AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2021: ಮಠ-ಸಾಂಸ್ಕೃತಿಕ ಕೇಂದ್ರಗಳಿಗೆ ಅನುದಾನ; ಅಯೋಧ್ಯೆಯಲ್ಲಿ ಯಾತ್ರಿ ನಿವಾಸಕ್ಕೆ ₹ 10 ಕೋಟಿ

ವಿಜಯಪುರ ಜಿಲ್ಲೆ ಬಸನವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ ₹ 5 ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ ₹ 10 ಕೋಟಿ ಅನುದಾನ ಘೋಷಿಸಲಾಗಿದೆ.

Karnataka Budget 2021: ಮಠ-ಸಾಂಸ್ಕೃತಿಕ ಕೇಂದ್ರಗಳಿಗೆ ಅನುದಾನ; ಅಯೋಧ್ಯೆಯಲ್ಲಿ ಯಾತ್ರಿ ನಿವಾಸಕ್ಕೆ ₹ 10 ಕೋಟಿ
ರಾಘವೇಂದ್ರ ಮಠದಲ್ಲಿ ಬೃಂದಾವನ ದರ್ಶನ ಪಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 08, 2021 | 12:41 PM

Share

ಬೆಂಗಳೂರು: ಬಜೆಟ್ ಮಂಡನೆಗೆ ಶುಭ ಮುಹೂರ್ತ ಸಮಯ ನಿಗದಿಪಡಿಸಿಕೊಂಡ ಮತ್ತು ಬಜೆಟ್​ ಮಂಡನೆಗೂ ಮೊದಲು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿಯೇ ವಿಧಾನಸೌಧಕ್ಕೆ ಬಂದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಮಠಗಳು, ಧಾರ್ಮಿಕ ಸಂಸ್ಥೆಗಳು ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ ಘೋಷಿಸಿದ್ದಾರೆ.

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 50 ಕೋಟಿ, ವಿಜಯಪುರ ಜಿಲ್ಲೆ ಬಸನವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿರುವ ಜಗಜ್ಯೋತಿ ಬಸವಣ್ಣ ಜನ್ಮಸ್ಥಳ ಅಭಿವೃದ್ಧಿಗೆ ₹ 5 ಕೋಟಿ, ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ ₹ 10 ಕೋಟಿ ಅನುದಾನ ಘೋಷಿಸಲಾಗಿದೆ. ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗೂ ಕರ್ನಾಟಕ ಸರ್ಕಾರ ₹ 10 ಕೋಟಿ ಅನುದಾನ ಘೋಷಿಸಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್.ಎಲ್.ಬೈರಪ್ಪ ಅವರ ಪರ್ವ ನಾಟಕ ಪ್ರದರ್ಶನಕ್ಕೆ ₹ 1 ಕೋಟಿ ಅನುದಾನ ಘೋಷಿಸಲಾಗಿದೆ. ರಾಜ್ಯಾದ್ಯಂತ ರಂಗಾಯಣಗಳ ಮೂಲಕ ಪರ್ವ ನಾಟಕವನ್ನು ಪ್ರದರ್ಶಿಸಲಾಗುವುದು.

ಅಲ್ಪಸಂಖ್ಯಾತರಿಗೆ ಅನುದಾನ ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೂ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನುದಾನ ಘೋಷಿಸಿದ್ದಾರೆ. ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ₹200 ಕೋಟಿ, ಅಲ್ಪಸಂಖ್ಯಾತ ಸಮುದಾಯಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ₹ 1,500 ಕೋಟಿ ಮೊತ್ತವನ್ನು ಈ ಬಾರಿಯ ಬಜೆಟ್​ನಲ್ಲಿ ಮೀಸಲಿಡಲಾಗಿದೆ.

ಇದನ್ನೂ ಓದಿ: ದೇಶದಲ್ಲೇ ಅತಿ ದೊಡ್ಡ ಗಾತ್ರದ ಬಜೆಟ್ ನೀಡಿರುವ ರಾಜ್ಯ ಯಾವುದು, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

Published On - 12:40 pm, Mon, 8 March 21

Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ