಎಂಬ ಆಗ್ರಹ ಕೂಡ ಕೇಳಿಬಂದಿದೆ. ಪರೀಕ್ಷೆ ಮುಂದೂಡಿಕೆ ಅಥವಾ ಈ ವಿಚಾರಕ್ಕೆ ಸಂಬಂಧಿಸಿದ ಅಧಿಕೃತ ಪ್ರಕಟಣೆ ಇನ್ನೂ ಹೊರಬಿದ್ದಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:46 am, Thu, 20 March 25

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ