AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರು ಸಂಕಷ್ಟ ಸೂತ್ರ ರೆಡಿ ಮಾಡ್ತೇವೆ, ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ: ಡಿಕೆ ಶಿವಕುಮಾರ್

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

ಕಾವೇರಿ ನೀರು ಸಂಕಷ್ಟ ಸೂತ್ರ ರೆಡಿ ಮಾಡ್ತೇವೆ, ಕರ್ನಾಟಕ ಬಂದ್ ಅವಶ್ಯಕತೆ ಇರಲಿಲ್ಲ: ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
Sunil MH
| Edited By: |

Updated on: Sep 29, 2023 | 2:29 PM

Share

ಬೆಂಗಳೂರು, ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಬಂದ್ (Karnataka Bandh) ನಡೆಸಲಾಗುತ್ತಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿವೆ. ಆದರೆ, ಈ ಬಂದ್ ಅವಶ್ಯಕತೆ ಇರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಜೊತೆಗೆ, ಇಂದು ನಡೆಯುವ ಮಹತ್ವದ ಸಭೆಯಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಚರ್ಚಿಸುತ್ತೇವೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ವಿವಿಧ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ರಾಜ್ಯದ ಜನರ ರಕ್ಷಣೆಗೆ ಪೊಲೀಸ್ ಭದ್ರತೆಯನ್ನು ಹೆಚ್ಚಿಸಿದ್ದೇವೆ. ಎಂದಿನಂತೆ ಅಂಗಡಿಗಳು ಓಪನ್ ಇವೆ, ವಾಹನಗಳು ಓಡಾಡುತ್ತಿವೆ ಎಂದರು.

ಮಧ್ಯಾಹ್ನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ದೆಹಲಿಯಲ್ಲಿ ನಡೆಯಲಿದೆ. ರಾಜ್ಯದ ಪರವಾಗಿ ಅಧಿಕಾರಿಗಳು ಭಾಗಿಯಾಗುತ್ತಾರೆ. ಬಳಿಕ ಕಾನೂನು ತಜ್ಞರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದಿದ್ದಾರೆ. ಕಾವೇರಿ ವಿಚಾರದಲ್ಲಿ ವಾದ ಮಂಡಿಸಿದವರೆಲ್ಲರೂ ಭಾಗಿಯಾಗುತ್ತಾರೆ ಎಂದರು.

ಇದನ್ನೂ ಓದಿ: Karnataka Bandh: ಕರ್ನಾಟಕ ಬಂದ್ ಗೆ ಉತ್ತಮ ಬೆಂಬಲ, ಬಿಎಂಟಿಸಿ ಬಸ್ ನಿಲ್ದಾಣದಿಂದ ಕದಲದ ವಾಹನಗಳು, ಜನರ ಪರದಾಟ

ಇಂದಿನ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಕಾವೇರಿ ವಿಚಾರದಲ್ಲಿ ಸಂಕಷ್ಟ ಸೂತ್ರದ ಬಗ್ಗೆ ಮಾತನಾಡುತ್ತಿದ್ದೇವೆ. ಸಂಕಷ್ಟ ಸೂತ್ರದ ಬಗ್ಗೆ ನಾವು ರೆಡಿ ಮಾಡಿಕೊಳ್ಳುತ್ತೇವೆ. ಬಳಿಕ ಕೋರ್ಟ್ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದರು.

ಕೆಲವರು ನನ್ನ ಬೇಜವಾಬ್ದಾರಿ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾನು ಮಾತನಾಡಲ್ಲ. ನನಗೆ ಅವರಗಿಂತ ಜವಾಬ್ದಾರಿ ಹೆಚ್ಚಿದೆ. ಜವಾಬ್ದಾರಿಯುತ ಸಚಿವನಾಗಿ ನಾನು ಮಾತನಾಡಬೇಕು. ಈ ಬಂದ್ ಎಲ್ಲ ಮುಗಿಯಲಿ, ನಾವು ಚರ್ಚೆ ಮಾಡುತ್ತಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?