AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಂದ್: ರಾಜ್ಯದಲ್ಲಿ ಪ್ರತಿಭಟನೆಯ ಕಿಚ್ಚು ಎಲ್ಲೆಲ್ಲಿ ಹೇಗಿದೆ?

ಬೆಂಗಳೂರು: ರಾಜ್ಯಾದ್ಯಂತ ಅನ್ನದಾತರ ಹೋರಾಟದ ಕಿಚ್ಚು ಹೆಚ್ಚಾಗಿದೆ. ಜಿಲ್ಲೆ ಜಿಲ್ಲೆಗಳಲ್ಲೂ ಬೆಳಗ್ಗೆಯಿಂದಲೇ ಪ್ರತಿಭಟನೆ ಶುರುವಾಗಿದೆ. ದಾವಣಗೆರೆ, ಹಾಸನ, ಬಾಗಲಕೋಟೆ, ಗದಗ, ಮಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ರೈತರ ಹೋರಾಟಕ್ಕೆ ಉತ್ತಮ ಬೆಂಬಲ ಸಿಕ್ಕಿದ್ದು, ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ತಡೆ ಹಿಡಿದಿದ್ದಾರೆ. ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ: ಎಪಿಎಂಸಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ಖಂಡಿಸಿ ದಾವಣಗೆರೆಯಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯುತ್ತಿದೆ. ಜಿ.ಪಂ. ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್​ಗೆ ಬೆಂಕಿ ಹಚ್ಚಿ ವಾಹನಗಳ […]

ಕರ್ನಾಟಕ ಬಂದ್: ರಾಜ್ಯದಲ್ಲಿ ಪ್ರತಿಭಟನೆಯ ಕಿಚ್ಚು ಎಲ್ಲೆಲ್ಲಿ ಹೇಗಿದೆ?
ಆಯೇಷಾ ಬಾನು
| Edited By: |

Updated on:Sep 28, 2020 | 8:39 AM

Share

ಬೆಂಗಳೂರು: ರಾಜ್ಯಾದ್ಯಂತ ಅನ್ನದಾತರ ಹೋರಾಟದ ಕಿಚ್ಚು ಹೆಚ್ಚಾಗಿದೆ. ಜಿಲ್ಲೆ ಜಿಲ್ಲೆಗಳಲ್ಲೂ ಬೆಳಗ್ಗೆಯಿಂದಲೇ ಪ್ರತಿಭಟನೆ ಶುರುವಾಗಿದೆ. ದಾವಣಗೆರೆ, ಹಾಸನ, ಬಾಗಲಕೋಟೆ, ಗದಗ, ಮಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ರೈತರ ಹೋರಾಟಕ್ಕೆ ಉತ್ತಮ ಬೆಂಬಲ ಸಿಕ್ಕಿದ್ದು, ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರಕ್ಕೆ ಪ್ರತಿಭಟನಾಕಾರರು ತಡೆ ಹಿಡಿದಿದ್ದಾರೆ.

ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ: ಎಪಿಎಂಸಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆ ಖಂಡಿಸಿ ದಾವಣಗೆರೆಯಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯುತ್ತಿದೆ. ಜಿ.ಪಂ. ಕಚೇರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್​ಗೆ ಬೆಂಕಿ ಹಚ್ಚಿ ವಾಹನಗಳ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಚಿನ್ನದ ನಾಡಲ್ಲಿ ಕತ್ತೆಗೆ ಮೋದಿ, ಕುದುರೆಗೆ ಅಂಬಾನಿ ಮುಖವಾಡ : ಚಿನ್ನದ ನಾಡು ಕೋಲಾರದಲ್ಲಿ ರೈತರ ಹೋರಾಟ ಆರಂಭವಾಗಿದ್ದು, ರೈತ ಸಂಘಟನೆಗಳಿಗೆ ಪ್ರಗತಿಪರ ಸಂಘಟನೆಗಳು ಸಾಥ್ ನೀಡಿವೆ. ಕೋಲಾರ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಟೈರ್​ಗೆ ಬೆಂಕಿ ಹಾಕುವ ವಿಚಾರದಲ್ಲಿ ಪೊಲೀಸರ ಜೊತೆ ಮಾತಿನ ಚಕಮಕಿ ನಡೆದಿದೆ. ಈ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಕಂಡು ಬಂದಿದೆ. ಕಡೆಗೆ ಫ್ಲೆಕ್ಸ್​ಗಳಿಗೆ ಬೆಂಕಿ ಹಚ್ಚಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಹೊಸ ಬಸ್ ನಿಲ್ದಾಣದಲ್ಲಿ ರೈತ ಸಂಘಟನೆಗಳು ಕತ್ತೆಗೆ ಮೋದಿ, ಕುದುರೆಗೆ ಅಂಬಾನಿ ಮುಖವಾಡ ಹಾಕಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

ಪಂಜಿನ ಮೆರವಣಿಗೆ: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ರೈತರಿಂದ ಪ್ರತಿಭಟನೆ ನಡೆಯುತ್ತಿದೆ. ಪಂಜಿನ ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅರೆಬೆತ್ತಲೆ ಪ್ರತಿಭಟನೆ: ರೈತ ಮುಖಂಡ ಲಕ್ಷ್ಮೀಕಾಂತ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಚಿತ್ರದುರ್ಗ ನಗರದ ಗಾಂಧಿವೃತ್ತದಲ್ಲಿ ಅರೆಬೆತ್ತಲೆಯಾಗಿ ತಲೆಕೆಳಗಾಗಿ ನಿಂತು ರೈತರು ಆಕ್ರೋಶ ಹೊರ ಹಾಕಿದ್ದಾರೆ.ಪೊಲೀಸರು ಮತ್ತು ರೈತ ಮುಖಂಡರ ನಡುವೆ ವಾಗ್ವಾದ ನಡೆದಿದೆ.

Published On - 7:52 am, Mon, 28 September 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!