AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ಅಸ್ತ್ರಕ್ಕೆ ಬಿಜೆಪಿಯಿಂದ ಒಳ ಮೀಸಲಾತಿ ಬ್ರಹ್ಮಾಸ್ತ್ರ: ಒಳಮೀಸಲಾತಿ ಜಾರಿಗೆ ಒತ್ತಾಯಿಸಲು ಬಿಜೆಪಿ ನಿರ್ಧಾರ

ಮುಡಾ ಹಗರಣದ ಸಂಕಷ್ಟದ ಮಧ್ಯೆಯೇ ಜಾತಿ ಗಣತಿ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಒಳ ಮೀಸಲಾತಿ ಬ್ರಹ್ಮಾಸ್ತ್ರದ ಮೂಲಕ ತಿರುಗೇಟು ನೀಡಲು ಪ್ರತಿಪಕ್ಷ ಬಿಜೆಪಿ ಮುಂದಾಗಿದೆ.ಕಾಂಗ್ರೆಸ್ ಪಾಳೆಯವನ್ನು ಜಾತಿವ್ಯೂಹದಲ್ಲಿ ಸಿಲುಕಿಸಲು ಬಿಜೆಪಿ ಮುಂದಾಗಿರುವ ಬಗ್ಗೆ ಇಲ್ಲಿದೆ ವಿವರ.

ಜಾತಿಗಣತಿ ಅಸ್ತ್ರಕ್ಕೆ ಬಿಜೆಪಿಯಿಂದ ಒಳ ಮೀಸಲಾತಿ ಬ್ರಹ್ಮಾಸ್ತ್ರ: ಒಳಮೀಸಲಾತಿ ಜಾರಿಗೆ ಒತ್ತಾಯಿಸಲು ಬಿಜೆಪಿ ನಿರ್ಧಾರ
ಜಾತಿಗಣತಿ ಅಸ್ತ್ರಕ್ಕೆ ಬಿಜೆಪಿಯಿಂದ ಒಳ ಮೀಸಲಾತಿ ಬ್ರಹ್ಮಾಸ್ತ್ರ
ಪ್ರಸನ್ನ ಗಾಂವ್ಕರ್​
| Edited By: |

Updated on: Oct 09, 2024 | 1:58 PM

Share

ಬೆಂಗಳೂರು, ಅಕ್ಟೋಬರ್ 9: ಕರ್ನಾಟಕ ರಾಜಕೀಯದಲ್ಲಿ ಈಗ ಜಾತಿಯೇ ಅಸ್ತ್ರವಾಗಿದೆ. ಮುಡಾ ಹಗರಣ ಮರೆ ಮಾಚಲು ಜಾತಿಗಣತಿ ಮುನ್ನಲೆಗೆ ತಂದಿದ್ದಾರೆಂದು ಕಾಂಗ್ರೆಸ್ ನಾಯಕರನ್ನು ಆರೋಪಿಸುತ್ತಿದ್ದ ಬಿಜೆಪಿ ಇದೀಗ ಬ್ರಹ್ಮಾಸ್ತ್ರವೊಂದನ್ನ ಪ್ರಯೋಗಿಸಿದೆ. ಜಾತಿಗಣತಿ ವರದಿ ಮಂಡನೆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ಒಳ ಮೀಸಲಾತಿಯನ್ನೂ ಜಾರಿ ಮಾಡುವಂತೆ ಒತ್ತಡ ಹಾಕಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಈ ವಿಚಾರವಾಗಿ ಮಂಗಳವಾರ ಸಭೆ ನಡೆಸಿದ್ದ ಬಿಜೆಪಿ ನಾಯಕರು, ಎರಡ್ಮೂರು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಸಲ್ಲಿಸಿಲು ನಿರ್ಧರಿಸಿದ್ದಾರೆ. ಈ ಮೂಲಕ ಜಾತಿಗಣತಿ ಕೈಗೆತ್ತಿಕೊಂಡಿರುವ ಕಾಂಗ್ರೆಸ್ ಪಡೆಯನ್ನ ಜಾತಿವ್ಯೂಹದಲ್ಲಿ ಸಿಲುಕಿಸಲು ಕೌಂಟರ್ ಪ್ಲ್ಯಾನ್ ಮಾಡಿದ್ದಾರೆ.

ಜಾತಿಗಣತಿ ಬಗ್ಗೆ ಕಾಂಗ್ರೆಸ್‌ನಲ್ಲೇ ಭಿನ್ನರಾಗ

ಈ ಮಧ್ಯೆ, ಜಾತಿಗಣತಿ ವರದಿ ತಯಾರಿಕೆ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್, ವರದಿ ಹೇಗೆ ತಯಾರಿಸಿದ್ದಾರೋ ಏನೋ ಎಂದು ಹೇಳಿದ್ದಾರೆ. ಹೀಗಾಗಿ ಎಲ್ಲರ ಜೊತೆ ಚರ್ಚಿಸಿ ಕ್ಯಾಬಿನೆಟ್‌ ಮುಂದೆ ತರಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಜಾತಿಗಣತಿ ಜಾರಿಗೆ ಕಾಂಗ್ರೆಸ್‌ನಲ್ಲಿ ಪರ-ವಿರೋಧದ ಅಲೆ ಎದ್ದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ಜಿ ಪರಮೇಶ್ವರ ಹಾಗೂ ಇತರರು, ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಹೀಗಾಗಿ ಪರ-ವಿರೋಧ ಇರುವುದು ಸಹಜ. ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಲಿ ಎಂದಿದ್ದಾರೆ.

ಇದನ್ನೂ ಓದಿ: ಮುಡಾ ಸಂಕಷ್ಟದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಡಿಕೆ ಸಹೋದರರು! ಧಿಢೀರ್ ವರಸೆ ಬದಲಿಸಲು ಇದೆ ಬಲವಾದ ಕಾರಣ

ಒಟ್ಟಿನಲ್ಲಿ ಜಾತಿಗಣತಿ ವಿಚಾರ ಕ್ಲೈಮ್ಯಾಕ್ಸ್ ಹಂತಕ್ಕೆ ಬರುತ್ತಿದೆ. ಕ್ಯಾಬಿನೆಟ್‌ನಲ್ಲಿ ಚರ್ಚೆಯಾದ ಬಳಿಕ ಸರ್ಕಾರದ ಮೇಲೆ ಒಳಮೀಸಲಾತಿಯ ಬಲೆ ಬೀಳುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ