AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ ಮಾಡಾಳ್​​ ವಿರೂಪಾಕ್ಷಪ್ಪ

ಪುತ್ರನ​ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದು, ಇದೀಗ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ ಮಾಡಾಳ್​​ ವಿರೂಪಾಕ್ಷಪ್ಪ
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (ಎಡಚಿತ್ರ) ಮತ್ತು ಲೋಕಾಯುಕ್ತ ದಾಳಿ ವೇಳೆ ಜಪ್ತಿ ಮಾಡಿದ ಹಣ (ಬಲ ಚಿತ್ರ-ANI)
TV9 Web
| Edited By: |

Updated on:Mar 06, 2023 | 11:53 AM

Share

ಬೆಂಗಳೂರು: ಲೋಕಾಯುಕ್ತ ದಾಳಿಯಲ್ಲಿ ಪುತ್ರನ ಮನೆಯಲ್ಲಿ ಸಿಕ್ಕ ಕೋಟಿ ಕೋಟಿ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ(Madal Virupakshappa) ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಅಲ್ಲಿಸಿದ್ದಾರೆ. ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರಿಂದ ಜಾಮೀನು ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸುವಂತೆ ಕೋರ್ಟ್​ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Lokayukta: ನಾಪತ್ತೆಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪತ್ತೆಗಾಗಿ 3 ವಿಶೇಷ ತಂಡ ರಚನೆ 

ಇಂದೇ (ಮಾರ್ಚ್ 06) ವಿಚಾರಣೆಗೆ ಮಾಡಾಳ್ ವಿರೂಪಾಕ್ಷಪ್ಪ ಪರ ವಕೀಲ ಸಂದೀಪ್ ಪಾಟೀಲ್ ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಹೈಕೋರ್ಟ್​ ನ್ಯಾಯಮೂರ್ತಿ ಕೆ.ನಟರಾಜನ್ ಅವರು ನಾಳೆಗೆ(ಮಾರ್ಚ್ 07) ವಿಚಾರಣೆ ನಿಗದಿಪಡಿಸಿದ್ದಾರೆ.

ವಿರೂಪಾಕ್ಷಪ್ಪಗಾಗಿ ಮೂರು ತಂಡ ರಚನೆ

ಶಾಸಕ ಮಾಡಾಳ್​ ಪುತ್ರನ​ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಬೆನ್ನಲ್ಲೇ ಇಂದಿಗೆ ಐದು ದಿನಗಳು ಆದರೂ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪ್ರತ್ಯಕ್ಷವಾಗಿಲ್ಲ. ಪುತ್ರನ ಬಂಧನದ ಬಳಿಕ ಮಾಡಾಳ್ ವಿರೂಪಾಕ್ಷಪ್ಪ ತಮ್ಮ ಫೋನ್​ ಸ್ವಿಚ್​ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರ ಮತ್ತೆಗೆ ಲೋಕಾಯುಕ್ತ ಅಧಿಕಾರಿಗಳು ತಂಡ ಕಟ್ಟಿಕೊಂಡು ಕಾರ್ಯಚರಣೆ ನಡೆಸಿದ್ದಾರೆ.

ಪತ್ತೆಗೆ ಲೋಕಾಯುಕ್ತ ಮೂರು ತಂಡ ರಚಿಸಿದೆ. ಮೂವರು ಡಿವೈಎಸ್ ಪಿ ಗಳ ನೇತೃತ್ವದಲ್ಲಿ ಸುಮಾರು ಹದಿನೈದು ಜನರ ಅಧಿಕಾರಿಗಳ ಒಳಗೊಂಡಿರುವ ಮೂರು ಟೀಮ್​ ರಚನೆ ಮಡಲಾಗಿದ್ದು, ಮಾಡಾಳ್​ಗಾಗಿ ಹುಡುಕಾಟ ಆರಂಭಿಸಿವೆ.

ಪೊಲೀಸರು ನೋಟಿಸ್ ನೀಡಿದ ಬಳಿಕ ವಿಚಾರಣೆಗೆ ಹಾಜರಾಗುವ ಲೆಕ್ಕಾಚಾರದಲ್ಲಿ ಮಾಡಾಳ್​ ಇದ್ದಾರೆ. ಆದ್ರೆ, ನೋಟಿಸ್ ನೀಡದೇ ಎಂಎಲ್​ಎ ಲಾಕ್ ಮಾಡಲು ಲೋಕಾಯುಕ್ತ ಅಧಿಕಾರಿಗಳ ಪ್ಲಾನ್ ಮಾಡಿದ್ದಾರೆ. ನೋಟಿಸ್​ ನೀಡಿದ ತಕ್ಷಣ ಬಂಧನ ಮಾಡುವಂತಿಲ್ಲ. ಕನಿಷ್ಠ ಮೂರು ಬಾರಿ ವಿಚಾರಣೆ ಮಾಡಿ ನಂತರ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂದು ಅರೆಸ್ಟ್ ಮಾಡಬಹುದು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನೋಟಿಸ್​ ನೀಡದೇ ಮಾಡಾಳ್​ ವಿರೂಪಾಕ್ಷಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುವ ಚಿಂತನೆ ನಡೆಸಿದೆ.

ಇದೀಗ ಮಾಡಾಳ್ ಅಜ್ಞಾತ ಸ್ಥಳದಿಂದಲೇ ಜಾಮೀನಿಗಾಗಿ ಕೋರ್ಟ್​ ಮೊರೆ ಹೋಗಿದ್ದು, ನಾಳೆ ಜಾಮೀನು ಸಿಗುತ್ತಾ ಎನ್ನುವುದನ್ನು ಕಾದುನೋಡಬೇಕಿದೆ.

Published On - 11:40 am, Mon, 6 March 23

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ