AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು “ಕಲಿಕೆ ಜೊತೆಗೆ ಕೌಶಲ್ಯ” ಹೊಸ ಕಾರ್ಯಕ್ರಮ ಜಾರಿ

ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್​ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ "ಕಲಿಕೆ ಜೊತೆಗೆ ಕೌಶಲ್ಯ" ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ.

Karnataka Budget 2023: ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ನೀಡಲು ಕಲಿಕೆ ಜೊತೆಗೆ ಕೌಶಲ್ಯ ಹೊಸ ಕಾರ್ಯಕ್ರಮ ಜಾರಿ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
| Edited By: |

Updated on:Feb 17, 2023 | 2:51 PM

Share

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ, ಇಂಜಿನಿಯರಿಂಗ್​ ಹಾಗೂ ಐಟಿಐ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿಗಳನ್ನು ನೀಡಲು ರಾಜ್ಯ ಸರ್ಕಾರ “ಕಲಿಕೆ ಜೊತೆಗೆ ಕೌಶಲ್ಯ” ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆಗೆ ತಂದಿದೆ. ಇದೇ ರೀತಿಯಾಗಿ ಕ್ರೈಸ್​ ಸಂಸ್ಥೆಯ ಅಧೀನದ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೂ ಹೆಚ್ಚುವರಿ ತಾಂತ್ರಿಕ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಿದೆ.

ಹಾಗೇ ಬೆಂಗಳೂರು ನಗರದಲ್ಲಿ ವಿಶೇಷ ಚೇತನ ಮಕ್ಕಳಿಗೆ ಹೊಂದುವಂತಹ ಕೌಶಲ್ಯ ತರಬೇತಿ ನೀಡಿ ಅವರು ಉದ್ಯೋಗಸ್ಥರಾಗುವಂತೆ ಮಾಡಲು ಅಲ್ಪಾವಧಿ ತರಬೇತಿ ಕೋರ್ಸ್​ಗಳಿಗೆ ಉತ್ತೇಜನ ನೀಡಲು ಕೌಶಲ್ಯ ತರಬೇತಿ ನೀಡುತ್ತದೆ. ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ 2023-24ನೇ ಸಾಲಿನಲ್ಲಿ 80,318 ಕೋಟಿ ರೂ. ಒದಗಿಸಲಾಗುತ್ತದೆ.

ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ “ಮಕ್ಕಳ ಬಸ್ಸು” ಹೊಸ ಯೋಜನೆ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯ್ಯವ್ಯಯ ಮಂಡನೆ ಮಾಡಿದ್ದಾರೆ. ಈ ಬಜೆಟ್​ನಲ್ಲಿ ಸಾರ್ವಜನಿಕ ಬಸ್​ಗಳನ್ನು ಅವಲಂಬಿಸಿರುವ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ “ಮಕ್ಕಳ ಬಸ್ಸು” ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಈ ಯೋಜನೆಯಡಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂ. ವೆಚ್ಚದಲ್ಲಿ, 1000 ಹೊಸ “ಮಕ್ಕಳ ಬಸ್ಸು”ಗಳು ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಇದರಿಂದ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಹೊಸ ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿದ್ದು, ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಂದ ಶುಲ್ಕವನ್ನು ತೆಗೆದುಕೊಳ್ಳದೆ, ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಕರ್ನಾಟಕ ಬಜೆಟ್ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್​ ಮಾಡಿ

Published On - 1:19 pm, Fri, 17 February 23

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ