AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka budget 2025: ಅಧಿವೇಶನ ಆರಂಭಕ್ಕೆ ಮೊದಲು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ವಿಪಕ್ಷ ಶಾಸಕರ ಘೋಷಣೆ

Karnataka budget 2025: ಅಧಿವೇಶನ ಆರಂಭಕ್ಕೆ ಮೊದಲು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ವಿಪಕ್ಷ ಶಾಸಕರ ಘೋಷಣೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 03, 2025 | 12:37 PM

Share

Karnataka budget 2025: ವಿಧಾನ ಮಂಡಲದಲ್ಲಿ ಈ ಸಲದ ಬಜೆಟ್ ಅಧಿವೇಶನ ಹೇಗಿರಲಿದೆ ಅನ್ನೋದಿಕ್ಕೆ ಸೂಚನೆಯನ್ನು ವಿರೋಧ ಪಕ್ಷದ ಶಾಸಕರು ನೀಡಿದ್ದಾರೆ. ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಎಲ್ಲ ಪ್ರಯತ್ನಗಳನ್ನು ಅವರು ಮಾಡಲಿರುವುದು ನಿಶ್ಚಿತ. ವಿರೋಧ ಪಕ್ಷದ ನಾಯಕರಾದ ಅರ್ ಅಶೋಕ ಮತ್ತು ನಾರಾಯಣಸ್ವಾಮಿ ಚಲವಾದಿಯವರನ್ನು ಸರ್ಕಾರದ ಪ್ರತಿನಿಧಿಗಳು ಹೇಗೆ ಎದುರಿಸುತ್ತಾರೋ ಕಾದು ನೋಡಬೇಕು.

ಬೆಂಗಳೂರು: ವಿಧಾನಮಂಡಲದ ಬಜೆಟ್ ಅಧಿವೇಶನ ಇಂದು ಆರಂಭವಾಗಿದೆ. ವಿಧಾನಸಭೆಯೊಳಗೆ ಪ್ರವೇಶಿಸುವ ಮೊದಲು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ವಿಧಾನಸಭೆಯ ಪಶ್ಚಿಮದ್ವಾರದ ಬಳಿ ಪ್ರತಿಭಟನೆ ನಡೆಸಿದರು. ಹೆಚ್ಚು ಕಡಿಮೆ ಎಲ್ಲ ಶಾಸಕರ ಕೈಗಳಲ್ಲಿ ಸರ್ಕಾರದ ವಿರುದ್ಧ ಧಿಕ್ಕಾರ ಹೇಳುವ ಪ್ಲಕಾರ್ಡ್​​ಗಳಿದ್ದವು. ಪ್ರಜಾಫ್ರಭುತ್ವ ವಿರೋಧಿ ಸರ್ಕಾರಕ್ಕೆ ಧಿಕ್ಕಾರ, ರಾಜ್ಯಪಾಲರ ಅಧಿಕಾರ ಹೈಕೋರ್ಟ್ ಎತ್ತಿಹಿಡಿದರೂ ಸಹಿಸದ ಕಾಂಗ್ರೆಸ್ ಸರ್ಕಾರ, ಸರ್ವಾಧಿಕಾರಿ ಸಿದ್ದರಾಮಯ್ಯಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಶಾಸಕರು ಕೂಗಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Karnataka Budget 2025: ವಿಧಾನಮಂಡಲ ಅಧಿವೇಶನ, ರಾಜ್ಯಪಾಲರ ಭಾಷಣ ಲೈವ್​

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.