AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Education Budget 2023: ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ.

Education Budget 2023: ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Feb 17, 2023 | 1:20 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಂದ ಶುಲ್ಕವನ್ನು ತೆಗೆದುಕೊಳ್ಳದೆ, ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ “ಮಕ್ಕಳ ಬಸ್ಸು” ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡಿದ್ದಾರೆ. ಈ ಬಜೆಟ್​ನಲ್ಲಿ ಸಾರ್ವಜನಿಕ ಬಸ್​ಗಳನ್ನು ಅವಲಂಬಿಸಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ “ಮಕ್ಕಳ ಬಸ್ಸು” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ, 1000 ಹೊಸ “ಮಕ್ಕಳ ಬಸ್ಸು”ಗಳು ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಇದರಿಂದ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು ಕಲಿಕೆ ಜೊತೆಗೆ ಕೌಶಲ್ಯ ಹೊಸ ಕಾರ್ಯಕ್ರಮ ಜಾರಿ

ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್​ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ “ಕಲಿಕೆ ಜೊತೆಗೆ ಕೌಶಲ್ಯ” ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ. ಇದೇ ರೀತಿಯಾಗಿ ಕ್ರೈಸ್​ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಿದೆ.

ಹಾಗೇ ಬೆಂಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರು ಉದ್ಯೋಗಸ್ಥರಾಗುವಂತೆ ಮಾಡಲು ಅಲ್ಪಾವಧಿ ತರಬೇತಿ ಕೋರ್ಸ್​ಗಳಿಗೆ ಉತ್ತೇಜನ ನೀಡಲು ಕೌಶಲ್ಯ ತರಬೇತಿ ನೀಡುತ್ತದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ 80,318 ಕೋಟಿ ರೂ. ಒದಗಿಸಲಾಗುತ್ತದೆ.

ಕರ್ನಾಟಕ ಬಜೆಟ್​ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 11:43 am, Fri, 17 February 23

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?