AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರ ಇದರಲ್ಲಿದೆ – ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಇದೇ ವೇಳೆ ಮಾತನಾಡಿದ ಅವರು ಸಿದ್ದರಾಮಯ್ಯ ಅವಧಿಯಲ್ಲಿ ಭ್ರಷ್ಟಾಚಾರದ ಸರ್ಕಾರವಿತ್ತು. ಷಡ್ಯಂತ್ರ, ಸುಳ್ಳಿನಲ್ಲಿ ನಂಬಿಕೆ ಇಟ್ಟಿರುವುದು ಕಾಂಗ್ರೆಸ್ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಾತ್ರವೂ ಇದರಲ್ಲಿದೆ. 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದೆ ಎಂದು ಅರುಣ್ ಹೇಳಿದ್ದಾರೆ.

ಸಿಡಿ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರ ಇದರಲ್ಲಿದೆ - ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಸಿಡಿ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರ ಇದರಲ್ಲಿದೆ - ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 01, 2021 | 12:20 PM

Share

ದೆಹಲಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣ ಇತ್ತ ರಾಜ್ಯದಲ್ಲಿ ಹೊತ್ತಿಕೊಂಡು ಉರಿಯುತ್ತಿದೆ. ಈ ಮಧ್ಯೆ, ಪ್ರಕರಣದ ಬಗ್ಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಹೊತ್ತಿರುವ ಅರುಣ್ ಸಿಂಗ್ ಅವರು ಯುವತಿ ದೂರು ಆಧರಿಸಿ ತನಿಖೆ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಾತ್ರವೂ ಇದರಲ್ಲಿದೆ ಎಂದು ಕ್ಲುಪ್ತವಾಗಿ ಹೇಳಿದ್ದು, ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಅವರು ಸಿದ್ದರಾಮಯ್ಯ ಅವಧಿಯಲ್ಲಿ ಭ್ರಷ್ಟಾಚಾರದ ಸರ್ಕಾರವಿತ್ತು. ಷಡ್ಯಂತ್ರ, ಸುಳ್ಳಿನಲ್ಲಿ ನಂಬಿಕೆ ಇಟ್ಟಿರುವುದು ಕಾಂಗ್ರೆಸ್ ಪಕ್ಷ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಾತ್ರವೂ ಇದರಲ್ಲಿದೆ. 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದೆ ಎಂದು ದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಟಿವಿ9 ಪ್ರತಿನಿಧಿ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಇದನ್ನೂ ಓದಿ: ಸೂಕ್ತ ಸಮಯದಲ್ಲಿ ಇನ್ನುಳಿದ 9 ಆಡಿಯೋ ಸಾಕ್ಷ್ಯ ಬಿಡುಗಡೆ ಮಾಡ್ತೇವೆ; ಅದರಲ್ಲಿ ಶಿವಕುಮಾರ್​ ಹೆಸರೂ ಇದೆ -ಸಂತ್ರಸ್ತೆ ಸಹೋದರ

ಇದನ್ನೂ ಓದಿ: ಈಶ್ವರಪ್ಪ ಹಿರಿಯ ಸಚಿವರು, ಏನೇ ಮನಸ್ತಾಪವಿದ್ದರೂ ಸಿಎಂ ಜೊತೆ ಚರ್ಚಿಸಬೇಕಿತ್ತು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ

Published On - 11:40 am, Thu, 1 April 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು