AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Education Budget 2023: ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

Education Budget 2023: ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Feb 17, 2023 | 1:20 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಂದ ಶುಲ್ಕವನ್ನು ತೆಗೆದುಕೊಳ್ಳದೆ, ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ “ಮಕ್ಕಳ ಬಸ್ಸು” ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡಿದ್ದಾರೆ. ಈ ಬಜೆಟ್​ನಲ್ಲಿ ಸಾರ್ವಜನಿಕ ಬಸ್​ಗಳನ್ನು ಅವಲಂಬಿಸಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ “ಮಕ್ಕಳ ಬಸ್ಸು” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ, 1000 ಹೊಸ “ಮಕ್ಕಳ ಬಸ್ಸು”ಗಳು ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಇದರಿಂದ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು ಕಲಿಕೆ ಜೊತೆಗೆ ಕೌಶಲ್ಯ ಹೊಸ ಕಾರ್ಯಕ್ರಮ ಜಾರಿ

ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್​ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ “ಕಲಿಕೆ ಜೊತೆಗೆ ಕೌಶಲ್ಯ” ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ. ಇದೇ ರೀತಿಯಾಗಿ ಕ್ರೈಸ್​ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಿದೆ.

ಹಾಗೇ ಬೆಂಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರು ಉದ್ಯೋಗಸ್ಥರಾಗುವಂತೆ ಮಾಡಲು ಅಲ್ಪಾವಧಿ ತರಬೇತಿ ಕೋರ್ಸ್​ಗಳಿಗೆ ಉತ್ತೇಜನ ನೀಡಲು ಕೌಶಲ್ಯ ತರಬೇತಿ ನೀಡುತ್ತದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ 80,318 ಕೋಟಿ ರೂ. ಒದಗಿಸಲಾಗುತ್ತದೆ.

ಕರ್ನಾಟಕ ಬಜೆಟ್​ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Fri, 17 February 23

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು