AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janotsav: ಸೆ.11 ರಂದು ‘ಜನೋತ್ಸವ’ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ

ಬರುವ ಸೆಪ್ಟೆಂಬರ್ 11 ರಂದು ಜನೋತ್ಸವ ಕಾರ್ಯಕ್ರಮವನ್ನು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ.

Janotsav: ಸೆ.11 ರಂದು 'ಜನೋತ್ಸವ' ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ
BJP
TV9 Web
| Edited By: |

Updated on:Aug 18, 2022 | 10:54 AM

Share

ಬರುವ ಸೆಪ್ಟೆಂಬರ್ 11 ರಂದು ಜನೋತ್ಸವ ಕಾರ್ಯಕ್ರಮವನ್ನು ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದಾರೆ. ವರಿಷ್ಠರ ಸಮಯ ನಿಗದಿಪಡಿಸಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ, ದೊಡ್ಡಬಳ್ಳಾಪುರದಲ್ಲಿ ಬಿಜೆಪಿಯ ಜನೋತ್ಸವ ಸಮಾವೇಶ ನಡೆಯಲಿದೆ.

ಜನೋತ್ಸವದ ಪೂರ್ವ ಸಿದ್ದತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಸಭೆ ನಡೆದಿದೆ. ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಅಧಿಕೃತ ನಿವಾಸದಲ್ಲಿ ಜನೋತ್ಸವ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸಭೆ ನಡೆಯಿತು.

ಈ ಹಿಂದೆ ನಿಗದಿಯಾಗಿದ್ದ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಡೆಯಲಿದೆ. ಜು.28ರಂದು ದೊಡ್ಡಬಳ್ಳಾಪುರದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿತ್ತು. ಸೆಪ್ಟೆಂಬರ್ 11ರಂದು ದೊಡ್ಡಬಳ್ಳಾಪುರದಲ್ಲಿಯೇ ಜನೋತ್ಸವ ಕಾರ್ಯಕ್ರಮ ನಿಗದಿಯಾಗಿದೆ.

ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮುಖಂಡರನ್ನು ಆಹ್ವಾನಿಸುವ ಉದ್ದೇಶವಿದ್ದು, ಯಾವ ರೀತಿ ಕಾರ್ಯಕ್ರಮ ಆಯೋಜನೆ ಮಾಡಬೇಕು ಎನ್ನುವ ಚರ್ಚೆ ನಡೆಸಲಾಗಿತ್ತು.

ಈ ಕಾರ್ಯಕ್ರಕ್ಕೆ ಆಹ್ವಾನ ನೀಡಲು ಸ್ವತಃ ಸಿಎಂ ಬೊಮ್ಮಾಯಿ ಅವರೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಜನೋತ್ಸವ ಸಮಾವೇಶಕ್ಕೆ ಆಗಮಿಸಬೇಕೆಂದು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯ ದೃಷ್ಟಿಯಿಂದ ಈ ಸಮಾವೇಶ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರದ ನಾಯಕರು ಭಾಗವಹಿಸುವ ಸಾಧ್ಯತೆಗಳಿವೆ.

Published On - 10:44 am, Thu, 18 August 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ