AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪನ್ನೀರ್ ಪ್ರಿಯರಿಗೆ ಶಾಕ್: ರಾಜ್ಯಾದ್ಯಂತ ಕೃತಕ ‘ಅನಲಾಗ್ ಪನ್ನೀರ್’ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ

ಕರ್ನಾಟಕದಲ್ಲಿ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆಹಾರ ಸುರಕ್ಷತೆ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ. ಕೃತಕ 'ಅನಲಾಗ್ ಪನ್ನೀರ್' ಬಳಕೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿದೆ. ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ರಾಸಾಯನಿಕ ಬಳಸಿ ತಯಾರಿಸುವ ಈ ಪನ್ನೀರ್ ಆರೋಗ್ಯಕ್ಕೆ ಹಾನಿಕರ. ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಇನ್ನು ಮುಂದೆ ಶುದ್ಧ ಪನ್ನೀರ್ ಮಾತ್ರ ಬಳಸಬೇಕು. ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗುತ್ತದೆ.

ಪನ್ನೀರ್ ಪ್ರಿಯರಿಗೆ ಶಾಕ್: ರಾಜ್ಯಾದ್ಯಂತ ಕೃತಕ ‘ಅನಲಾಗ್ ಪನ್ನೀರ್’ 1 ವರ್ಷ ಬ್ಯಾನ್ ಮಾಡಿ ಆಹಾರ ಇಲಾಖೆ ಆದೇಶ
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on: Aug 22, 2026 | 9:58 AM

Share

ಬೆಂಗಳೂರು,ಆ.22: ಪನ್ನೀರ್ ಪ್ರಿಯರಿಗೆ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದೆ. ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ಸಂಸ್ಥೆಗಳಲ್ಲಿ ಕೃತಕವಾಗಿ ತಯಾರಿಸುವ ‘ಅನಲಾಗ್ ಪನ್ನೀರ್’ (Analog Paneer) ಬಳಕೆಯನ್ನು ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಅಧಿಕೃತ ಆದೇಶ ಹೊರಡಿಸಿದೆ.

ಏನಿದು ಕೃತಕ ಅಥವಾ ‘ಅನಲಾಗ್ ಪನ್ನೀರ್’?

ಸಾಮಾನ್ಯವಾಗಿ ಅಸಲಿ ಪನ್ನೀರ್ ಅನ್ನು ಸಂಪೂರ್ಣವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಂದ ತಯಾರಿಸಲಾಗುತ್ತದೆ. ಆದರೆ, ವೆಚ್ಚ ಕಡಿಮೆ ಮಾಡಲು ಮತ್ತು ಹೆಚ್ಚಿನ ಲಾಭ ಗಳಿಸಲು ಹಲವು ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ಪಿಷ್ಟ ಹಾಗೂ ಕೆಮಿಕಲ್‌ಗಳನ್ನು ಬಳಸಿ ತಯಾರಿಸಿದ ‘ಅನಲಾಗ್ ಪನ್ನೀರ್’ ಅನ್ನು ಗ್ರಾಹಕರಿಗೆ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಕೃತಕ ಪನ್ನೀರ್‌ನಲ್ಲಿ ಬಳಸುವ ರಾಸಾಯನಿಕಗಳು ಮತ್ತು ಗುಣಮಟ್ಟವಿಲ್ಲದ ಕೊಬ್ಬಿನಾಂಶ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ತರಹದ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತಿವೆ. ಆಹಾರ ಸುರಕ್ಷತಾ ಕಾಯ್ದೆಯಡಿ ಹಾಲಿನ ಉತ್ಪನ್ನವಲ್ಲದ ಕೃತಕ ವಸ್ತುವನ್ನು ‘ಪನ್ನೀರ್’ ಹೆಸರಿನಲ್ಲಿ ಗ್ರಾಹಕರಿಗೆ ನೀಡುವುದು ಕಾನೂನುಬಾಹಿರ.

ಇದನ್ನೂ ಓದಿ: ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಫ್‌ ಆಗಬಾರದು: ಹೈಕೋರ್ಟ್ ಖಡಕ್ ಆದೇಶ!

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.

ಹಾಲಿನ ಉತ್ಪನ್ನವೇ ಕಡ್ಡಾಯ: ಪನ್ನೀರ್ ತಯಾರಿಕೆಗೆ ಕಡ್ಡಾಯವಾಗಿ ಶುದ್ಧ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನಷ್ಟೇ ಬಳಸಬೇಕು.

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಬ್ರೇಕ್: ಯಾವುದೇ ಕಾರಣಕ್ಕೂ ಕೃತಕ ಅನಲಾಗ್ ಪನ್ನೀರ್ ಬಳಸಿ ಗ್ರಾಹಕರಿಗೆ ವಿತರಿಸುವಂತಿಲ್ಲ.

ದಾಳಿ ಹಾಗೂ ಶಿಕ್ಷೆ: ಇಲಾಖೆಯ ಅಧಿಕಾರಿಗಳು ರಾಜ್ಯದ ವಿವಿಧ ಹೋಟೆಲ್, ರೆಸ್ಟೋರೆಂಟ್ ಹಾಗೂ ಡೈರಿಗಳ ಮೇಲೆ ವಿಶೇಷ ದಾಳಿ ನಡೆಸಲಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಆಹಾರ ಸುರಕ್ಷತಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ