AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ: ಬೀದಿ ಬೀದಿ ತೆರಳಿ ಬಂದ್​ಗೆ ಸಹರಿಸುವಂತೆ ಜನರಲ್ಲಿ ಮನವಿ ಮಾಡಿದ ವಾಟಾಳ್

ಕಾವೇರಿ ನದಿ ವಿವಾದ ವಿಚಾರವಾಗಿ ಸೆಪ್ಟೆಂಬರ್​ 29ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ರಾಜ್ಯ ಬಂದ್​ಗೆ ಎಲ್ಲರೂ ಸಹಕಾರ ನೀಡಬೇಕು. ಹೋಟೆಲ್​, ಶಾಪಿಂಗ್ ಮಾಲ್​ಗಳು, ಅಂಗಡಿಗಳು ಬಂದ್​​​ ಮಾಡಬೇಕು ಎಂದು ತೆರೆದ ವಾಹನದಲ್ಲಿ ಬೀದಿ ಬೀದಿಗೆ ತೆರಳಿ ಲೌಡ್​ ಸ್ಪೀಕರ್​ ಮೂಲಕ ಜನರಿಗೆ ಹೋರಾಟಗಾರ ವಾಟಾಳ್ ನಾಗರಾಜ್​ ಮನವಿ ಮಾಡಿದ್ದಾರೆ.

ಕಾವೇರಿ ವಿವಾದ: ಬೀದಿ ಬೀದಿ ತೆರಳಿ ಬಂದ್​ಗೆ ಸಹರಿಸುವಂತೆ ಜನರಲ್ಲಿ ಮನವಿ ಮಾಡಿದ ವಾಟಾಳ್
ಹೋರಾಟಗಾರ ವಾಟಾಳ್ ನಾಗರಾಜ್
Vinay Kashappanavar
| Edited By: |

Updated on:Sep 27, 2023 | 4:46 PM

Share

ಬೆಂಗಳೂರು, ಸೆಪ್ಟೆಂಬರ್​ 27: ಕಾವೇರಿ ವಿವಾದ ಹಿನ್ನೆಲೆ ಸೆಪ್ಟೆಂಬರ್​ 29ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ರಾಜ್ಯ ಬಂದ್​ಗೆ ಎಲ್ಲರೂ ಸಹಕಾರ ನೀಡಬೇಕು. ಹೋಟೆಲ್​, ಶಾಪಿಂಗ್ ಮಾಲ್​ಗಳು, ಅಂಗಡಿಗಳು ಬಂದ್​​​ ಮಾಡಬೇಕು ಎಂದು ತೆರೆದ ವಾಹನದಲ್ಲಿ ಬೀದಿ ಬೀದಿಗೆ ತೆರಳಿ ಲೌಡ್​ ಸ್ಪೀಕರ್​ ಮೂಲಕ ಜನರಿಗೆ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj)​ ಮನವಿ ಮಾಡಿದ್ದಾರೆ. ಬಳಿಕ ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕ ಬಂದ್​ಗೆ ಎಲ್ಲ ಸಂಘಟನೆಗಳು ಬೆಂಬಲ ನೀಡಿವೆ ಎಂದು ತಿಳಿಸಿದ್ದಾರೆ.

ರಾಜ್ಯದ ಜನರಿಗಾಗಿ ನಾವು ಅನೇಕ ಬಂದ್​ಗೆ ಬೆಂಬಲ ನೀಡಿದ್ದೇವೆ. ಸೆಪ್ಟೆಂಬರ್ 29ರ ಕರ್ನಾಟಕ ಬಂದ್ ಬಹಳ ಮುಖ್ಯವಾದದ್ದು. ಈ ಬಂದ್ ಒಂದು ಜಿಲ್ಲೆಗೆ ಮಾತ್ರ ಸೀಮಿತಲ್ಲ, ಕರ್ನಾಟಕದಾದ್ಯಂತ ಬಂದ್​ ನಡೆಯಲಿದೆ. ಟೋಲ್​, ರೈಲು, ಹೆದ್ದಾರಿ, ವಿಮಾನ ಹಾರಾಟ ಬಂದ್ ಆಗಲಿದೆ. ಟೌನ್​ಹಾಲ್​ನಿಂದ ಫ್ರೀಡಂ ಪಾರ್ಕ್​ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಲಿದೆ.

ಇದನ್ನೂ ಓದಿ: ಸೆ.29ರ ಕರ್ನಾಟಕ ಬಂದ್​ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು? ಇಲ್ಲಿದೆ ಪಟ್ಟಿ

ಪ್ರತಿಭಟನಾ ರ‍್ಯಾಲಿಯನ್ನು ತಡೆಯದಂತೆ ಸರ್ಕಾರಕ್ಕೆ ಮನವಿ ನೀಡಿರುವ ವಾಟಾಳ್ ನಾಗರಾಜ್​, ಒಂದು ವೇಳೆ ತಡದದ್ದೆ ಆದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಕರ್ನಾಟಕ ಬಂದ್ 100% ಯಶಸ್ವಿಯಾಗಲಿದೆ. ರಾಜ್ಯಾದ್ಯಂತ ಎಲ್ಲಾ ಸಂಘಟನೆಗಳಿಂದ ಬಂದ್​ಗೆ ಬೆಂಬಲ ಸಿಗುತ್ತಿದೆ. ಶಾಂತಿಯುತವಾಗಿ ಚಳವಳಿ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಮನವಿ ತಿರಸ್ಕರಿಸಿದ CWRC: ರಾಜ್ಯದ ಜನತೆಯ ಹೋರಾಟಕ್ಕೆ ಬೆಲೆ ಸಿಕ್ಕಂತಾಗಿದೆ ಎಂದ ಡಿಕೆ ಶಿವಕುಮಾರ್

ಕರ್ನಾಟಕ ಬಂದ್​ ಹಿನ್ನೆಲೆ ಕನ್ನಡ ಚಿತ್ರರಂಗದ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸುವುದಾಗಿ ಫಿಲ್ಮ್ ಚೇಂಬರ್ ನಮಗೆ ಭರವಸೆ ನೀಡಿದೆ. ಟೌನ್​ಹಾಲ್​​ನಿಂದ ಫ್ರೀಡಂ ಪಾರ್ಕ್​​ವರೆಗೆ ಆಯೋಜಿಸಿರುವ ಪ್ರತಿಭಟನಾ ರ‍್ಯಾಲಿ ಎಲ್ಲಾ ಕಲಾವಿದರು ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್​​ ಮಂತ್ರಿಯಾದ್ಮೇಲೆ ಸರ್ವಾಧಿಕಾರಿಯಾಗಿದ್ದಾರೆ

ಡಿಸಿಎಂ ಡಿಕೆ ಶಿವಕುಮಾರ್​ ಮಂತ್ರಿ ಆದ ಮೇಲೆ ಸರ್ವಾಧಿಕಾರಿಯಾಗಿದ್ದಾರೆ. ತಮಿಳುನಾಡಿನಲ್ಲಿ ಸರ್ಕಾರ ಬೆಂಬಲಿಸುತ್ತೆ ಆದರೆ ನಮ್ಮಲ್ಲಿ ಸುಮ್ಮನಾಗುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ. ಈ ಹಿಂದೆ ಯಾರೂ ಈ ರೀತಿ ಮಾತನಾಡಿಲ್ಲ. ನಮ್ಮ ಬೇಡಿಕೆಗಳು ಈಡೇರುವವರೆಗೂ ಹಲವು ಭಾರಿ ಬಂದ್​ಗೆ ಕರೆ ನೀಡುತ್ತೇವೆ. ಮೇಕೆದಾಟು ವಿಚಾರವಾಗಿ ಪ್ರತಿಭಟನೆ ನಡೆಸಿದ್ದೀರಿ, ಅಧಿಕಾರಕ್ಕೆ ಬಂದ ಮೇಲೆ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:45 pm, Wed, 27 September 23

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ