AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗ ಅನುಮತಿ ನಿರಾಕರಣೆ: ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ ರೈಲುಗಳ 2 ಟ್ರಿಪ್​​​ ರದ್ದು

ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲುಗಳ ಎರಡು ಪ್ರವಾಸಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚಿಸಿದೆ.

ಚುನಾವಣಾ ಆಯೋಗ ಅನುಮತಿ ನಿರಾಕರಣೆ: ಕರ್ನಾಟಕ-ಭಾರತ್ ಗೌರವ್ ಕಾಶಿ ದರ್ಶನ ರೈಲುಗಳ 2 ಟ್ರಿಪ್​​​ ರದ್ದು
ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲು
ವಿವೇಕ ಬಿರಾದಾರ
|

Updated on: Apr 17, 2023 | 6:54 AM

Share

ಬೆಂಗಳೂರು: ಭಾರತ್ ಗೌರವ್ ಕಾಶಿ ದರ್ಶನ ವಿಶೇಷ (Bharat Gaurav Kashi Darshan) ರೈಲುಗಳ (Train) ಎರಡು ಪ್ರವಾಸಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ (Karnataka Government) ಚುನಾವಣಾ ಆಯೋಗ (Election Commission) ಸೂಚಿಸಿದೆ. ಆಯೋಗದ ನಿರ್ದೇಶನದಂತೆ ಏಪ್ರಿಲ್ 14 ಮತ್ತು 28 ರಂದು ನಿಗದಿಯಾಗಿದ್ದ ಎರಡು ಪ್ರವಾಸಗಳನ್ನು ರದ್ದುಗೊಳಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಇಲಾಖೆಯು ಮಾರ್ಚ್ 25 ರಿಂದ ಭಾರತೀಯ ರೈಲ್ವೇಸ್ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ನ ಪೋರ್ಟಲ್ ಮೂಲಕ ಬುಕಿಂಗ್ ಸ್ವೀಕರಿಸಲು ಪ್ರಾರಂಭಿಸಿತ್ತು.

ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ ರಾಜ್ಯ ಸರ್ಕಾರವು ರಾಜ್ಯದ ವಿವಿಧ ಭಾಗಗಳಿಂದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗರಾಜ್‌ಗೆ ರೈಲು ಓಡಿಸಲು ಅನುಮತಿ ಕೋರಿ ಚುನಾವಣಾ ಆಯೋಗವನ್ನು ಸಂಪರ್ಕಿಸಿತ್ತು. ನಿಗದಿತ ಪ್ರವಾಸಗಳ ಬುಕ್ಕಿಂಗ್ ಅನ್ನು ತಕ್ಷಣವೇ ರದ್ದುಗೊಳಿಸುವಂತೆ ಚುನಾವಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ:  ಕಾಶಿ ಯಾತ್ರೆ ತೆರಳುವ ಯಾತ್ರಾರ್ಥಿಗಳಿಗೆ ಸಿಹಿ ಸುದ್ದಿ; ರಾಜ್ಯ ಸರ್ಕಾರದಿಂದ ಸಿಗುವ ಸವಲತ್ತುಗಳ ವಿವರ ಇಲ್ಲಿದೆ

ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಭಾರತ್ ಗೌರವ್ ಟೂರಿಸ್ಟ್ ರೈಲಿಗೆ ಚಾಲನೆ ನೀಡಿದರು. ಸೇವೆಯನ್ನು ಒದಗಿಸಲು ರಾಜ್ಯ ಸರ್ಕಾರವು IRCTC ಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ರಾಜ್ಯ ಸರ್ಕಾರದ ನಿರ್ಧಾರದಂತೆ, ಟಿಕೆಟ್ ಮುಂಗಡ ಟಿಕೆಟ್​ ಕಾಯ್ದಿರಿಸುವ ಪ್ರತಿ ವ್ಯಕ್ತಿಗೆ 5,000 ವಿಶೇಷ ರಿಯಾಯಿತಿ ನೀಡಲಾಗಿದೆ. ಒಬ್ಬರಿಗೆ ಟಿಕೆಟ್ ದರ 20,000 ರೂ. ಇದೆ.

ಪ್ರಧಾನಿ ಮೋದಿಯವರು 2022ರ ನವೆಂಬರ್‌ನಲ್ಲಿ ಸೇವೆಯನ್ನು ಪ್ರಾರಂಭಿಸಿದ ನಂತರ, ಇದುವರೆಗೆ ಯೋಜನೆಯಡಿ ಮೂರು ರೈಲುಗಳನ್ನು ನಿರ್ವಹಿಸಲಾಗಿದೆ. ನವೆಂಬರ್‌ನಲ್ಲಿ ಎರಡು ಮತ್ತು ಫೆಬ್ರವರಿಯಲ್ಲಿ ಒಂದು ರೈಲು ಒಟ್ಟು 1,644 ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಎಂಟು ದಿನಗಳ ಪ್ರವಾಸದ ಪ್ಯಾಕೇಜ್‌ನಲ್ಲಿ ವಿಚಾರಗೋಷ್ಠಿಗಳು, ಉಪನ್ಯಾಸಗಳು, ಗುಂಪು ಸಭೆಗಳು ಜೊತೆಗೆ ವಿಶ್ವನಾಥ ದೇವಾಲಯ ಮತ್ತು ವಾರಣಾಸಿ, ಪ್ರಯಾಗ್‌ರಾಜ್ ಮತ್ತು ಅಯೋಧ್ಯೆಯಲ್ಲಿನ ಪ್ರಮುಖ ಸಾಂಸ್ಕೃತಿಕ ಪರಂಪರೆಯ ಕೇಂದ್ರಗಳಿಗೆ ಭೇಟಿ ನೀಡಲಾಗುವುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್