AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ನಮ್ಮ ಮೆಟ್ರೋ: 2025ರ ಒಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್​ ಮಂಡಿಸಿದ್ದು ಅದರಲ್ಲಿ ಈ ಬಾರಿ ನಮ್ಮ ಮೆಟ್ರೋಗೆ 44 ಕಿ.ಮೀ ಹೊಸ ಮಾರ್ಗ ಸೇರ್ಪಡೆಯಾಗುವ ಘೋಷಣೆ ಮಾಡಿದ್ದಾರೆ. 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ ಸೇರ್ಪಡೆಯಾಗಲಿದೆ ಎಂದು ತಿಳಿಸಿದ್ದಾರೆ

Karnataka Budget: ನಮ್ಮ ಮೆಟ್ರೋ: 2025ರ ಒಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ
ಸಿದ್ದರಾಮಯ್ಯ
ನಯನಾ ರಾಜೀವ್
|

Updated on: Feb 16, 2024 | 11:29 AM

Share

ಬೆಂಗಳೂರು ನಮ್ಮ ಮೆಟ್ರೋ(Namma Metro) ಜಾಲಕ್ಕೆ 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2024-25ನೇ ಸಾಲಿನ ರಾಜ್ಯ ಬಜೆಟ್​ ಮಂಡನೆ ಮಾಡಿದ ಅವರು, ಮೆಟ್ರೋ ಯೋಜನೆ ಹಂತ 2 ಹಾಗೂ 2ಎ ಯೋಜನೆಯಡಿ ಹೊರವರ್ತುಲ ರಸ್ತೆ-ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣವಾಗಲಿದೆ.

ನಮ್ಮ ಮೆಟ್ರೋ ಹಂತ-3ರಲ್ಲಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆಗೆ ಅರ್ಜಿ ಸಲ್ಲಿಕೆಯಾಗಿದೆ, ನಮ್ಮ ಮೆಟ್ರೋ ಹಂತ-3ಎ ಅಡಿಯಲ್ಲಿ ಡಿಪಿಆರ್ ಕರಡು ಸಿದ್ಧವಾಗಿದೆ ಎಂದಿದ್ದಾರೆ. ಹಾಗೆಯೇ ಪೆರಿಫೆರಲ್ ರಿಂಗ್ ರೋಡ್​ ಅನ್ನು ಬೆಂಗಳೂರು ಬ್ಯುಸಿನೆಸ್​ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಬಿಐಇಸಿನಿಂದ ತುಮಕೂರು ಮತ್ತು ಕೆಐಎಎಲ್​ನಿಂದ ದೇವನಹಳ್ಳಿಗೆ ಮೆಟ್ರೋ ಜಾಲ ವಿಸ್ತರಣೆ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸೇವೆಗೆ 1334 ಹೊಸ ಎಲೆಕ್ಟ್ರಿಕ್ ಬಸ್​ಗಳು ಮತ್ತು 820 ಬಿಎಸ್​-6 ಡೀಸೆಲ್​ ಬಸ್ಸುಗಳ ಸೇರ್ಪಡೆ.

ಮತ್ತಷ್ಟು ಓದಿ: Karnataka Budget 2024: ಬೆಂಗಳೂರು ಬಿಸಿನೆಸ್ ಕಾರಿಡರ್, 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧಾರ

5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾವೇರಿ ಹಂತ-5 ಯೋಜನೆ ಮೇ 2024ರಲ್ಲಿ ಕಾರ್ಯಾರಂಭವಾಗಲಿದೆ. 12 ಲಕ್ಷ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ, ಒಳಚರಂಡಿ ಕಾಮಗಾರಿ ಡಿಸೆಂಬರ್ 2024ರಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ