AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ

ಮೋಟಾರು ವಾಹನ ಕಾಯ್ದೆ ಸರಳಗೊಳಿಸಲು ಪ್ರಸ್ತಾಪಿಸಲಾಗಿದೆ. 11,500 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ.

Karnataka Budget 2023: ಸಿದ್ದರಾಮಯ್ಯ ಬಜೆಟ್​​ನಲ್ಲಿ ಯಾವುದಕ್ಕೆಲ್ಲ ತೆರಿಗೆ ಹೆಚ್ಚಳ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 07, 2023 | 2:52 PM

Share

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿಗೆ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು, ಮದ್ಯದ ಮೇಲಿನ ಸುಂಕವನ್ನು ಹೆಚ್ಚಳ ಮಾಡಿದ್ದಾರೆ. ಅದೇ ರೀತಿ ಇನ್ನೂ ಕೆಲವು ವಸ್ತುಗಳ ತೆರಿಗೆ ಪರಿಷ್ಕರಣೆ (Tax Revision)  ಮೂಲಕ ಆದಾಯ ಹೆಚ್ಚಳದ ಗುರಿ ಹಾಕಿಕೊಂಡಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಆದಾಯದ ಅವಶ್ಯಕತೆ ಇದ್ದು, ಹಲವು ಮೂಲಗಳಿಂದ ಇದನ್ನು ಸಂಗ್ರಹಿಸಲು ಸಿದ್ದರಾಮಯ್ಯ ಬಜೆಟ್​​ನಲ್ಲಿ ಗುರಿ ಹಾಕಿಕೊಂಡಿದ್ದಾರೆ.

ಅತ್ಯಧಿಕ ತೆರಿಗೆ ಪಾವತಿಸುವವರಿಗಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ವಿಭಾಗ ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 2023-24ನೇ ಸಾಲಿನಲ್ಲಿ 1 ಲಕ್ಷ ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ಹಾಕಿಕೊಳ್ಳಲಾಗಿದೆ.

ಮದ್ಯದ ಮೇಲೆ ಶೇ 20ರಷ್ಟು ಮತ್ತು ಬಿಯರ್ ಮೇಲೆ ಶೇ 10ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ. ಇದರೊಂದಿಗೆ ಬಿಯರ್ ಮೇಲಿನ ಅಬಕಾರಿ ಸುಂಕ ಶೇ 175 ರಿಂದ 185ಕ್ಕೆ ಹೆಚ್ಚಳವಾಗಲಿದೆ.

ಪರಿಷ್ಕರಣೆಯಾಗಲಿದೆ ಸ್ಥಿರಾಸ್ತಿ ಮಾರ್ಗಸೂಚಿ ದರ

ಎಲ್ಲ ಸ್ಥಿರಾಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲಾಗುವುದು ಎಂದು ಬಜೆಟ್​​ನಲ್ಲಿ ಘೋಷಣೆ ಮಾಡಲಾಗಿದೆ. ಕೋವಿಡ್ ಸಾಂಕ್ರಾಮಿಕದ ಕಾರಣ 2019ರ ನಂತರ ಸ್ಥಿರಾಸ್ತಿ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿರಲಿಲ್ಲ. ಪ್ರಸ್ತುತ ಮಾರುಕಟ್ಟೆ ದರದಲ್ಲಿ ವ್ಯತ್ಯಾಸವಾಗಿರುವುದರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಆದರೆ, ಎಷ್ಟು ಪ್ರಮಾಣದಲ್ಲಿ ಪರಿಷ್ಕರಣೆ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: Liquor Prices in Karnataka: ಮದ್ಯ ಪ್ರಿಯರಿಗೆ ಬಿಗ್ ಶಾಕ್, ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಹೆಚ್ಚಳ

ಮೋಟಾರು ವಾಹನ ಕಾಯ್ದೆ ಸರಳಗೊಳಿಸಲು ಪ್ರಸ್ತಾಪಿಸಲಾಗಿದೆ. 11,500 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ. ಕರ್ನಾಟಕ ಮೋಟಾರು ವಾಹನ ನೋಂದಣಿ ತೆರಿಗೆ ಹೆಚ್ಚಳಕ್ಕೆ ಉದ್ದೇಶಿಸಲಾಗಿದೆ. ಆದರೆ, ಎಷ್ಟು ಪ್ರಮಾಣದಲ್ಲಿ ತೆರಿಗೆ ಹೆಚ್ಚಳ ಮಾಡಲಾಗುತ್ತದ ಎಂಬ ಮಾಹಿತಿ ನೀಡಿಲ್ಲ.

ಗಣಿ ಮತ್ತು ಭೂವಿಜ್ಞಾನ ಕ್ಷೇತ್ರದಿಂದ 9,000 ಕೋಟಿ ರೂ. ರಾಜಸ್ವ ಸಂಗ್ರಹ ಗುರಿ ಹಾಕಿಕೊಳ್ಳಲಾಗಿದೆ.

ಇನ್ನಷ್ಟು ಕರ್ನಾಟಕ ಬಜೆಟ್ 2023 ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್