AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ನಮ್ಮ ಮೆಟ್ರೋ: 2025ರ ಒಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್​ ಮಂಡಿಸಿದ್ದು ಅದರಲ್ಲಿ ಈ ಬಾರಿ ನಮ್ಮ ಮೆಟ್ರೋಗೆ 44 ಕಿ.ಮೀ ಹೊಸ ಮಾರ್ಗ ಸೇರ್ಪಡೆಯಾಗುವ ಘೋಷಣೆ ಮಾಡಿದ್ದಾರೆ. 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ ಸೇರ್ಪಡೆಯಾಗಲಿದೆ ಎಂದು ತಿಳಿಸಿದ್ದಾರೆ

Karnataka Budget: ನಮ್ಮ ಮೆಟ್ರೋ: 2025ರ ಒಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ
ಸಿದ್ದರಾಮಯ್ಯ
ನಯನಾ ರಾಜೀವ್
|

Updated on: Feb 16, 2024 | 11:29 AM

Share

ಬೆಂಗಳೂರು ನಮ್ಮ ಮೆಟ್ರೋ(Namma Metro) ಜಾಲಕ್ಕೆ 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2024-25ನೇ ಸಾಲಿನ ರಾಜ್ಯ ಬಜೆಟ್​ ಮಂಡನೆ ಮಾಡಿದ ಅವರು, ಮೆಟ್ರೋ ಯೋಜನೆ ಹಂತ 2 ಹಾಗೂ 2ಎ ಯೋಜನೆಯಡಿ ಹೊರವರ್ತುಲ ರಸ್ತೆ-ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣವಾಗಲಿದೆ.

ನಮ್ಮ ಮೆಟ್ರೋ ಹಂತ-3ರಲ್ಲಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆಗೆ ಅರ್ಜಿ ಸಲ್ಲಿಕೆಯಾಗಿದೆ, ನಮ್ಮ ಮೆಟ್ರೋ ಹಂತ-3ಎ ಅಡಿಯಲ್ಲಿ ಡಿಪಿಆರ್ ಕರಡು ಸಿದ್ಧವಾಗಿದೆ ಎಂದಿದ್ದಾರೆ. ಹಾಗೆಯೇ ಪೆರಿಫೆರಲ್ ರಿಂಗ್ ರೋಡ್​ ಅನ್ನು ಬೆಂಗಳೂರು ಬ್ಯುಸಿನೆಸ್​ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಬಿಐಇಸಿನಿಂದ ತುಮಕೂರು ಮತ್ತು ಕೆಐಎಎಲ್​ನಿಂದ ದೇವನಹಳ್ಳಿಗೆ ಮೆಟ್ರೋ ಜಾಲ ವಿಸ್ತರಣೆ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸೇವೆಗೆ 1334 ಹೊಸ ಎಲೆಕ್ಟ್ರಿಕ್ ಬಸ್​ಗಳು ಮತ್ತು 820 ಬಿಎಸ್​-6 ಡೀಸೆಲ್​ ಬಸ್ಸುಗಳ ಸೇರ್ಪಡೆ.

ಮತ್ತಷ್ಟು ಓದಿ: Karnataka Budget 2024: ಬೆಂಗಳೂರು ಬಿಸಿನೆಸ್ ಕಾರಿಡರ್, 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧಾರ

5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾವೇರಿ ಹಂತ-5 ಯೋಜನೆ ಮೇ 2024ರಲ್ಲಿ ಕಾರ್ಯಾರಂಭವಾಗಲಿದೆ. 12 ಲಕ್ಷ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ, ಒಳಚರಂಡಿ ಕಾಮಗಾರಿ ಡಿಸೆಂಬರ್ 2024ರಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ