Karnataka Breaking News: ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್- ಪಾಕ್ ನಡುವೆ ವಿಶ್ವಕಪ್ ಪಂದ್ಯ ನಡೆಯಲಿದೆ. ಹೀಗಾಗಿ ಬೆಂಗಳೂರು ಸಂಚಾರ ಪೊಲೀಸರು ಟ್ರಾಫಿಕ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದು ವಾಹನ ದಟ್ಟಣೆ ಹೆಚ್ಚಾಗುವ ಹಿನ್ನೆಲೆ ಇಂದು ಬೆಳಗ್ಗೆ 7ರಿಂದ ರಾತ್ರಿ 11ರವರೆಗೆ ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಿದ್ದಾರೆ. ಇನ್ನು ಬೆಂಗಳೂರಲ್ಲಿ ನ.05ರಂದು ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಎಂಜಿ ರಸ್ತೆಯಿಂದ ಬೈಯ್ಯಪ್ಪನಹಳ್ಳಿವರೆಗೆ ಕೆಲಕಾಲ ಮೆಟ್ರೋ ಸೇವೆ ಸ್ಥಗಿತವಾಗಲಿದೆ. ವಿವೇಕಾನಂದ-ಇಂದಿರಾನಗರದವರೆಗೆ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಬೆಳಗ್ಗೆ 9 ಗಂಟೆವರೆಗೆ ಮೆಟ್ರೋ ಓಡಾಡುವುದಿಲ್ಲ ಎಂದು ಬಿಎಂಆರ್ಸಿಎಲ್ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮತ್ತೊಂದೆಡೆ ಹಾಸನಾಂಬೆ ದರ್ಶನಕ್ಕೆ ಜನ ಸಾಗರವೇ ಹರಿದು ಬರುತ್ತಿದೆ. ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಮಾಡ್ತಿದ್ದಾರೆ. ಇಂದು ಬೆಳಿಗ್ಗೆ5 ಗಂಟೆಯಿಂದಲೇ ದರ್ಶನ ಆರಂಭವಾಗಿದೆ. ಇದೆಲ್ಲದರ ಜೊತೆಗೆ ಅಪರಾಧ, ರಾಜಕೀಯ ಸೇರಿದಂತೆ ರಾಜ್ಯದ ಪ್ರಮುಖ ಸುದ್ದಿಗಳ ಮಾಹಿತಿಗಾಗಿ ಟಿವಿ9 ಡಿಜಿಟಲ್ ಫಾಲೋ ಮಾಡಿ.
ಹಾಸನ: ಸಿಡಿಲು ಬಡಿದು ಮನೆಗಳಲ್ಲಿದ್ದ ಎಲೆಕ್ಟ್ರಿಕಲ್ ಉಪಕರಣಗಳಿಗೆ ಹಾನಿಯಾದ ಘಟನೆ ಜಿಲ್ಲೆಯ ಆಲೂರು ಪಟ್ಟಣದಲ್ಲಿ ನಡೆದಿದೆ. ಹಲವು ಮನೆಗಳ ಟಿವಿ, ಫ್ರಿಡ್ಜ್, ಇತರೆ ಎಲೆಕ್ಟ್ರಿಕಲ್ ಉಪಕರಣಗಳಿಗೆ ಹಾನಿಯಾಗಿದ್ದು, ಪಟ್ಟಣದ ಐಟಿಐ ಕಾಲೇಜಿನ ಆವರಣದಲ್ಲಿ ತೆಂಗಿನ ಮರ ಹೊತ್ತಿಉರಿದಿದೆ. ಕೋಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ವಾಟೆಗುಂಡಿ ಗ್ರಾಮದ ಸಮೀಪ ಜೀಪ್ನ ಟ್ರ್ಯಾಲಿ ಪಲ್ಟಿಯಾಗಿ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದ್ದು, ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಲಿಂಗಯ್ಯ(55)ಮೃತ ರ್ದುದೈವಿ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು: ಡಿಕೆ ಶಿವಕುಮಾರ್ ಸಿಎಂ ಆದ್ರೆ JDS ಶಾಸಕರ ಬೆಂಬಲವಿದೆ ಎಂದು ಹೇಳಿಕೆ ವಿಚಾರ ‘ ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರೀತಿ ಏನು ಎಂದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ದಯವಿಟ್ಟು ನಾನು ಹೆಚ್.ಡಿ.ಕುಮಾರಸ್ವಾಮಿಗೆ ಮನವಿ ಮಾಡುತ್ತೇನೆ. 136 ಶಾಸಕರಿದ್ದೇವೆ, ಸಾಕಷ್ಟು ಬೆಂಬಲ ಇದೆ, ನಿಮ್ಮ ಪಕ್ಷ NDAನಲ್ಲಿದೆ. ಎನ್ಡಿಎನಲ್ಲಿದ್ದು, ಕಾಂಗ್ರೆಸ್ ಪಾರ್ಟಿ ಬಗ್ಗೆ ಏಕೆ ಮಾತನಾಡುತ್ತೀರಾ? ಎಂದಿದ್ದಾರೆ.
ಬೆಂಗಳೂರು: ಯಾರಾದ್ರೂ ಶಾಸಕರು ನನ್ನ ಪರ ಮಾತಾಡಿದ್ರೆ ನೋಟಿಸ್ ಜಾರಿ ಮಾಡುವೆ ಎಂದು ತಮ್ಮ ಪರ ಬ್ಯಾಟಿಂಗ್ ಬೀಸಿದ ಶಾಸಕರ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಫುಲ್ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ‘
ಪಕ್ಷದಲ್ಲಿ ಶಿಸ್ತು ಇರಬೇಕು, ನನಗೆ ಯಾರ ಶಾಸಕರ ಬೆಂಬಲವೂ ಬೇಡ ಎಂದರು.
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಬಿಜೆಪಿ ಮಂಡಲ ವತಿಯಿಂದ ಬರ ಅಧ್ಯಯನ ನಡೆಸಲಾಯಿತು. ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಬರ ವೀಕ್ಷಣೆ ಮಾಡಲಾಯಿತು. ಈ ವೇಳೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಹೊನ್ನಾಳಿ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಜೆ.ಕೆ.ಸುರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಹೊನ್ನಿಗಾನಹಳ್ಳಿ ಗ್ರಾಮದ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ಮರೀಗೌಡ(75) ಕಾಡಾನೆಗೆ ಸಾವನಪ್ಪಿದ ದುರ್ಧೈವಿ. ಜಮೀನನಲ್ಲಿ ಕೆಲಸ ಮಾಡುವಾಗ ಒಂಟಿ ಸಲಗ ಏಕಾಏಕಿ ದಾಳಿ ಮಾಡಿದ್ದು, ಈ ದುರ್ಘಟನೆ ನಡೆದಿದೆ. ಈ ಘಟನೆ ಕೋಡಿಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ರಾಮನಗರ: ಅರ್ಧ ತಾಸು ಸುರಿದ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನ ಸರ್ವೀಸ್ ರಸ್ತೆ ಕೆರೆಯಂತಾಗಿದೆ. ಹೌದು, ರಾಮನಗರ(Ramanagara) ಜಿಲ್ಲೆಯ ಬಿಡದಿ ಹೋಬಳಿಯ ತಾತಪ್ಪನದೊಡ್ಡಿ ಬಳಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಹೈವೇ ಚರಂಡಿಯಲ್ಲಿ ಸರಿಯಾಗಿ ಕೆಲಸ ಮಾಡದ ಪರಿಣಾಮ ರಸ್ತೆಯಲ್ಲಿ ನೀರು ನಿಂತಿದೆ.
ಚಿಕ್ಕಮಗಳೂರು: ನಾಳೆ ಬಾಬಾ ಬುಡನ್ಸ್ವಾಮಿ ದರ್ಗಾದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಈ ಹಿನ್ನಲೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಹೌದು, ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸೇರಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.
ಜಿಲ್ಲೆಯ ಗಡಿಭಾಗ ಸೇರಿ 26 ಚೆಕ್ಪೋಸ್ಟ್, 49 ಸೆಕ್ಟರ್ ಆಫೀಸರ್ ನೇಮಿಸಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ, ಡ್ರೋನ್ ಕಣ್ಗಾವಲು ಇರಿಸಿದ್ದು, ಮುನ್ನೆಚ್ಚರಿಕೆಯಿಂದ ಚಿಕ್ಕಮಗಳೂರಿನ M.G.ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೊಲೀಸರಿಂದ ಪಥಸಂಚಲನ ಮಾಡಲಾಗಿದೆ.
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ಗೆ ನೋಟಿಸ್ ವಿಚಾರ ‘ ಐಟಿ, ಇಡಿ, ಸಿಬಿಐ ಕೇಸ್ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ‘ನಾನೇನು ತಪ್ಪು ಮಾಡಿಲ್ಲ, ನಾನೇನು ಭಯಪಡಲ್ಲ. ನಾನು, ನನ್ನ ಪತ್ನಿ ಅಕೌಂಟ್ ಜನರ ಮುಂದಿದೆ. ತೆರಿಗೆ ಕಟ್ಟುತ್ತೇವೆ ಎಂದರು.
ಬೆಂಗಳೂರು: ಬರ ಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ ಏಳು ತಾಲೂಕುಗಳ ಸೇರ್ಪಡೆ ಮಾಡಲಾಗಿದೆ. ಹೌದು, ಬೀದರ್ ಜಿಲ್ಲೆಯ ಔರಾದ್, ಬೀದರ್, ಚಿಟಗುಪ್ಪಾ, ಹುಮ್ನಾಬಾದ್, ಕಮಲನಗರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು, ವಿಜಯಪುರ ಜಿಲ್ಲೆಯ ತಿಕೋಟಾವನ್ನು ಕಂದಾಯ ಇಲಾಖೆಯಿಂದ ಆದೇಶಿಸಲಾಗಿದೆ.
ಬೆಂಗಳೂರು: ದೊಡ್ಡಗುಂಟಾದಲ್ಲಿ ದಸರಾ ಮಹೋತ್ಸವ ಹಿನ್ನೆಲೆ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೆ ಪೊಲೀಸ್ ಆಯುಕ್ತ ದಯಾನಂದ ಆದೇಶಿದ್ದಾರೆ. ನಾಳೆ(ನ.05) ಸಂಜೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಜೊತೆಗೆ ಬೆಳಗ್ಗೆ 6 ಗಂಟೆಯಿಂದ ನಾಳೆ ಸಂಜೆ 6ರವರೆಗೆ ಮದ್ಯಮಾರಾಟವನ್ನು ಕೂಡ ನಿಷೇಧ ಮಾಡಲಾಗಿದೆ.
ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಯದುವೀರ್ ದಂಪತಿ ಭೇಟಿ ನೀಡಿದ್ದಾರೆ. ವಿಎಸ್ಐಎಲ್ ಕಾರ್ಯಕ್ರಮದ ಪ್ರವಾಸದಲ್ಲಿರುವ ಯದುವೀರ್ ದಂಪತಿ, ಶಿವಮೊಗ್ಗ ನಗರದ ವಿನೋಬ ನಗರದಲ್ಲಿರುವ ಬಿಎಸ್ವೈ ಮನೆಗೆ ಭೇಟಿ ನೀಡಿ, ಮಧ್ಯಾಹ್ನದ ಭೋಜನ ಮಾಡಲಿದ್ದಾರೆ. ಈ ವೇಳೆ ಶಾಸಕ ಬಿ.ವೈ ವಿಜಯೇಂದ್ರ ,ಸಂಸದ ಬಿ.ವೈ ರಾಘವೇಂದ್ರ ಉಪಸ್ಥಿತರಿದ್ದಾರೆ.
ಬೆಂಗಳೂರು: ಡಿ.ಕೆ ಶಿವಕುಮಾರ್ ನಾಳೆ ಸಿಎಂ ಆಗೋದಾದ್ರೆ JDS ಶಾಸಕರ ಬೆಂಬಲ ಕೊಡಿಸುವುದಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಆಫರ್ ಕೊಟ್ಟಿದ್ದಾರೆ. ಹೌದು, ಅವರೇ ಸಿಎಂ ಆಗುವುದಾದರೆ ನಮ್ಮ 19 ಜನ ಶಾಸಕರ ಬೆಂಬಲ ಇದೆ ಎಂದರು.
ಬೆಂಗಳೂರು: ಜೆಡಿಎಸ್ ಪಕ್ಷದಿಂದ ಬರ ಅಧ್ಯಯನ ತಂಡ ರಚನೆ ಮಾಡಲಾಗಿದೆ. ಹೌದು, 31 ಜಿಲ್ಲೆಯ ಬರ ಆಧ್ಯಯನಕ್ಕೆ 24 ತಂಡ ರಚನೆ ಮಾಡಿದ್ದು, 1) ಮೈಸೂರಿಗೆ ಜಿ.ಡಿ.ದೇವೇಗೌಡ, ಸಾರಾ ಮಹೇಶ್, ಮಹದೇವ್,ಅಶ್ವಿನ್ ಕುಮಾರ್, ಮಂಜುನಾಥ್, 2) ಮಂಡ್ಯ- ಟಿ.ಸಿ.ತಮಣ್ಣ, ಜಿಲ್ಲಾಧ್ಯಾಕ್ಷ ರಮೇಶ್ ಗೌಡ,ಡಾ.ರವೀಂದ್ರ ಶ್ರೀಕಂಠಯ್ಯ,ಸುರೇಶ್ ಗೌಡ, 3)ಹಾಸನ- ಶಾಸಕರಾದ ಎ.ಮಂಜು, ಸ್ವರೂಪ್,ಸಿ.ಎನ್.ಬಾಲಕೃಷ್ಣ 4) ಶಿವಮೊಗ್ಗ- ಶಾಸಕರಾದ ಶಾರದ ಪಿ ನಾಯ್ಕ್, ಪ್ರಸನ್ನ ಕುಮಾರ್, 5) ಚಿಕ್ಕಮಗಳೂರು- ವೈ ಎಸ್ ವಿ ದತ್ತ, ಬೋಜೆಗೌಡ,ಸುಧಾಕರ್ ಶೆಟ್ಟಿ, 6)ಬೆಂಗಳೂರು- ರಮೇಶ್ ಗೌಡ, ದಾಸರಹಳ್ಳಿ ಮಂಜುನಾಥ, ಶರವಣ, ಜವರಾಯಿಗೌಡ ಸೇರಿ 31 ಜಿಲ್ಲೆಯ ಬರ ಅಧ್ಯಯನ ತಂಡ ರಚನೆ ಮಾಡಲಾಗಿದೆ.
ಕಲಬುರಗಿ: ಕೆಇಎ ನಡೆಸಿದ FDA ಪರೀಕ್ಷೆಯ ಅಕ್ರಮ ನಂತರ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಎಚ್ಚೆತ್ತಿದೆ. ಇಂದು ಕೆಪಿಎಸ್ಸಿ ಗ್ರೂಪ್ಗೆ ನಡೆಯುತ್ತಿರುವ ಪರೀಕ್ಷೆಯಲ್ಲಿ ಎಲ್ಲ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಒಳಗೆ ಬಿಡಲಾಗುತ್ತಿದೆ. ಇನ್ನು ಒಂದು ಗಂಟೆ ಮುಂಚೆಯೇ ಪರೀಕ್ಷಾ ಕೇಂದ್ರಕ್ಕೆ ಬಂದವರನ್ನೂ ಕೂಡ ಪೊಲೀಸರು ತಪಾಸಣೆ ಮಾಡಿ ಒಳಗೆ ಬಿಡುತ್ತಿದ್ದಾರೆ. ಒಬ್ಬೊಬ್ಬ ಪರೀಕ್ಷಾರ್ಥಿಗಳನ್ನ 4 ಬಾರಿ ತಪಾಸಣೆ ಮಾಡಲಾಗುತ್ತಿದೆ.
ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್ನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ, ಪತನವಾಗಲಿದೆ ಎಂದು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಎಂದು ಕಾದು ನೋಡಿ ಎಂದರು.
ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬರ ಪರಿಹಾರಕ್ಕೆ ಕೈಗೊಂಡ ಕ್ರಮ ಬಗ್ಗೆ ವರದಿ ನೀಡಲು ತಿಳಿಸಿದ್ದಾರೆ.
ನಾನು ಕೂಡ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಆದರೆ ನನ್ನ ಪ್ರಯತ್ನ ಫಲಿಸಿಲ್ಲ ಎಂದು ಗದಗ ನಗರದಲ್ಲಿ ಮಾಜಿ ಸಚಿವ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ನಾನು ಪ್ರಯತ್ನ ಮಾಡಿದ್ದೆ, ಆದ್ರೆ ಆಗಲ್ಲ ಅಂತಾ ಗೊತ್ತಾಯ್ತು. ಚುನಾವಣೆಯಲ್ಲಿ ಸೋತಿದ್ದೀನಿ, ಅದಕ್ಕೆ ಪಕ್ಷದ ಕೆಲಸ ಮಾಡ್ತೇನೆ. ಖಾಲಿ ಇದ್ದೇನಲ್ಲಾ, ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದರು.
ಬೆಂಗಳೂರಿನಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಪೀಟರ್ ಐಕಿಡಿ ಬಿಲನ್ವೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿ ಪರಿಚಿತರಿಗೆ, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದ. ಬಂಧಿತನಿಂದ 5.15 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ಮಾತ್ರೆ ವಶಕ್ಕೆ ಪಡೆಯಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಮೃತಪಟ್ಟಿರುವ ಆರೋಪ ಕೇಳಿ ಬಂದಿದ್ದು ಮೈಸೂರಿನ ಚೆಲುವಾಂಬ ಆಸ್ಪತ್ರೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಪರ್ಯಾಸವೆಂದರೆ ಖುದ್ದು ನ್ಯಾಯಾಧೀಶರೇ ಬಂದು ಮಗುವನ್ನು ದಾಖಲಿಸಿ ಚಿಕಿತ್ಸೆ ನೀಡಿ ಎಂದರೂ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ವಿಶೇಷಚೇತನ ಮಗುವಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದ ಹಿನ್ನೆಲೆ ಮಗು ಪ್ರಾಣ ಬಿಟ್ಟಿದೆ ಎಂದು ಪೋಷಕರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಆಸ್ಪತ್ರೆ ವೈದ್ಯರ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಟ ದರ್ಶನ್ ಮನೆ ನಾಯಿ ಮಹಿಳೆಗೆ ಕಚ್ಚಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ಗೆ ನೋಟಿಸ್ ನೀಡಲು ಆರ್.ಆರ್.ನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಪೊಲೀಸರು ದರ್ಶನ್ ಅವರ ಮನೆಯಲ್ಲಿನ ವ್ಯಕ್ತಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಟ ದರ್ಶನ್ ಪ್ರಕರಣದ ಎರಡನೇ ಆರೋಪಿಯಾಗಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಿದ್ದಾರೆ.
ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ ಹಿನ್ನೆಲೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಮೂರು ದಿನ ಚಂದ್ರದ್ರೋಣ ಪರ್ವತದ ಪ್ರವಾಸಿತಾಣಗಳಿಗೆ ನಿಷೇಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಸಿಎಂ ಕಾವೇರಿ ನಿವಾಸದಲ್ಲಿ ಇಂದು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ಫಾಸ್ಟ್ ಮೀಟಿಂಗ್ ಆಯೋಜಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ಫಾಸ್ಟ್ ಮಾಡಲಿದ್ದಾರೆ. ಪ್ರಸಕ್ತ ರಾಜಕೀಯ ಬೆಳವಣಿಗೆ, ಲೋಕಸಭಾ ಚುನಾವಣೆ ಬಗ್ಗೆ ಉಪಾಹಾರ ಕೂಟದಲ್ಲಿ ಚರ್ಚಿಸಲಿದ್ದಾರೆ. ಮೊದಲ ಹಂತದಲ್ಲಿ 15 ಸಚಿವರಿಗೆ ಆಹ್ವಾನ ನೀಡಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಂಡೀಪುರ ಅರಣ್ಯದ ಹೆಡಿಯಾಲ ವಲಯ ವ್ಯಾಪ್ತಿಯಲ್ಲಿ ರೈತನ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಸಂಬಂಧ ಆನೆಗಳ ಮೂಲಕ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಬಂಡೀಪುರ, ರಾಂಪುರ ಆನೆ ಕ್ಯಾಂಪ್ನಿಂದ ಆನೆಗಳನ್ನು ತಂದು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಸಂಜೀವಿನಿ ಆಸ್ಪತ್ರೆ ವಿರುದ್ಧ FIR
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಸ್ವಂತ ಅಣ್ಣನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಚ್ಚಿ ಕೊಲೆ ಮಾಡಿ ಮೈದುನ ಪರಾರಿಯಾದ ಘಟನೆ ನಡೆದಿದೆ. ಗೀತಾ ಮರಿಗೌಡ(32), ಮಕ್ಕಳಾದ ಅಕುಲ್(10), ಅಂಕಿತಾ(7) ಕೊಲೆಯಾದವರು. ಮೂವರನ್ನು ಕೊಲೆ ಮಾಡಿ ಮೈದುನ ಕುಮಾರಗೌಡ್(35) ಪರಾರಿಯಾಗಿದ್ದಾನೆ. ಮೃತ ಗೀತಾ ಗಂಡ ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ಥಳಕ್ಕೆ ಹಾನಗಲ್ ಠಾಣೆ ಸಿಪಿಐ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್- ಪಾಕ್ ನಡುವೆ ವಿಶ್ವಕಪ್ ಪಂದ್ಯ ನಡೆಯಲಿದೆ.. ಹೀಗಾಗಿ ಹಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಬದಲಿ ವ್ಯವಸ್ಥೆ ಮಾಡಲಿದೆ. ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಬಾ ರಸ್ತೆ, ಕಬ್ಬನ್ ರಸ್ತೆ, ನೃಪತುಂಗರಸ್ತೆ ಸೇರಿ ಹಲವು ಕಡೆ ವಾಹನಗಳ ನಿಲುಗಡೆಗೆ ನಿಷೇಧ ವಿಧಿಸಲಾಗಿದೆ. ವಾಹನ ನಿಲುಗಡೆಗೆ ಕಿಂಗ್ ರಸ್ತೆ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿನಗರ, BMTC ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಅವಕಾಶ ನೀಡಲಾಗಿದೆ.
ಕೊಪ್ಪಳದ ಜಿಲ್ಲಾ ಆಸ್ಪತ್ರೆಯಲ್ಲಿ ಜಿರಳೆ ಕಾಟ ಮಿತಿಮೀರಿದೆ. ಮಕ್ಕಳ ವಾರ್ಡ್ ನಲ್ಲಿ ಜಿರಳೆ ಹಾವಳಿ ಹೆಚ್ಚಾಗಿದ್ದು ಮಕ್ಕಳ ರೋಗ ಗುಣಮುಖವಾಗೋ ಬದಲು ಹೆಚ್ಚಾಗೋ ಆತಂಕ ಉಂಟಾಗಿದೆ. ಬೆಡ್, ಬಟ್ಟೆ, ಆಹಾರದಲ್ಲಿ ಜಿರಳೆಗಳು ಓಡಾಡುತ್ತಿವೆ. ಜಿರಳೆ ಕಾಟದಿಂದ ಮಕ್ಕಳು ಮತ್ತು ಪಾಲಕರು ಕಂಗಾಲಾಗಿದ್ದಾರೆ.
Published On - 8:00 am, Sat, 4 November 23