AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget PDF Download: ಕರ್ನಾಟಕ ಬಜೆಟ್​ ಪಿಡಿಎಫ್ ಕಾಪಿ ಇಲ್ಲಿ ಲಭ್ಯ

ಕರ್ನಾಟಕ ಬಜೆಟ್ 2023 ಪಿಡಿಎಫ್ ಕಾಪಿ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಇಂದು 2023 - 2024 ನೇ ಶಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಈ ಬಾರಿಯ ಒಟ್ಟು ಬಜೆಟ್ 30,9182 ಕೋಟಿ ರೂ. ಆಗಿದೆ.

Karnataka Budget PDF Download: ಕರ್ನಾಟಕ ಬಜೆಟ್​ ಪಿಡಿಎಫ್ ಕಾಪಿ ಇಲ್ಲಿ ಲಭ್ಯ
ಕರ್ನಾಟಕ ಬಜೆಟ್ 2023 ಪಿಡಿಎಫ್
ನಯನಾ ಎಸ್​ಪಿ
|

Updated on:Feb 17, 2023 | 12:51 PM

Share

ರಾಜ್ಯ ವಿಧಾನಮಂಡಲದ ಅಧಿವೇಶನ (State Budget Session) ಇಂದಿನಿಂದ ಅರಂಭವಾಗಿದೆ. ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಮಂಡಿಸಲಿರುವ ಕೊನೆಯ ಬಜೆಟ್ ಇದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಬಜೆಟ್​ ಮಂಡನೆ ಮಾಡುತ್ತಿದ್ದು, ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಇದಾಗಿದೆ. ಹಲವು ಮಹತ್ವದ ಯೋಜನೆಗಳ ಘೋಷಣೆಯನ್ನು ಈಗಾಗಲೇ ಮಾಡಿದ್ದಾರೆ. ಇಂದು (ಫೆಬ್ರವರಿ 17 ) ಮುಖ್ಯಮಂತ್ರಿಗಳು ಬಜೆಟ್ ಮಂಡನೆಗೆ ತೆರಳುವ ಮುನ್ನ ಬೆಂಗಳೂರಿನ ಆರ್. ಟಿ. ನಗರದ ಮುತ್ತಪ್ಪ ಬ್ಲಾಕ್‌ನ ಶ್ರೀ ಕಂಠೇಶ್ವರ ದೇವಾಲಯ ಹಾಗೂ ಬಾಲಬ್ರುಯಿ ಬಳಿ ಇರುವ ಮಾರುತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಮಸ್ತ ಕರ್ನಾಟಕದ ಮಹಾಜನತೆಯ ಹೆಸರಿನಲ್ಲಿ ಅರ್ಚನೆಯನ್ನೂ ಮಾಡಿಸಿದರು.

ಜಂಟಿ ಸದನವನ್ನು ಉದ್ದೇಶಿಸಿ ಮಾತಾಡಲು ಕರ್ನಾಟಕ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ವಿಧಾನಸೌಧಕ್ಕೆ ಆಗಮಿಸಿದರು. ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಕಾನೂನು ಸಚಿವ ಜೆಸಿ ಮಾಧುಸ್ವಾಮಿ, ಬಸವರಾಜ ಹೊರಟ್ಟಿ ಮೊದಲಾದವರು ಕೂಡ ಬಂದಿದ್ದರು. ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಮೊದಲಿಗೆ ಸಂಪ್ರದಾಯದಂತೆ ಸಚಿವ ಸಂಪುಟ ಸಭೆಯಲ್ಲಿ ಬಜೆಟ್‌ ಭಾಷಣಕ್ಕೆ ಅನುಮೋದನೆ ಪಡೆದುಕೊಂಡರು. ನಂತರ 10.15ಕ್ಕೆ ಬಜೆಟ್ ಭಾಷಣವನ್ನು ಆರಂಭಿಸಿದರು.

ಇದನ್ನೂ ಓದಿ: ಮಹಿಳಾ ಕೃಷಿ ಕಾರ್ಮಿಕರ ಆರ್ಥಿಕ ಸುಧಾರಣೆಗಾಗಿ “ನಮ್ಮ ಶಕ್ತಿ” ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಹಸ್ತಾಂತರಿಸಿದರು. ಹಣಕಾಸು ಇಲಾಖೆ ಅಧಿಕಾರಿಗಳಾದ ಐಎಸ್‌ಎನ್ ಪ್ರಸಾದ್, ಏಕರೂಪ್ ಕೌರ್, ಜಾಫರ್ ಹಾಗೂ ಮತ್ತಿತರ ಅಧಿಕಾರಿಗಳು ಇಲ್ಲಿ ಉಪಸ್ಥಿತರಿದ್ದರು.

ಕರ್ನಾಟಕದ 2023 ಬಜೆಟ್‌ನ ಕನ್ನಡ ಪ್ರತಿಯನ್ನು ಇಲ್ಲಿ ಡೌನ್‌ಲೋಡ್ ಮಾಡಿ

ಕರ್ನಾಟಕ ಬಜೆಟ್​ ಲೈವ್​ ವೀಕ್ಷಿಸಲು ಇಲ್ಲಿ ಕ್ಲಿಕ್​ ಮಾಡಿ

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Fri, 17 February 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ