AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ

ಸಿಎಂ ಸಿದ್ದರಾಮಯ್ಯನವರು ಕೋಗಿಲು ಲೇಔಟ್​ ಧ್ವಂಸ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕೊಡುತ್ತೇವೆ ಎಂದು ಹೇಳುತ್ತಾರೆ. ಈಗಾಗಲೇ ಅರ್ಜಿ ಹಾಕಿರುವವರಿಗೆ ಮನೆಯೇ ಕೊಟ್ಟಿಲ್ಲ. ತುಂಬಾ ಅನುಭವಿ ಸಿಎಂ ನೀವು. ದೇವರಾಜ ಅರಸು ಅವರ ದಾಖಲೆ ಮುರಿಯಲು ಹೊರಟಿದ್ದೀರಿ ಎಂದು ಎನ್. ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಕರ್ನಾಟಕ ಗೂಂಡಾ ರಾಜ್ಯವಾಗುತ್ತಿದೆ, ರಾಜ್ಯಪಾಲರ ಮಧ್ಯಪ್ರವೇಶವಾಗಲಿ; ಬಿಜೆಪಿ ನಾಯಕ ರವಿಕುಮಾರ್ ಆಗ್ರಹ
N Ravikumar
ಕಿರಣ್​ ಹನಿಯಡ್ಕ
| Edited By: |

Updated on: Jan 03, 2026 | 9:22 PM

Share

ಬೆಂಗಳೂರು, ಜನವರಿ 3: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆಯ (Bellary Riots) ವಿರುದ್ಧ ಬಿಜೆಪಿ ನಾಯಕ ಎನ್​. ರವಿಕುಮಾರ್ (N Ravikumar) ಆಕ್ರೋಶ ಹೊರಹಾಕಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಗೂಂಡಾ ರಾಜ್ಯ ಆಗುತ್ತಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಬೇಕು. ನಾವು ಸಿಬಿಐ ತನಿಖೆಗೆ ಆಗ್ರಹಿಸುತ್ತೇವೆ. ಸಿಬಿಐಗೆ ಕೊಡಲು ಆಗದಿದ್ದರೆ ಹಾಲಿ ನ್ಯಾಯಾಧೀಶರ ನೇತೃತ್ವದ ತನಿಖೆ ನಡೆಸಲಿ ಎಂದು ಬೆಂಗಳೂರಿನಲ್ಲಿ ವಿಧಾನ ಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಕೋಗಿಲು ಲೇಔಟ್​ ಧ್ವಂಸ ಕಾರ್ಯಾಚರಣೆಯಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕೊಡುತ್ತೇವೆ ಎಂದು ಹೇಳುತ್ತಾರೆ. ಈಗಾಗಲೇ ಅರ್ಜಿ ಹಾಕಿರುವವರಿಗೆ ಮನೆಯೇ ಕೊಟ್ಟಿಲ್ಲ. ತುಂಬಾ ಅನುಭವಿ ಸಿಎಂ ನೀವು. ದೇವರಾಜ ಅರಸು ಅವರ ದಾಖಲೆ ಮುರಿಯಲು ಹೊರಟಿದ್ದೀರಿ ಎಂದು ಎನ್. ರವಿಕುಮಾರ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆ: ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್

ಇವಿಎಂ ಕುರಿತ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿ 5 ಸಾವಿರಕ್ಕೂ ಹೆಚ್ಚು ಜನರನ್ನು ಮಾತಾಡಿಸಿ ಸಮೀಕ್ಷೆ ಮಾಡಲಾಗಿತ್ತು. ಶೇ. 84ರಷ್ಟು ಜನ ಇವಿಎಂ ಪರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ, ಈ ವರದಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುಖಭಂಗ ಉಂಟುಮಾಡಿದೆ. ಹೀಗಾಗಿ, ಈಗ ಸಮೀಕ್ಷೆಯನ್ನೇ ಸರ್ಕಾರ ಡಿಲೀಟ್ ಮಾಡಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ