
ಬೆಂಗಳೂರು, ಫೆಬ್ರುವರಿ 16: ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಯುವ ನಿಧಿ ಯೋಜನೆ ಮೂಲಕ ಒಂದಷ್ಟು ರಿಲೀಫ್ ಕೊಟ್ಟಿದೆ. ಈಗ ಈ ನಿರುದ್ಯೋಗಿಗಳಿಗೆ ಉತ್ತಮ ವೃತ್ತಿಜೀವನ ಕಂಡುಕೊಳ್ಳಲು ಯೋಜನೆ ರೂಪಿಸಿದೆ. ಯುವನಿಧಿ ಪ್ಲಸ್ ಉಪಕ್ರಮದ (Yuva Nidhi Plus) ಅಡಿಯಲ್ಲಿ 25,000 ಫಲಾನುಭವಿಗಳಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ (Entrepreneurship development training) ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ನಲ್ಲಿ ಘೋಷಿಸಿದ್ದಾರೆ. ನಿರುದ್ಯೋಗ ನಿವಾರಣೆಗೆ ಪ್ರಯತ್ನಿಸುತ್ತಿರುವ ಸರ್ಕಾರ ಯುವಜನರಿಗೆ ಉದ್ಯೋಗ ಮತ್ತು ಉದ್ದಿಮೆ ಅವಕಾಶ ಹೆಚ್ಚಿಸಲು ಕೌಶಲ್ಯ ನೀತಿ ಜಾರಿ ಮಾಡುವುದಾಗಿ ಹೇಳಿದೆ. ಇನ್ನು, ಗ್ರಾಮೀಣ ಭಾಗದಲ್ಲಿ ಮಹಿಳೆಯರಿಂದಲೇ ನಿರ್ವಹಿಸಲ್ಪಡುವ ಕೆಫೆ ಸಂಜೀವಿನಿ (Cafe Sanjeevini) ಎಂಬ ಕ್ಯಾಂಟೀನ್ಗಳ ಸ್ಥಾಪಿಸುವ ಯೋಜನೆಯನ್ನು ಘೋಷಿಸಲಾಗಿದೆ. ಯುವಜನರ ಕೌಶಲ್ಯ ಅಭಿವೃದ್ಧಿಗೆ 2024ರ ಬಜೆಟ್ನಲ್ಲಿ ಘೋಷಿಸಲಾದ ಕೆಲ ಪ್ರಮುಖ ಸಂಗತಿ ಇಲ್ಲಿವೆ….
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ
ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ