AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget: ನಮ್ಮ ಮೆಟ್ರೋ: 2025ರ ಒಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ

ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್​ ಮಂಡಿಸಿದ್ದು ಅದರಲ್ಲಿ ಈ ಬಾರಿ ನಮ್ಮ ಮೆಟ್ರೋಗೆ 44 ಕಿ.ಮೀ ಹೊಸ ಮಾರ್ಗ ಸೇರ್ಪಡೆಯಾಗುವ ಘೋಷಣೆ ಮಾಡಿದ್ದಾರೆ. 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ ಸೇರ್ಪಡೆಯಾಗಲಿದೆ ಎಂದು ತಿಳಿಸಿದ್ದಾರೆ

Karnataka Budget: ನಮ್ಮ ಮೆಟ್ರೋ: 2025ರ ಒಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ
ಸಿದ್ದರಾಮಯ್ಯ
ನಯನಾ ರಾಜೀವ್
|

Updated on: Feb 16, 2024 | 11:29 AM

Share

ಬೆಂಗಳೂರು ನಮ್ಮ ಮೆಟ್ರೋ(Namma Metro) ಜಾಲಕ್ಕೆ 2025ರ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ ಮಾರ್ಗ ಸೇರ್ಪಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 2024-25ನೇ ಸಾಲಿನ ರಾಜ್ಯ ಬಜೆಟ್​ ಮಂಡನೆ ಮಾಡಿದ ಅವರು, ಮೆಟ್ರೋ ಯೋಜನೆ ಹಂತ 2 ಹಾಗೂ 2ಎ ಯೋಜನೆಯಡಿ ಹೊರವರ್ತುಲ ರಸ್ತೆ-ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣವಾಗಲಿದೆ.

ನಮ್ಮ ಮೆಟ್ರೋ ಹಂತ-3ರಲ್ಲಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆಗೆ ಅರ್ಜಿ ಸಲ್ಲಿಕೆಯಾಗಿದೆ, ನಮ್ಮ ಮೆಟ್ರೋ ಹಂತ-3ಎ ಅಡಿಯಲ್ಲಿ ಡಿಪಿಆರ್ ಕರಡು ಸಿದ್ಧವಾಗಿದೆ ಎಂದಿದ್ದಾರೆ. ಹಾಗೆಯೇ ಪೆರಿಫೆರಲ್ ರಿಂಗ್ ರೋಡ್​ ಅನ್ನು ಬೆಂಗಳೂರು ಬ್ಯುಸಿನೆಸ್​ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಬಿಐಇಸಿನಿಂದ ತುಮಕೂರು ಮತ್ತು ಕೆಐಎಎಲ್​ನಿಂದ ದೇವನಹಳ್ಳಿಗೆ ಮೆಟ್ರೋ ಜಾಲ ವಿಸ್ತರಣೆ ಕುರಿತು ಕಾರ್ಯಸಾಧ್ಯತಾ ವರದಿ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸೇವೆಗೆ 1334 ಹೊಸ ಎಲೆಕ್ಟ್ರಿಕ್ ಬಸ್​ಗಳು ಮತ್ತು 820 ಬಿಎಸ್​-6 ಡೀಸೆಲ್​ ಬಸ್ಸುಗಳ ಸೇರ್ಪಡೆ.

ಮತ್ತಷ್ಟು ಓದಿ: Karnataka Budget 2024: ಬೆಂಗಳೂರು ಬಿಸಿನೆಸ್ ಕಾರಿಡರ್, 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧಾರ

5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾವೇರಿ ಹಂತ-5 ಯೋಜನೆ ಮೇ 2024ರಲ್ಲಿ ಕಾರ್ಯಾರಂಭವಾಗಲಿದೆ. 12 ಲಕ್ಷ ಜನರಿಗೆ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ, ಒಳಚರಂಡಿ ಕಾಮಗಾರಿ ಡಿಸೆಂಬರ್ 2024ರಲ್ಲಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!