AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Education Budget 2023: ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

Education Budget 2023: ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Feb 17, 2023 | 1:20 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಂದ ಶುಲ್ಕವನ್ನು ತೆಗೆದುಕೊಳ್ಳದೆ, ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ “ಮಕ್ಕಳ ಬಸ್ಸು” ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡಿದ್ದಾರೆ. ಈ ಬಜೆಟ್​ನಲ್ಲಿ ಸಾರ್ವಜನಿಕ ಬಸ್​ಗಳನ್ನು ಅವಲಂಬಿಸಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ “ಮಕ್ಕಳ ಬಸ್ಸು” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ, 1000 ಹೊಸ “ಮಕ್ಕಳ ಬಸ್ಸು”ಗಳು ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಇದರಿಂದ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು ಕಲಿಕೆ ಜೊತೆಗೆ ಕೌಶಲ್ಯ ಹೊಸ ಕಾರ್ಯಕ್ರಮ ಜಾರಿ

ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್​ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ “ಕಲಿಕೆ ಜೊತೆಗೆ ಕೌಶಲ್ಯ” ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ. ಇದೇ ರೀತಿಯಾಗಿ ಕ್ರೈಸ್​ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಿದೆ.

ಹಾಗೇ ಬೆಂಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರು ಉದ್ಯೋಗಸ್ಥರಾಗುವಂತೆ ಮಾಡಲು ಅಲ್ಪಾವಧಿ ತರಬೇತಿ ಕೋರ್ಸ್​ಗಳಿಗೆ ಉತ್ತೇಜನ ನೀಡಲು ಕೌಶಲ್ಯ ತರಬೇತಿ ನೀಡುತ್ತದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ 80,318 ಕೋಟಿ ರೂ. ಒದಗಿಸಲಾಗುತ್ತದೆ.

ಕರ್ನಾಟಕ ಬಜೆಟ್​ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Fri, 17 February 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ