AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ಆಸ್ತಿ, ಮುಸ್ಲಿಂ ಸ್ಮಾಶನಗಳ ರಕ್ಷಣೆಗೆ 150 ಕೋಟಿ ರೂ: ಸಿದ್ದರಾಮಯ್ಯ ಘೋಷಣೆ

ಕರ್ನಾಟಕ ಬಜೆಟ್ 2025: ವಕ್ಫ್ ಆಸ್ತಿ ಸಂಬಂಧ ರಾಜ್ಯದಾದ್ಯಂತ ಇತ್ತೀಚೆಗೆ ಬಹಳಷ್ಟು ಚರ್ಚೆಗಳಾಗಿದ್ದವು. ರೈತರ ಜಮೀನು ತನ್ನದೆಂದು ವಕ್ಫ್ ನೋಟಿಸ್ ಕಳುಹಿಸಿದ್ದ ವಿಚಾರ ವವಾದಕ್ಕೀಡಾಗಿತ್ತು. ಇಂಥ ಸಂದರ್ಭದಲ್ಲೇ ವಕ್ಫ್ ಆಸ್ತಿಯ ರಕ್ಷಣೆ ಮತ್ತು ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಭರ್ಜರಿ ಅನುದಾನ ಘೋಷಣೆ ಮಾಡಿದ್ದಾರೆ.

ವಕ್ಫ್ ಆಸ್ತಿ, ಮುಸ್ಲಿಂ ಸ್ಮಾಶನಗಳ ರಕ್ಷಣೆಗೆ 150 ಕೋಟಿ ರೂ: ಸಿದ್ದರಾಮಯ್ಯ ಘೋಷಣೆ
ವಕ್ಫ್ ಆಸ್ತಿ, ಮುಸ್ಲಿಂ ಸ್ಮಾಶನಗಳ ರಕ್ಷಣೆಗೆ 150 ಕೋಟಿ ರೂ: ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on:Mar 07, 2025 | 2:54 PM

Share

ಬೆಂಗಳೂರು, ಮಾರ್ಚ್​ 7: ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯ ಒದಗಿಸಲು 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ  (Siddaramaiah) ಬಜೆಟ್​​ನಲ್ಲಿ (Karnataka Budget 2025) ಘೋಷಣೆ ಮಾಡಿದರು. ದೇಶದಾದ್ಯಂತ ವಕ್ಫ್ ಆಸ್ತಿ ವಿಚಾರ ಚರ್ಚೆಯಲ್ಲಿರುವ ಮತ್ತು ರಾಜ್ಯದಲ್ಲಿ ಅನೇಕ ರೈತರ ಜಮೀನಿಗೆ ಸಂಬಂಧಿಸಿ ವಕ್ಫ್ ಆಸ್ತಿ ಎಂಬ ನೋಟಿಸ್ ಬಂದಿರುವ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಸಿದ್ದರಾಮಯ್ಯ ಬಜೆಟ್​​ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

ಮೌಲಾನಾ ಆಜಾದ್ ಪಬ್ಲಿಕ್ ಶಾಲೆ ಅಭಿವೃದ್ದಿ ಅಡಿ ಆಯ್ದ 100 ಉನ್ನತ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಲು 400 ಕೋಟಿ ರೂ. ಅನುದಾನ ನೀಡಲಾಗುತ್ತಿದ್ದು, ಈ ವರ್ಷ 100 ಕೋಟಿ ರೂ. ಬಿಡುಗಡೆ ಮಾಡಲಾಗುವುದು.ಮದರಸ ಶಿಕ್ಷಣ ಬಲಪಡಿಸುವ ಯೋಜನೆಯಡಿ ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಮತ್ತಿತರ ಸೌಲಭ್ಯಗಳೊಂದಿಗೆ NIOS ಮುಖಾಂತರ SSLC ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದ ಮೂಲಕ ಉದ್ಯೋಗ ಹಾಗೂ ತರಬೇತಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಉಳ್ಳಾಲದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಕಾಲೇಜು ನಿರ್ಮಾಣ​ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ
Image
Budget PDF: ಕರ್ನಾಟಕ ಬಜೆಟ್ 2025, ಪಿಡಿಎಫ್ ಡೌನ್​ಲೋಡ್
Image
Karnataka Budget Highlights: ಬಜೆಟ್​ ಮಂಡಿಸಿ ದಾಖಲೆ ನಿರ್ಮಿಸಿದ ಸಿಎಂ
Image
Live Tv: ಕರ್ನಾಟಕ ಬಜೆಟ್​ ಲೈವ್ ಇಲ್ಲಿ ವೀಕ್ಷಿಸಿ
Image
ಹಾಲು ಉತ್ಪಾದಕರ 656 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ

ಮುಸ್ಲಿಮರಿಗೆ ಬಜೆಟ್​​ನಲ್ಲಿ ಬೇರೆ ಏನೇನು ಕೊಡುಗೆ?

  • ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಗೆ 1000 ಕೋಟಿ ಅನುದಾನ​.
  • ಮದರಸಗಳ ಸೌಕರ್ಯವೃದ್ಧಿ – ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್, SSLC ಪರೀಕ್ಷೆ ಬರೆಯಲು NIOS ಮೂಲಕ ತರಬೇತಿ​.
  • ಅಲ್ಪಸಂಖ್ಯಾತ ಉದ್ಯಮಶೀಲತೆ – ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮೂಲಕ ಸ್ಟಾರ್ಟ್-ಅಪ್​ಗೆ ಬೆಂಬಲ​.
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ – ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಸತಿ ಆಶ್ರಯದಲ್ಲಿ ಮುಕ್ತ ತರಬೇತಿ​.
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕೇಂದ್ರ ಹಜ್ ಭವನದಲ್ಲಿ ಸ್ಥಾಪನೆ​.
  • ಹಜ್ ಭವನ ವಿಸ್ತರಣೆ – ಹಜ್ ಯಾತ್ರಿಕರ ಅನುಕೂಲಕ್ಕೆ ಹೊಸ ಕಟ್ಟಡ ನಿರ್ಮಾಣ​
  • ಸಾಮೂಹಿಕ ಮದುವೆ ನೆರವು – ನಾನ್‌ಗೋಗಳಿಗೆ ₹50,000 ಮದುವೆ ವೆಚ್ಚದ ನೆರವು​
  • ವೃತ್ತಿಪರ ಕೋರ್ಸುಗಳ ಶುಲ್ಕ ಪರಿಹಾರ – KEA ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 50% (₹5 ಲಕ್ಷದವರೆಗೆ) ಶುಲ್ಕ ಮರಳಿ ಪಾವತಿ​.
  • ವಿದೇಶಿ ಅಧ್ಯಯನ ವಿದ್ಯಾರ್ಥಿವೇತನ, ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನವನ್ನು ₹20 ಲಕ್ಷದಿಂದ ₹30 ಲಕ್ಷಕ್ಕೆ ಹೆಚ್ಚಿಸಲಾಗಿದೆ.
  • ಮಸೀದಿಗಳ ಪೇಶ್-ಇಮಾಮ್, ಮಝಿನ್ ಗೌರವಧನ – ಪೇಶ್-ಇಮಾಮ್‌ಗೆ ₹6,000 ಮತ್ತು ಮಝಿನ್‌ಗೆ ₹5,000 ಮಾಸಿಕ ಗೌರವಧನ

ಇದನ್ನೂ ಓದಿ: ​ಎಸ್​ಸಿ, ಎಸ್​ಟಿ ಸಮುದಾಯಕ್ಕೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್: 2 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಗುತ್ತಿಗೆ ಮೀಸಲಾತಿ

ಕರ್ನಾಟಕ ಬಜೆಟ್ ಲೈವ್​ ಅಪ್​ಡೇಟ್​​ಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:06 am, Fri, 7 March 25

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು