AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋವಿ ನಿಗಮ ಅವ್ಯವಹಾರ: ನಕಲಿ ಕಂಪನಿಗಳ ಖಾತೆಗೆ ಜಮೆ ಆಯ್ತು ಕೋಟಿ ಕೋಟಿ ಹಣ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಭಾರಿ ಪ್ರಮಾಣದ ಅವ್ಯವಹಾರ ನಡೆದಿರುವುದು ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ. ಐದು ಖಾಸಗಿ ಕಂಪನಿಗಳಿಗೆ 34 ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಪತ್ತೆಯಾಗಿದೆ. ಈ ಹಗರಣದಲ್ಲಿ ಭಾಗಿಯಾಗಿರುವ ಅನೇಕ ಅಧಿಕಾರಿಗಳ ವಿರುದ್ಧ ತನಿಖೆ ನಡೆಯುತ್ತಿದೆ.

ಭೋವಿ ನಿಗಮ ಅವ್ಯವಹಾರ: ನಕಲಿ ಕಂಪನಿಗಳ ಖಾತೆಗೆ ಜಮೆ ಆಯ್ತು ಕೋಟಿ ಕೋಟಿ ಹಣ
ಭೋವಿ ನಿಗಮ
Shivaprasad B
| Edited By: |

Updated on:Nov 27, 2024 | 8:25 AM

Share

ಬೆಂಗಳೂರು, ನವೆಂಬರ್​ 27: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ (Karnataka Bhovi Development Corporation) ಬಹುಕೋಟಿ ಅವ್ಯವಹಾರ ಪ್ರಕರಣದ ತನಿಖೆ ಸಿಐಡಿ ನಡೆಸುತ್ತಿದ್ದು, ಐದು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂ. ಹಣ ವರ್ಗಾವಣೆಯಾಗಿರುವುದನ್ನು ಪತ್ತೆಹಚ್ಚಿದೆ. ಅಪರಾಧ ತನಿಖಾ ಇಲಾಖೆ (CID) ತನಿಖೆ ಎದುರಿಸಿದ್ದ ಜೀವಾ ಅವರ ಖಾತೆ​ಗೆ 7 ಕೋಟಿ 16 ಲಕ್ಷ ರೂ. ಜಮೆಯಾಗಿದೆ.

ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ, ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪ, ಮಾಜಿ ಅಧೀಕ್ಷಕ ಸುಬ್ಬಪ್ಪ ಅವರು ತಮ್ಮ ನೆರೆಹೊರೆಯವರು, ಬಾಡಿಗೆದಾರರು ಸಂಬಂಧಿಕರ ಹೆಸರಿನಲ್ಲಿ ನಕಲಿ ಕಂಪನಿ ತೆರೆದಿದ್ದು, ಅವರ ಖಾತೆಗಳಿಗೆ ಹಣ ಜಮೆಯಾಗಿದೆ.

ಇದೇ ಹಗರಣ ಸಂಬಂಧ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ ಅವರು, ಐದು ದಿನಗಳ ಹಿಂದೆ ಬೆಂಗಳೂರಿನ ಪದ್ಮನಾಭನಗರದ ರಾಘವೇಂದ್ರ ಲೇಔಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ಅಕ್ರಮ ಹಣ ವರ್ಗಾವಣೆ ಶೋಧಿಸಿರುವ ಸಿಐಡಿ, ಐದು ಕಂಪನಿಗಳಿಗೆ 34.18 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ.

ಇದನ್ನೂ ಓದಿ:ಭೋವಿ ನಿಗಮದ ಅವ್ಯವಹಾರದಲ್ಲಿ ಹೆಸರು ಪ್ರಸ್ತಾಪ: ಆರೋಪ ಹಿಂಪಡೆಯುವಂತೆ ಸಿಎಂಗೆ ಕೋಟ ಶ್ರೀನಿವಾಸ ಪತ್ರ

ಇದರಲ್ಲಿ ಜೀವಾ ಅವರಿಗೆ ಸೇರಿದ್ದು ಎನ್ನಲಾದ ಅನ್ನಿಕಾ ಎಂಟರ್ ಪ್ರೈಸ್ ಕಂಪನಿಗೆ 7.16 ಕೋಟಿ ರೂ. ಹಾಗೂ ಅವರ ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್ ಕಂಪನಿಗೆ 3.79 ಕೋಟಿ ರೂ. ಸೇರಿ ಒಟ್ಟು 10.9 ಕೋಟಿ ರೂ., ನಿಗಮದ ಸಿಬ್ಬಂದಿ ಯಶಸ್ವಿನಿ ಅವರಿಗೆ ಸೇರಿದ್ದ ಎನ್ನಲಾದ ಡ್ರೀಮ್ ಎಂಟರ್ ಪ್ರೈಸಸ್ ಕಂಪನಿಗೆ 8 ಕೋಟಿ 78 ಲಕ್ಷ ರೂ. ಯಶಸ್ವಿನಿ ಸೋದರ ಕಾರ್ತೀಕ್‌ ಗೌಡ ಹೆಸರಿನಲ್ಲಿನ ಆದಿತ್ಯ ಎಂಟರ್ ಪ್ರೈಸಸ್ ಕಂಪನಿಗೆ 4 ಕೋಟಿ 76 ಲಕ್ಷ ಜಮೆಯಾಗಿದೆ.

ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕನ ಆಪ್ತ ಸಿ.ಸಂತೋಷ ಹೆಸರಿನಲ್ಲಿನ ಸೋಮನಾಥೇಶ್ವರ ಎಂಟರ್ ಪ್ರೈಸಸ್ ಕಂಪೆನಿಗೆ ಬರೋಬ್ಬರಿ 9 ಕೋಟಿ 66 ಲಕ್ಷ ರೂ. ಕಾಂತ ಒಡೆಯರ್ ಹೆಸರಿನ ನ್ಯೂ ಡ್ರೀಮ್ ಎಂಟರ್ ಪ್ರೈಸಸ್ ಕಂಪನಿ 11 ಕೋಟಿ 40 ಲಕ್ಷ ರೂ. ಪದ್ಮಾ ಎಂಬಾಕೆ ಬ್ಯಾಂಕ್ ಅಕೌಂಟ್​ಗೆ ನಿಗಮ ಮತ್ತು ಬ್ಯಾಂಕ್ ಪಿಆರ್​​ಒ ಅಭಿಲಾಶ್​ ಅವರಿಗೆ ಸೇರಿದ ಎನ್ನಲಾಗಿರುವ ಕಂಪನಿಗೆ 1 ಕೋಟಿ 26 ಲಕ್ಷ ರೂ. ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಸೋದರಿ ಮಂಗಳ ರಾಮು ಬ್ಯಾಂಕ್ ಅಕೌಂಟ್​ ಗೆ 1 ಕೋಟಿ 48 ಲಕ್ಷ ರೂ. ಸಂದಾಯವಾಗಿದೆ. ಈ ಮೂಲಕ ಬರೊಬ್ಬರಿ 90 ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ.

ದನದ ಕೊಟ್ಟಿಗೆಯಲ್ಲಿ ಕಂಪನಿಗಳು

ಬೆಂಗಳೂರು ನಗರದಲ್ಲೇ ಕಾರ್ಯಚಟುವಟಿಕೆ ಹೊಂದಿವೆ ಎಂದು ಬಿಂಬಿಸಿಕೊಂಡಿದ್ದ ಈ ಕಂಪನಿಗಳ ಬೆನ್ನತ್ತಿ ಹೋಗಿದ್ದ ಅಧಿಕಾರಿಗಳು, ಕೆಲ ಕಂಪನಿಗಳ ಕಚೇರಿಗಳು ದನದ ಕೊಟ್ಟಿಗೆಯಲ್ಲಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ.

ಬರೊಬ್ಬರಿ 90 ಕೋಟಿಗೂ ಅಧಿಕ ಅವ್ಯವಹಾರ

ಸರ್ಕಾರವು ಭೋವಿ ಸಮುದಾಯದ ಅಭ್ಯುದಯಕ್ಕೆ ರೂಪಿಸಿದ್ದ ಆರ್ಥಿಕ ಯೋಜನೆಗಳಲ್ಲಿ ನಿಗಮದ ಕೆಲ ಅಧಿಕಾರಿಗಳು ಭಾರಿ ಭ್ರಷ್ಟಾಚಾರ ನಡೆಸಿದ್ದಾರೆ. 2018-2023ರವರೆಗೆ ಐದು ವರ್ಷಗಳಲ್ಲಿ ಸುಮಾರು 90 ಕೋಟಿಗೂ ಅಧಿಕ ಮೊತ್ತದ ಅಕ್ರಮ ನಡೆದಿರುವುದು ಗೊತ್ತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:21 am, Wed, 27 November 24

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ