AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಬಜೆಟ್ ಸಿದ್ಧತೆಯಲ್ಲಿ ವ್ಯಸ್ತರಾದ ಸಿಎಂ ಸಿದ್ದರಾಮಯ್ಯ; ಈ ಬಾರಿ ಹೆಚ್ಚಲಿದೆ ಆಯವ್ಯಯದ ಗಾತ್ರ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವರ್ಷದ ಫೆಬ್ರವರಿಯಲ್ಲಿ 3.09 ಲಕ್ಷ ಕೋಟಿ ರೂ.ಗಳ ಪೂರಕ ಬಜೆಟ್ ಮಂಡಿಸಿದ್ದರು. ಸಿದ್ದರಾಮಯ್ಯ ಬಜೆಟ್ ಗಾತ್ರವನ್ನು ಸುಮಾರು ಶೇ 8 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಮತ್ತು 3.39 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಮಂಡಿಸುವ ಸಾಧ್ಯತೆಯಿದೆ.

Karnataka Budget 2023: ಬಜೆಟ್ ಸಿದ್ಧತೆಯಲ್ಲಿ ವ್ಯಸ್ತರಾದ ಸಿಎಂ ಸಿದ್ದರಾಮಯ್ಯ; ಈ ಬಾರಿ ಹೆಚ್ಚಲಿದೆ ಆಯವ್ಯಯದ ಗಾತ್ರ
ಸಿದ್ದರಾಮಯ್ಯ
Ganapathi Sharma
|

Updated on: Jun 29, 2023 | 4:50 PM

Share

ಬೆಂಗಳೂರು: ಹಣಕಾಸು ಖಾತೆಯನ್ನೂ ಹೊಂದಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7 ರಂದು ಬಜೆಟ್ (Karnataka Budget 2023) ಮಂಡನೆ ಮಾಡಲಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ಅವರು ಮಂಡನೆ ಮಾಡುತ್ತಿರುವ ಏಳನೇ ಬಜೆಟ್ ಇದಾಗಲಿದ್ದು, ಒಟ್ಟಾರೆಯಾಗಿ ಅವರು ಮಂಡಿಸುತ್ತಿರುವ 14ನೇ ಬಜೆಟ್ ಇದಾಗಿರಲಿದೆ. ಬಜೆಟ್ ಗಾತ್ರ 3.39 ಲಕ್ಷ ಕೋಟಿ ರೂ. ಇರಬಹುದು ಎಂದು ಮುಖ್ಯಮಂತ್ರಿ ಸುಳಿವು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವರ್ಷದ ಫೆಬ್ರವರಿಯಲ್ಲಿ 3.09 ಲಕ್ಷ ಕೋಟಿ ರೂ.ಗಳ ಪೂರಕ ಬಜೆಟ್ ಮಂಡಿಸಿದ್ದರು. ಸಿದ್ದರಾಮಯ್ಯ ಬಜೆಟ್ ಗಾತ್ರವನ್ನು ಸುಮಾರು ಶೇ 8 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಮತ್ತು 3.39 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಅನ್ನು ಮಂಡಿಸುವ ಸಾಧ್ಯತೆಯಿದೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ‘ಗ್ಯಾರಂಟಿ’ಗಳಿಗೆ ಅವಕಾಶ ಕಲ್ಪಿಸಿರುವುದು ಬಜೆಟ್ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಸಿದ್ದರಾಮಯ್ಯನವರ ಪ್ರಕಾರ, ಐದು ಜನಪರ ಯೋಜನೆಗಳಿಗೆ ಬೊಕ್ಕಸದಿಂದ 59,000 ಕೋಟಿ ರೂ. ವ್ಯಯವಾಗಲಿದೆ.

ಕಳೆದ 10 ದಿನಗಳಿಂದ ಮುಖ್ಯಮಂತ್ರಿಗಳು ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವ ಸಭೆಗಳಿಗೆ ದಿನದ ಉತ್ತರಾರ್ಧವನ್ನು ಮೀಸಲಿಟ್ಟಿದ್ದಾರೆ. ವಿವಿಧ ಇಲಾಖೆಗಳಿಗೆ ಲಭ್ಯವಿರುವ ಹಣವನ್ನು ಮರುಹೊಂದಿಸುವಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ: ನನ್ನ ಬಜೆಟ್ ಗಾತ್ರ ಬೊಮ್ಮಾಯಿ ಮಂಡಿಸಿದ್ದಕ್ಕಿಂತಲೂ 35,000 ಕೋಟಿ ರೂ. ಹೆಚ್ಚಿನದ್ದು; ಸಿದ್ದರಾಮಯ್ಯ

ಮುಖ್ಯಮಂತ್ರಿಯವರು ಬಿಎಸ್ ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾದ ಕ್ಷೇತ್ರವಾರು ನಿಧಿ ಹಂಚಿಕೆಯನ್ನು ರದ್ದುಗೊಳಿಸುವ ಸಾಧ್ಯತೆ ಇದೆ ಮತ್ತು ಬೊಮ್ಮಾಯಿ ಅವಧಿಯಂತೆ ಇಲಾಖಾವಾರು ನಿಧಿ ಹಂಚಿಕೆಯನ್ನು ಪುನರಾರಂಭಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ‘ನ್ಯೂಸ್9’ ವರದಿ ಮಾಡಿದೆ. ಕ್ಷೇತ್ರವಾರು ಅನುದಾನ ಹಂಚಿಕೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದರು.

ಜುಲೈ 3 ರಂದು ರಾಜ್ಯಪಾಲರ ಭಾಷಣದೊಂದಿಗೆ ಬಜೆಟ್ ಅಧಿವೇಶನ ಆರಂಭವಾಗಲಿದೆ. ಸಿದ್ದರಾಮಯ್ಯ ಅವರು ಜುಲೈ 7 ರಂದು ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ