AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2021: ಕೇಂದ್ರ ಸಚಿವೆ ನಿರ್ಮಲಾ ಹಾಕಿಕೊಟ್ಟ ಡಿಜಿಟಲ್ ಬಜೆಟ್ ಮೇಲ್ಪಂಕ್ತಿ ಅನುಸರಿಸದ ಸಿಎಂ ಯಡಿಯೂರಪ್ಪ

Karnataka State Budget 2021; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನ ಸಾಫ್ಟ್ ಕಾಪಿಯನ್ನು (ಆನ್​ಲೈನ್ ಪ್ರತಿ) ಎಲ್ಲಾ ಲೋಕಸಭಾ ಸದಸ್ಯರಿಗೂ ಟ್ಯಾಬ್ ಮೂಲಕ ಓದುವ ಅನುಕೂಲ ಮಾಡಿಕೊಟ್ಟಿದ್ದರು. ಸಿಎಂ ಯಡಿಯೂರಪ್ಪ ಅವರು ಈ ಕ್ರಮ ಅನುಸರಿಸಬಹುದಿತ್ತು. ಈ ಮೂಲಕ ಡಿಜಿಟಲ್ ಇಂಡಿಯಾಕ್ಕೆ ಒತ್ತು ನಿಡಬಹುದಿತ್ತು ಎಂಬ ಮಾತುಗಳು ಕೇಳಿಬಂದಿವೆ.

Karnataka Budget 2021: ಕೇಂದ್ರ ಸಚಿವೆ ನಿರ್ಮಲಾ ಹಾಕಿಕೊಟ್ಟ ಡಿಜಿಟಲ್ ಬಜೆಟ್ ಮೇಲ್ಪಂಕ್ತಿ ಅನುಸರಿಸದ ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
guruganesh bhat
|

Updated on:Mar 08, 2021 | 12:17 PM

Share

ಬೆಂಗಳೂರು: 2021ನೇ ಸಾಲಿನ ಕೇಂದ್ರ ಬಜೆಟ್​ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಪೂರ್ಣ ಆನ್​ಲೈನ್​ನಲ್ಲಿ ಮಂಡಿಸಿದ್ದರು. ಡಿಜಿಟಲ್ ಇಂಡಿಯಾದ ಕನಸಿನೊಂದಿಗೆ ಆನ್​ಲೈನ್ ಬಜೆಟ್​ನ ಮೇಲ್ಪಂಕ್ತಿ ಹಾಕಿದ್ದ ಕೇಂದ್ರ ಸರ್ಕಾರದ ನಡೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲಿಸಿದಂತೆ ತೋರುತ್ತಿಲ್ಲ. ಕರ್ನಾಟಕ ರಾಜ್ಯ ಬಜೆಟ್ 2021ನ ಪ್ರತಿಗಳನ್ನು ಮುದ್ರಣ ರೂಪದಲ್ಲಿ ಪ್ರಕಟಿಸಿದ್ದಾರೆ. ಈ ಮೂಲಕ ತಮ್ಮದೇ ಪಕ್ಷ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಹಾಕಿಕೊಟ್ಟಿದ್ದ ಡಿಜಿಟಲ್ ಬಜೆಟ್ ಮೇಲ್ಪಂಕ್ತಿಯನ್ನು ಅನುಸರಿಸಿಲ್ಲ. ಮುದ್ರಿತ ಬಜೆಟ್​ನ ಸೂಟ್​ಕೇಸ್ ಜತೆ ಶೇಷಾದ್ರಿಪುರಂನಲ್ಲಿರುವ ರಾಘವೇಂದ್ರ ಮಠಕ್ಕೆ ತೆರಳಿ ನಂತರ ವಿಧಾನಸೌಧಕ್ಕೆ ಆಗಮಿಸಿದ್ದಾರೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನ ಸಾಫ್ಟ್ ಕಾಪಿಯನ್ನು (ಆನ್​ಲೈನ್ ಪ್ರತಿ) ಎಲ್ಲಾ ಲೋಕಸಭಾ ಸದಸ್ಯರಿಗೂ ಟ್ಯಾಬ್ ಮೂಲಕ ಓದುವ ಅನುಕೂಲ ಮಾಡಿಕೊಟ್ಟಿದ್ದರು. ಸಿಎಂ ಯಡಿಯೂರಪ್ಪ ಅವರು ಈ ಕ್ರಮ ಅನುಸರಿಸಬಹುದಿತ್ತು. ಈ ಮೂಲಕ ಡಿಜಿಟಲ್ ಇಂಡಿಯಾಕ್ಕೆ ಒತ್ತು ನೀಡಬಹುದಿತ್ತು ಎಂಬ ಮಾತುಗಳು ಕೇಳಿಬಂದಿವೆ.

ಶೇಷಾದ್ರಿಪುರಂನ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ಸಿಎಂ ಬಜೆಟ್​ ಮಂಡನೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಬೆಂಗಳೂರಿನ ಶೇಷಾದ್ರಿಪುರಂನ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ದೈವಭಕ್ತರಾದ ಅವರು ಇಂದು ಮಧ್ಯಾಹ್ನ 12.05ರ ಅಭಿಜಿನ್​ ಮಹೂರ್ತದಲ್ಲಿ ಬಜೆಟ್​ ಮಂಡಿಸಲಿದ್ದಾರೆ. ಶೇಷಾದ್ರಿಪುರಂನಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ, ವಿಶೇಷ ಪೂಜೆ ಸಲ್ಲಿಸಿದ್ಧಾರೆ.

ಮುಖ್ಯಮಂತ್ರಿಗಳಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಆರ್.ಅಶೋಕ್ ಸಾಥ್ ನೀಡಿದ್ದಾರೆ. ಬಜೆಟ್ ಪ್ರತಿಗೆ ಪೂಜೆ ಮಾಡಿಸಿದ ಬಿ.ಎಸ್​.ಯಡಿಯೂರಪ್ಪ, ಕಾವೇರಿ ನಿವಾಸದಿಂದ ಹೊರಟ ಬಳಿಕ ನಿವಾಸದ ಗೇಟ್ ದಾಟುವವರೆಗೂ ಕಾರಿನೊಳಗೆ ಕೈ ಜೋಡಿಸಿಕೊಂಡೇ ಕುಳಿತಿದ್ದಿದ್ದು ವಿಶೇಷವಾಗಿತ್ತು

ಇದನ್ನೂ ಓದಿ: ದೇಶದಲ್ಲೇ ಅತಿ ದೊಡ್ಡ ಗಾತ್ರದ ಬಜೆಟ್ ನೀಡಿರುವ ರಾಜ್ಯ ಯಾವುದು, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

Published On - 12:12 pm, Mon, 8 March 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ