AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಕರ್ನಾಟಕ ಬಂದ್​​ ದಿನ ಏನೇನಿರುತ್ತೆ, ಏನೇನಿರಲ್ಲ? ಇಲ್ಲಿದೆ ವಿವರ

Karnataka bandh on September 29: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಡೆಯಲಿರುವ ಕರ್ನಾಟಕ ಬಂದ್‌ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್ ದಿನ ಏನೇನು ಸೇವೆಗಳು ಲಭ್ಯವಿರುತ್ತವೆ? ಯಾವ ಸೇವೆಗಳು ಲಭ್ಯವಿರುವುದಿಲ್ಲ ಎಂಬ ಮಾಹಿತಿ ಇಲ್ಲಿದೆ.

Karnataka Bandh: ಕರ್ನಾಟಕ ಬಂದ್​​ ದಿನ ಏನೇನಿರುತ್ತೆ, ಏನೇನಿರಲ್ಲ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 27, 2023 | 5:20 PM

Share

ಬೆಂಗಳೂರು, ಸೆಪ್ಟೆಂಬರ್ 27: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯೊಡ್ಡುವುದಾಗಿ ಕನ್ನಡ ಪಡ ಹೋರಾಟಗಾರ ವಾಟಾಳ್ ನಾಗರಾಜ್ ಬೆದರಿಕೆ ಹಾಕಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆಯಲಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಸ್ಯಾಂಡಲ್ ವುಡ್ ನಟರಿಗೆ ಮನವಿ ಮಾಡಿದ್ದಾರೆ.

ವಾಟಾಳ್ ನಾಗರಾಜ್ ಮಾತನಾಡಿ, ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನಡೆಯಲಿರುವ ಕರ್ನಾಟಕ ಬಂದ್‌ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಹೇಳಿದ್ದಾರೆ.

20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಮೂರನೇ ಬಂದ್ ಇದಾಗಿದೆ. ಮೊದಲನೆಯ ಬಂದ್ ಸೆಪ್ಟೆಂಬರ್ 11 ರಂದು ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿದ್ದಾಗಿತ್ತು. ಎರಡನೆಯದು ಸೆಪ್ಟೆಂಬರ್ 26 ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಆಚರಿಸಿತು.

ಕರ್ನಾಟಕ ಬಂದ್​ ದಿನ ಏನೇನಿರಲ್ಲ?

  • ಓಲಾ ಮತ್ತು ಉಬರ್ ಸೇವೆಗಳು
  • ಆಟೋರಿಕ್ಷಾಗಳು
  • ಕಾರ್ಮಿಕ ಆಧಾರಿತ ಕೆಲಸಗಳು
  • ಟ್ರಕ್ ಸಾರಿಗೆ
  • ಮಾರುಕಟ್ಟೆಗಳು
  • ಬೀದಿ ವ್ಯಾಪಾರಿಗಳು
  • ಹೋಟೆಲ್‌ಗಳು
  • ಚಿತ್ರಮಂದಿರಗಳು
  • ಮಾಲ್‌ಗಳು
  • ಖಾಸಗಿ ಬಸ್ಸುಗಳು
  • ಬೇಕರಿಗಳು

ಕರ್ನಾಟಕ ಬಂದ್ ದಿನ ಏನೇನಿರುತ್ತವೆ?

  • ಆಸ್ಪತ್ರೆ
  • ಔಷಧಾಲಯಗಳು
  • ಆಂಬ್ಯುಲೆನ್ಸ್ ಸೇವೆಗಳು
  • ಮೆಟ್ರೋ ಸೇವೆ
  • ಹಾಲಿನ ಪಾರ್ಲರ್‌ಗಳು

ಇನ್ನೂ ನಿರ್ಧಾರವಾಗದೇ ಇರುವುದು

  • ಶಾಲೆ ಮತ್ತು ಕಾಲೇಜುಗಳು
  • ಬಿಎಂಟಿಸಿ ಮತ್ತು ಕೆಎಸ್​ಆರ್​ಟಿಸಿ ಬಸ್ ಸೇವೆಗಳು

ಏತನ್ಮಧ್ಯೆ, ಮಕ್ಕಳಿಗೆ ನಡೆಯುತ್ತಿರುವ ಪರೀಕ್ಷೆಗಳಿಂದಾಗಿ ಖಾಸಗಿ ಶಾಲಾ ವ್ಯಾನ್ ಚಾಲಕರ ಸಂಘವು ಬಂದ್​ಗೆ ತಮ್ಮ ನೈತಿಕ ಬೆಂಬಲವನ್ನು ನೀಡಿದೆ.

18 ದಿನಗಳ ಕಾಲ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ರಾಜ್ಯಕ್ಕೆ ಮತ್ತೊಮ್ಮೆ ಆದೇಶ ನೀಡಿರುವುದರಿಂದ ಪ್ರತಿಭಟನೆಯು ಬೆಂಗಳೂರು ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಆದೇಶವನ್ನು ಕರ್ನಾಟಕ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಕಾವೇರಿ ವಿವಾದ: ಕರ್ನಾಟಕ ಬಂದ್​ಗೆ 100ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ, ಹಲವೆಡೆ ರಸ್ತೆ ತಡೆ ಸಾಧ್ಯತೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಂದ್ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಪರ ಸಂಘಟನೆಗಳು ನಗರದಾದ್ಯಂತ ವಿವಿಧ ಹೋಟೆಲ್‌ಗಳು ಮತ್ತು ಮಾಲ್‌ಗಳಿಗೆ ಭೇಟಿ ನೀಡಿ ಸೆಪ್ಟೆಂಬರ್ 29 ರಂದು ಮುಚ್ಚುವಂತೆ ಮನವಿ ಮಾಡಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?