Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2024: ಕರ್ನಾಟಕ ಬಜೆಟ್​ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮೀಸಲಿಟ್ಟಿದ್ದೇನು, ಇಲ್ಲಿದೆ ಮಾಹಿತಿ

ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್​ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದಾರೆ. ಅದರಲ್ಲಿ ಅಂಗನವಾಡಿ ಕಾರ್ಯಕರ್ತರು, ಗೃಹ ಲಕ್ಷ್ಮೀ ಯೋಜನೆ, ವಿಕಲಚೇತನರ ಆರೈಕೆ ಸೇರಿದಂತೆ ಹಲವು ಯೋಜನೆಗಳಿಗೆ ಸಾಕಷ್ಟು ಹಣವನ್ನು ಮೀಸಲಿಟ್ಟಿದ್ದಾರೆ.

Karnataka Budget 2024: ಕರ್ನಾಟಕ ಬಜೆಟ್​ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಮೀಸಲಿಟ್ಟಿದ್ದೇನು, ಇಲ್ಲಿದೆ ಮಾಹಿತಿ
ಮಹಿಳೆಯರು
Follow us
ನಯನಾ ರಾಜೀವ್
|

Updated on: Feb 16, 2024 | 11:55 AM

ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaih) 2024-25ನೇ ಸಾಲಿನ ಕರ್ನಾಟಕ ಬಜೆಟ್​ ಅನ್ನು ಇಂದು ಮಂಡಿಸಿದ್ದಾರೆ. ಅದರಲ್ಲಿ ವಿಶೇಷವಾಗಿ ಮಹಿಳೆಯರು ಹಾಗೂ ಮಕ್ಕಳ ಅಭಿವೃದ್ಧಿಗೆ ಒಂದಷ್ಟು ಹಣವನ್ನು ಮೀಸಲಿರಿಸಿದ್ದಾರೆ. ಅದರ ಕುರಿತು ಮಾಹಿತಿ ಇಲ್ಲಿದೆ. ಮಹಿಳೆಯರ ಆರ್ಥಿಕ ಸ್ವಾತಂತ್ರ್ಯಕ್ಕೆ ಬೆಂಬಲ ನೀಡುವ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ನೀಡಲಾಗುತ್ತಿದೆ.

ಕುಟುಂಬ ದತ್ತಾಂಶದನ್ವಯ 1.33 ಕೋಟಿ APL, BPL, AAY ಪಡಿತರ ಚೀಟಿ ಹೊಂದಿರುವ ಯಜಮಾನಿ ಮಹಿಳೆಯರನ್ನು ಅರ್ಹ ಫಲಾನುಭವಿಗಳೆಂದು ಗುರುತಿಸಲಾಗಿದೆ. ಜನವರಿ ಅಂತ್ಯದವರೆಗೆ 1.17 ಕೋಟಿ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಈವರೆಗೆ 11,726 ಕೋಟಿ ರೂ.ಗಳನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ.

2024-25ನೇ ಸಾಲಿನಲ್ಲಿ 28,608 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಿದೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು.

  • ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು.
  • ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು.
  • ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ನೀಡಲಾಗುವುದು.
  • Cerebral Palsy(ಸೆರೆಬ್ರಲ್ ಪಾಲ್ಸಿ), Muscular Dystrophy(ಮಸ್ಕ್ಯುಲರ್ ಡಿಸ್ಟ್ರೋಫಿ), Parkinsons(ಪಾರ್ಕಿನ್​ಸನ್) ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನವನ್ನು ನೀಡಲಾಗುವುದು.
  • ಆರೋಗ್ಯ ಇಲಾಖೆಯೊಂದಿಗೆ ಸಮನ್ವಯಿಸಿ ಎಲ್ಲಾ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಎರಡು Cataract ಶಸ್ತ್ರಚಿಕಿತ್ಸೆ ಶಿಬಿರಗಳನ್ನು ಆಯೋಜಿಸಲಾಗುವುದು.
  • ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು.
  • ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು.
  • ಲಿಂಗತ್ವ ಅಲ್ಪಸಂಖ್ಯಾತರ ಬದುಕನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಮೈತ್ರಿ ಯೋಜನೆಯಡಿ ನೀಡುವ ಮಾಸಾಶನವನ್ನು 800 ರೂ.ಗಳಿಂದ 1,200 ರೂ.ಗಳಿಗೆ ಹೆಚ್ಚಿಸಲಾಗುವುದು. ಜೊತೆಗೆ ಗುರುತಿಸುವಿಕೆ ಹಾಗೂ ಗುರುತಿನ ಚೀಟಿ ವಿತರಣೆಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು.
  • ಮಾಜಿ ದೇವದಾಸಿಯರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು
  • ಪ್ರಸ್ತುತ ನೀಡುತ್ತಿರುವ ಮಾಸಾಶನವನ್ನು 1500 ರೂ.ಗಳಿಂದ 2000 ರೂ.ಗಳಿಗೆ ಹೆಚ್ಚಿಸಲಾಗುವುದು.
  • ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ವಿಶೇಷ ಪ್ಯಾಕೇಜ್ ಅನ್ನು ನೀಡಲಾಗುವುದು.
  • ನಿವೇಶನ ಹೊಂದಿರುವ ವಸತಿರಹಿತರಿಗೆ ರಾಜೀವ್ ಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯ ಕಲ್ಪಿಸಲಾಗುವುದು.
  • ಅವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಮರುಸಮೀಕ್ಷೆ ನಡೆಸಲಾಗುವುದು.
  • 2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ 86,423 ಕೋಟಿ ರೂ.ಗಳನ್ನು ಒದಗಿಸಲಾಗುವುದು.
  • ಮಕ್ಕಳ ಉದ್ದೇಶಿತ ಯೋಜನೆಗಳಿಗೆ 2024-25ನೇ ಸಾಲಿನಲ್ಲಿ 54,617 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್