ದೆಹಲಿಗೆ ಬರುವ ಕರ್ನಾಟಕದ ಬಿಜೆಪಿ ನಾಯಕರು ನನ್ನನ್ನು ಭೇಟಿಯಾಗಲೇಬೇಕಿಲ್ಲ: ರಾಧಾ ಮೋಹನ್ ದಾಸ್ ಅಗರವಾಲ್
ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ, ಒಂದಿಬ್ಬರ ಜಗಳವನ್ನು ಪಕ್ಷದ ಕಲಹ ಅಂತ ಹೇಳಬಾರದು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹದ್ದುಮೀರಿದೆ, ಹಾಗಾಗಿ ಯತ್ನಾಳ್ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಭಿನ್ನಾಭಿಪ್ರಾಯವನ್ನು ದೊಡ್ಡದಾಗಿ ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ಅಗರವಾಲ್ ಹೇಳಿದರು.
ದೆಹಲಿ: ರಾಜ್ಯ ಬಿಜೆಪಿ ಉಸ್ತುವಾರಿಯಾಗಿರುವ ರಾಧಾ ಮೋಹನ್ ದಾಸ್ ಅಗರವಾಲ್ ಅವರಿಗೆ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತವರ ತಂಡ ದೆಹಲಿಗೆ ಆಗಮಿಸಿದ್ದು ಗೊತ್ತೇ ಇಲ್ಲ. ನಿನ್ನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ತಾನು ರಾಜ್ಯದ ಉಸ್ತುವಾರಿ ಆಗಿರುವ ಕಾರಣಕ್ಕೆ ದೆಹಲಿಗೆ ಬಂದವರೆಲ್ಲ ತನ್ನನ್ನು ಭೇಟಿಯಾಗಲೇಬೇಕು ಅಂತೇನಿಲ್ಲ, ತಮ್ಮ ಕೆಲಸಗಳಿಗಾಗಿ ಅವರು ಬಂದಿರಬಹುದು. ಓಂ ಪಾಠಕ್ ಅವರು ಪಕ್ಷದ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರಾಗಿದ್ದಾರೆ, ಅಶಿಸ್ತಿಗೆ ಸಂಬಂಧಿಸಿದ ವಿಷಯವನ್ನು ಅವರೇ ಗಮನಿಸುತ್ತಾರೆ ಎಂದು ಅಗರ್ವಾಲ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಜಗದಾಂಬಿಕಾ ಪಾಲ್ ಭೇಟಿಯಾದ ಯತ್ನಾಳ್ ಟೀಂ: ಏನೆಲ್ಲಾ ಚರ್ಚೆ ಆಯ್ತು?
Latest Videos
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ

