Women’s Canteen: ಗ್ರಾಮೀಣ ಭಾಗದಲ್ಲಿ ಮಹಿಳೆಯರೇ ನಿರ್ವಹಿಸುವ ಕೆಫೆಗಳು; ಯುವಜನರಿಗೆ ಉದ್ಯಮಶೀಲತಾ ತರಬೇತಿ

Karnataka Budget 2024, Cafe Sanjeevini: ನಿರುದ್ಯೋಗಿಗಳಿಗೆ ಭತ್ಯೆ ಮಾತ್ರವಲ್ಲ, ಉದ್ಯಮಶೀಲತಾ ತರಬೇತಿ ನೀಡಲಾಗುತ್ತದೆ. ಯುವನಿಧಿ ಪ್ಲಸ್ ಉಪಕ್ರಮದ ಅಡಿಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಇರುತ್ತದೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರೇ ನಿರ್ವಹಿಸುವ ಕೆಫೆ ಸಂಜೀವಿನಿ ಕ್ಯಾಂಟೀನ್​ಗಳನ್ನು ಸ್ಥಾಪಿಸಲಾಗುವುದು. 2,500 ಕಾಫಿ ಕಿಯೋಸ್ಕ್​ಗಳನ್ನು ಸ್ಥಾಪಿಸಲಾಗುವುದು. ರಾಜ್ಯದ ಎಲ್ಲಾ ಐಟಿಐಗಳಲ್ಲಿ ಸ್ಥಳೀಯ ಕೈಗಾರಿಕೆ ಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಡುಯಲ್ ಟ್ರೈನಿಂಗ್ ಸಿಸ್ಟಂ ಅಳವಡಿಸಲಾಗುವುದು ಎಂದು ಬಜೆಟ್​ನಲ್ಲಿ ಹೇಳಲಾಗಿದೆ.

Womens Canteen: ಗ್ರಾಮೀಣ ಭಾಗದಲ್ಲಿ ಮಹಿಳೆಯರೇ ನಿರ್ವಹಿಸುವ ಕೆಫೆಗಳು; ಯುವಜನರಿಗೆ ಉದ್ಯಮಶೀಲತಾ ತರಬೇತಿ
ಸಿದ್ದರಾಮಯ್ಯ

Updated on: Feb 16, 2024 | 1:30 PM

ಬೆಂಗಳೂರು, ಫೆಬ್ರುವರಿ 16: ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಯುವ ನಿಧಿ ಯೋಜನೆ ಮೂಲಕ ಒಂದಷ್ಟು ರಿಲೀಫ್ ಕೊಟ್ಟಿದೆ. ಈಗ ಈ ನಿರುದ್ಯೋಗಿಗಳಿಗೆ ಉತ್ತಮ ವೃತ್ತಿಜೀವನ ಕಂಡುಕೊಳ್ಳಲು ಯೋಜನೆ ರೂಪಿಸಿದೆ. ಯುವನಿಧಿ ಪ್ಲಸ್ ಉಪಕ್ರಮದ (Yuva Nidhi Plus) ಅಡಿಯಲ್ಲಿ 25,000 ಫಲಾನುಭವಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ (Entrepreneurship development training) ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್​ನಲ್ಲಿ ಘೋಷಿಸಿದ್ದಾರೆ. ನಿರುದ್ಯೋಗ ನಿವಾರಣೆಗೆ ಪ್ರಯತ್ನಿಸುತ್ತಿರುವ ಸರ್ಕಾರ ಯುವಜನರಿಗೆ ಉದ್ಯೋಗ ಮತ್ತು ಉದ್ದಿಮೆ ಅವಕಾಶ ಹೆಚ್ಚಿಸಲು ಕೌಶಲ್ಯ ನೀತಿ ಜಾರಿ ಮಾಡುವುದಾಗಿ ಹೇಳಿದೆ. ಇನ್ನು, ಗ್ರಾಮೀಣ ಭಾಗದಲ್ಲಿ ಮಹಿಳೆಯರಿಂದಲೇ ನಿರ್ವಹಿಸಲ್ಪಡುವ ಕೆಫೆ ಸಂಜೀವಿನಿ (Cafe Sanjeevini) ಎಂಬ ಕ್ಯಾಂಟೀನ್​ಗಳ ಸ್ಥಾಪಿಸುವ ಯೋಜನೆಯನ್ನು ಘೋಷಿಸಲಾಗಿದೆ. ಯುವಜನರ ಕೌಶಲ್ಯ ಅಭಿವೃದ್ಧಿಗೆ 2024ರ ಬಜೆಟ್​ನಲ್ಲಿ ಘೋಷಿಸಲಾದ ಕೆಲ ಪ್ರಮುಖ ಸಂಗತಿ ಇಲ್ಲಿವೆ….

ಕರ್ನಾಟಕ ಬಜೆಟ್​ನಲ್ಲಿ ಕೌಶಲ್ಯ ಅಭಿವೃದ್ಧಿಗೆ ಸಿಕ್ಕಿದ್ದು ಇದು…

  • ಯುವಜನರಿಗೆ ಉತ್ತಮ ಉದ್ಯೋಗ ಮತ್ತು ಉದ್ಯಮ ಅವಕಾಶ ಒದಗಿಸಲು ರಾಜ್ಯ ಕೌಶಲ್ಯ ನೀತಿ ಜಾರಿ ಮಾಡಲಾಗುವುದು
  • ಯುವ ನಿಧಿ ಪ್ಲಸ್ ಅಡಿ 25,000 ಫಲಾನುಭವಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ
  • ಗ್ರಾಮೀಣ ಭಾಗದಲ್ಲಿ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್​ಗಳ ಸ್ಥಾಪನೆ. 2,500 ಕಾಫಿ ಕಿಯಾಸ್ಕ್​ಗಳ ಸ್ಥಾಪನೆಗೆ ಕ್ರಮ

ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಗುಡ್​ ನ್ಯೂಸ್​ ನೀಡಿದ ಸಿದ್ದರಾಮಯ್ಯ

  • ಬಳ್ಳಾರಿಯ ಸಂಡೂರಿನಲ್ಲಿ ಸ್ಕಿಲ್ ಅಕಾಡೆಮಿ ಸ್ಥಾಪನೆ
  • ಕಲಬುರ್ಗಿ, ತಳಕಲ್ ಮತ್ತು ವರುಣಾದಲ್ಲಿ 350 ಕೋಟಿ ರೂ ವೆಚ್ಚದಲ್ಲಿ ಜಿಟಿಟಿಸಿ ಬಹುಕೌಶಲ್ಯ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆ
  • ಬಳ್ಳಾರಿ, ಚಿತ್ರದುರ್ಗ, ರೋಣದಲ್ಲಿ ಜಿಟಿಟಿಸಿಗಳ ಆರಂಭ
  • ಕಲಬುರ್ಗಿಯ ಕೆಜಿಟಿಟಿಐನಲ್ಲಿ ಸಿಎನ್​ಸಿ ಮೆಷಿನ್​ ಅನ್ನು ಸೆಂಟ್ರಲೈಸ್​ಗೊಳಿಸುವ ಮೊದಲ ಎಕ್ಸಲೆನ್ಸ್ ಸೆಂಟರ್ ಸ್ಥಾಪನೆ
  • 40,000 ಐಟಿಐ ಮತ್ತು ಜಿಟಿಟಿಸಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಭಾಷಾ ಕಲೆ ಹಾಗೂ ಸಂವಹನ ಕೌಶಲ್ಯ ತರಬೇತಿ
  • ಎಲ್ಲಾ ಐಟಿಐಗಳಲ್ಲಿ ಸ್ಥಳೀಯ ಕೈಗಾರಿಕೆ ಮತ್ತು ಉದ್ಯಮಗಳ ಸಹಭಾಗಿತ್ವದಲ್ಲಿ ಡುಯಲ್ ಟ್ರೈನಿಂಗ್ ಸಿಸ್ಟಂ (ಡಿಎಸ್​ಟಿ).
  • ಎರಡು ವರ್ಷದಲ್ಲಿ 50,000 ಸ್ವಸಹಾಯ ಗುಂಪಿನ ಮಹಿಳಾ ಸ್ವಾಮ್ಯದ ಸೂಕ್ಷ್ಮ ಉದ್ಯಮಗಳ ಅಭಿವೃದ್ಧಿಗೆ ಕ್ರಮ.
  • ಒಂದು ಲಕ್ಷ ಮಹಿಳಾ ಸ್ವ ಸಹಾಯ ಗುಂಪುಗಳಿಗೆ 100 ಕೋಟಿ ರೂ ವೆಚ್ಚದಲ್ಲಿ ವಿವಿಧ ಕಿರು ಉದ್ದಿಮೆಗಳನ್ನು ಸ್ಥಾಪಿಸಿ ಸೂಕ್ತ ಮಾರುಕಟ್ಟೆ ಅವಕಾಶ ಕಲ್ಪಿಸಲು ಕ್ರಮ
  • ಐಐಎಂಬಿ ಸಹಭಾಗಿತ್ವದಲ್ಲಿ 10 ಜಿಲ್ಲಾ ಮಟ್ಟದ ಇನ್​ಕ್ಯುಬೇಶನ್ ಸೆಂಟರ್ ಸ್ಥಾಪನೆ

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us