AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Canteen: ಗ್ರಾಮೀಣ ಭಾಗದಲ್ಲಿ ಮಹಿಳೆಯರೇ ನಿರ್ವಹಿಸುವ ಕೆಫೆಗಳು; ಯುವಜನರಿಗೆ ಉದ್ಯಮಶೀಲತಾ ತರಬೇತಿ

Karnataka Budget 2024, Cafe Sanjeevini: ನಿರುದ್ಯೋಗಿಗಳಿಗೆ ಭತ್ಯೆ ಮಾತ್ರವಲ್ಲ, ಉದ್ಯಮಶೀಲತಾ ತರಬೇತಿ ನೀಡಲಾಗುತ್ತದೆ. ಯುವನಿಧಿ ಪ್ಲಸ್ ಉಪಕ್ರಮದ ಅಡಿಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಇರುತ್ತದೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರೇ ನಿರ್ವಹಿಸುವ ಕೆಫೆ ಸಂಜೀವಿನಿ ಕ್ಯಾಂಟೀನ್​ಗಳನ್ನು ಸ್ಥಾಪಿಸಲಾಗುವುದು. 2,500 ಕಾಫಿ ಕಿಯೋಸ್ಕ್​ಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ಎಲ್ಲಾ ಐಟಿಐಗಳಲ್ಲಿ ಸ್ಥಳೀಯ ಕೈಗಾರಿಕೆ ಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಡುಯಲ್ ಟ್ರೈನಿಂಗ್ ಸಿಸ್ಟಂ ಅಳವಡಿಸಲಾಗುವುದು ಎಂದು ಬಜೆಟ್​ನಲ್ಲಿ ಹೇಳಲಾಗಿದೆ.

Women's Canteen: ಗ್ರಾಮೀಣ ಭಾಗದಲ್ಲಿ ಮಹಿಳೆಯರೇ ನಿರ್ವಹಿಸುವ ಕೆಫೆಗಳು; ಯುವಜನರಿಗೆ ಉದ್ಯಮಶೀಲತಾ ತರಬೇತಿ
ಸಿದ್ದರಾಮಯ್ಯ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 16, 2024 | 1:30 PM

ಬೆಂಗಳೂರು, ಫೆಬ್ರುವರಿ 16: ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಯುವ ನಿಧಿ ಯೋಜನೆ ಮೂಲಕ ಒಂದಷ್ಟು ರಿಲೀಫ್ ಕೊಟ್ಟಿದೆ. ಈಗ ಈ ನಿರುದ್ಯೋಗಿಗಳಿಗೆ ಉತ್ತಮ ವೃತ್ತಿಜೀವನ ಕಂಡುಕೊಳ್ಳಲು ಯೋಜನೆ ರೂಪಿಸಿದೆ. ಯುವನಿಧಿ ಪ್ಲಸ್ ಉಪಕ್ರಮದ (Yuva Nidhi Plus) ಅಡಿಯಲ್ಲಿ 25,000 ಫಲಾನುಭವಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ (Entrepreneurship development training) ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್​ನಲ್ಲಿ ಘೋಷಿಸಿದ್ದಾರೆ. ನಿರುದ್ಯೋಗ ನಿವಾರಣೆಗೆ ಪ್ರಯತ್ನಿಸುತ್ತಿರುವ ಸರ್ಕಾರ ಯುವಜನರಿಗೆ ಉದ್ಯೋಗ ಮತ್ತು ಉದ್ದಿಮೆ ಅವಕಾಶ ಹೆಚ್ಚಿಸಲು ಕೌಶಲ್ಯ ನೀತಿ ಜಾರಿ ಮಾಡುವುದಾಗಿ ಹೇಳಿದೆ. ಇನ್ನು, ಗ್ರಾಮೀಣ ಭಾಗದಲ್ಲಿ ಮಹಿಳೆಯರಿಂದಲೇ ನಿರ್ವಹಿಸಲ್ಪಡುವ ಕೆಫೆ ಸಂಜೀವಿನಿ (Cafe Sanjeevini) ಎಂಬ ಕ್ಯಾಂಟೀನ್​ಗಳ ಸ್ಥಾಪಿಸುವ ಯೋಜನೆಯನ್ನು ಘೋಷಿಸಲಾಗಿದೆ. ಯುವಜನರ ಕೌಶಲ್ಯ ಅಭಿವೃದ್ಧಿಗೆ 2024ರ ಬಜೆಟ್​ನಲ್ಲಿ ಘೋಷಿಸಲಾದ ಕೆಲ ಪ್ರಮುಖ ಸಂಗತಿ ಇಲ್ಲಿವೆ….

ಕರ್ನಾಟಕ ಬಜೆಟ್​ನಲ್ಲಿ ಕೌಶಲ್ಯ ಅಭಿವೃದ್ಧಿಗೆ ಸಿಕ್ಕಿದ್ದು ಇದು…

  • ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶ ಒದಗಿಸಲು ರಾಜ್ಯ ಕೌಶಲ್ಯ ನೀತಿ ಜಾರಿ ಮಾಡಲಾಗುವುದು
  • ಯುವ ನಿಧಿ ಪ್ಲಸ್ ಅಡಿ 25,000 ಫಲಾನುಭವಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ
  • ಗ್ರಾಮೀಣ ಭಾಗದಲ್ಲಿ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್​ಗಳ ಸ್ಥಾಪನೆ. 2,500 ಕಾಫಿ ಕಿಯಾಸ್ಕ್​ಗಳ ಸ್ಥಾಪನೆಗೆ ಕ್ರಮ

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಗುಡ್​ ನ್ಯೂಸ್​ ನೀಡಿದ ಸಿದ್ದರಾಮಯ್ಯ

  • ಬಳ್ಳಾರಿಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ
  • ಕಲಬುರ್ಗಿ, ತಳಕಲ್ ಮತ್ತು ವರುಣಾದಲ್ಲಿ 350 ಕೋಟಿ ರೂ ವೆಚ್ಚದಲ್ಲಿ ಜಿಟಿಟಿಸಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ
  • ಬಳ್ಳಾರಿ, ಚಿತ್ರದುರ್ಗ, ರೋಣದಲ್ಲಿ ಜಿಟಿಟಿಸಿಗಳ ಆರಂಭ
  • ಕಲಬುರ್ಗಿಯ ಕೆಜಿಟಿಟಿಐನಲ್ಲಿ ಸಿಎನ್​ಸಿ ಮೆಷಿನ್​ ಅನ್ನು ಸೆಂಟ್ರಲೈಸ್​ಗೊಳಿಸುವ ಮೊದಲ ಎಕ್ಸಲೆನ್ಸ್ ಸೆಂಟರ್ ಸ್ಥಾಪನೆ
  • 40,000 ಐಟಿಐ ಮತ್ತು ಜಿಟಿಟಿಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಭಾಷಾ ಕಲೆ ಹಾಗೂ ಸಂವಹನ ಕೌಶಲ್ಯ ತರಬೇತಿ
  • ಎಲ್ಲಾ ಐಟಿಐಗಳಲ್ಲಿ ಸ್ಥಳೀಯ ಕೈಗಾರಿಕೆ ಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಡುಯಲ್ ಟ್ರೈನಿಂಗ್ ಸಿಸ್ಟಂ (ಡಿಎಸ್​ಟಿ).
  • ಎರಡು ವರ್ಷದಲ್ಲಿ 50,000 ಸ್ವಸಹಾಯ ಗುಂಪಿನ ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳ ಅಭಿವೃದ್ಧಿಗೆ ಕ್ರಮ.
  • ಒಂದು ಲಕ್ಷ ಮಹಿಳಾ ಸ್ವ ಸಹಾಯ ಗುಂಪುಗಳಿಗೆ 100 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಿರು ಉದ್ದಿಮೆಗಳನ್ನು ಸ್ಥಾಪಿಸಿ ಸೂಕ್ತ ಮಾರುಕಟ್ಟೆ ಅವಕಾಶ ಕಲ್ಪಿಸಲು ಕ್ರಮ
  • ಐಐಎಂಬಿ ಸಹಭಾಗಿತ್ವದಲ್ಲಿ 10 ಜಿಲ್ಲಾ ಮಟ್ಟದ ಇನ್​ಕ್ಯುಬೇಶನ್ ಸೆಂಟರ್ ಸ್ಥಾಪನೆ

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?