AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ?; ಟ್ವಿಟ್ಟರ್​ನಲ್ಲಿ ರಾಜ್ಯ ಬಿಜೆಪಿ ಪ್ರಶ್ನೆ

ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್​ರವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ?; ಟ್ವಿಟ್ಟರ್​ನಲ್ಲಿ ರಾಜ್ಯ ಬಿಜೆಪಿ ಪ್ರಶ್ನೆ
ಡಿ.ಕೆ. ಶಿವಕುಮಾರ್
TV9 Web
| Edited By: |

Updated on:Jul 10, 2021 | 11:16 AM

Share

ಬೆಂಗಳೂರು: ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ತಲೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಾರಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ. ಟ್ವಿಟ್ಟರ್​ನಲ್ಲಿ ಡಿಕೆಶಿಯವರೇ ನೀವು ರಾಜಕಾರಣಿಯೋ ಅಥವಾ ರೌಡಿಯೋ? ಎಂದು ಪ್ರಶ್ನಿಸಿದೆ. ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್​ರವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಗತಕಾಲದ ನೆನಪು ಕಾಡಿತೇ? ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಎಂದು ಪ್ರಶ್ನಿಸಿದ ರಾಜ್ಯ ಬಿಜೆಪಿ, ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡುವುದು ಅಕ್ಷಮ್ಯ ಎಂದು ತಿಳಿಸಿದೆ. ಅಲ್ಲದೆ ‘ರೌಡಿಡಿಕೆಶಿ’ ಟ್ಯಾಗ್ ಮಾಡಿ ವ್ಯಂಗ್ಯ ಮಾಡಿದೆ.

ಆಗಿದ್ದೇನು? ಜಿ.ಮಾದೇಗೌಡರ ಆರೋಗ್ಯ ವಿಚಾರಿಸಲು ಡಿ.ಕೆ.ಶಿವಕುಮಾರ್ ಕೆ.ಎಂ.ದೊಡ್ಡಿಗೆ ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹಿಂಭಾಗ ಬರುತ್ತಿದ್ದರು. ಅಲ್ಲದೇ ಹಿಂಭಾಗದಿಂದ ಬಂದು ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿದ ಆರೋಪ ಕೇಳಿಬಂದಿದ್ದು, ಕಾರ್ಯಕರ್ತನ ತಲೆ ಮೇಲೆ ಪಟಾರ್ ಅಂತ ಡಿಕೆಶಿ ಬಾರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಕೊಟ್ಟ ಏಟಿಗೆ ಕಾರ್ಯಕರ್ತರು ತಬ್ಬಿಬ್ಬಾಗಿದ್ದಾರೆ.

ಇದನ್ನೂ ಓದಿ

ಪಕ್ಕದಲ್ಲಿ ಬಂದ ಕಾಂಗ್ರೆಸ್ ಕಾರ್ಯಕರ್ತನಿಗೆ ಥಳಿಸಿದ ಡಿ.ಕೆ.ಶಿವಕುಮಾರ್

ಕುಮಾರಸ್ವಾಮಿ ವಿಷಯದಲ್ಲಿ ನಾನು ಯಾವುದೇ ತಪ್ಪು ಮಾತಾಡಿಲ್ಲ, ನಾನ್ಯಾಕೆ ಕ್ಷಮೆ ಕೇಳಲಿ: ರಾಕ್​ಲೈನ್ ವೆಂಕಟೇಶ್

(Karnataka BJP questioned that DK shivakumar you are a politician or Rowdy)

Published On - 11:14 am, Sat, 10 July 21

Follow Us
Web contact
Web contact

TV9 Kannada

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?