AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಫಿ ಸುಧಾಮೂರ್ತಿ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ -ಯಡಿಯೂರಪ್ಪ

ಬೆಂಗಳೂರು: ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. 2020-21ರಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗುವುದು. ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ ಮಾಡಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ 500 ಕೋಟಿ ರೂ. ಮೀಸಲಿಡಲಾಗುತ್ತೆ. ಜಾಹೀರಾತು, ಇತರೆ ಚಟುವಟಿಕೆಗಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಬಾದಾಮಿ ಸಮಗ್ರ ಅಭಿವೃದ್ಧಿಗಾಗಿ 25 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. 25,000ಕ್ಕೂ ಹೆಚ್ಚು ಐತಿಹಾಸಿಕ […]

ಇನ್ಫಿ ಸುಧಾಮೂರ್ತಿ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ -ಯಡಿಯೂರಪ್ಪ
ಸಾಧು ಶ್ರೀನಾಥ್​
|

Updated on: Mar 05, 2020 | 12:29 PM

Share

ಬೆಂಗಳೂರು: ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. 2020-21ರಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೆ ತರಲಾಗುವುದು. ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರ ನೇತೃತ್ವದಲ್ಲಿ ಪ್ರವಾಸೋದ್ಯಮ ಟಾಸ್ಕ್​ಫೋರ್ಸ್ ಸ್ಥಾಪನೆ ಮಾಡಲಾಗುವುದು ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.

ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ 500 ಕೋಟಿ ರೂ. ಮೀಸಲಿಡಲಾಗುತ್ತೆ. ಜಾಹೀರಾತು, ಇತರೆ ಚಟುವಟಿಕೆಗಾಗಿ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಬಾದಾಮಿ ಸಮಗ್ರ ಅಭಿವೃದ್ಧಿಗಾಗಿ 25 ಕೋಟಿ ರೂಪಾಯಿ ಅನುದಾನ ನೀಡಲಾಗುವುದು.

25,000ಕ್ಕೂ ಹೆಚ್ಚು ಐತಿಹಾಸಿಕ ದೇವಸ್ಥಾನ, ಪ್ರಾಚೀನ ಸ್ಥಳ ಸ್ಮಾರಕ ಸಂರಕ್ಷಣೆಗೆ ಯೋಜನೆ ಜಾರಿಗೆ ತರಲಾಗುವುದು. ಕೊಪ್ಪಳದ ಅಂಜನಾದ್ರಿ ಬೆಟ್ಟದ ದೇವಾಲಯ ಅಭಿವೃದ್ಧಿಗೆ 20 ಕೋಟಿ ರೂ. ಮೀಸಲಿಸಲಾಗುವುದು. ಅತಿಥಿಗೃಹಗಳ ಮೂಲಸೌಕರ್ಯಕ್ಕೆ ₹25 ಕೋಟಿ ಅನುದಾನ, ಮಂತ್ರಾಲಯ, ತುಳಜಾಪುರ, ವಾರಾಣಸಿ, ಉಜ್ಜಯಿನಿ ಹಾಗೂ ಶ್ರೀಶೈಲ ದೇಗುಲಗಳ ಅತಿಥಿಗೃಹಗಳಿಗೆ ಅನುದಾನ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.