Kannada News Karnataka Karnataka Budget 2025: What Give Siddaramaiah to law and order, security News In kannada
Karnataka Budget 2025: ಕರ್ನಾಟಕ ಭದ್ರತೆಗೆ ಒತ್ತು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಲವು ಕ್ರಮ
ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಬೈಕ್ ವ್ಹೀಲಿಂಗ್, ದರೋಡೆ, ಡ್ರಗ್ಸ್, ಕೊಲೆ, ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳು ಹೆಚ್ಚಾಗಿವೆ. ಅದರಲ್ಲೂ ಇತ್ತೀಚೆಗೆ ರೋಡ್ರೇಜ್ ಕೇಸ್ಗಳು ಸಹ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಿದ್ದರಾಮಯ್ಯನವರು ಇಂದಿನ ಬಜೆಟ್ನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ.
ಬೆಂಗಳೂರು, (ಮಾರ್ಚ್ 07): ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಹೆಚ್ಚು ಚರ್ಚೆಗಳಾಗುತ್ತಿವೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು(Siddarmaaiah) ಇಂದಿನ ತಮ್ಮ 2025ನೇ ಸಾಲಿನ ಬಜೆಟ್ನಲ್ಲಿ (Karnataka Budget 2025) ರಾಜ್ಯದ ಭದ್ರತೆ ಒತ್ತು ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗಾದ್ರೆ, ರಾಜ್ಯದ ಭದ್ರತೆ ಸಿದ್ದರಾಮಯ್ಯ ಬಜೆಟ್ನಲ್ಲಿ ಏನೆಲ್ಲಾ ಘೋಷಣೆ ಮಾಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿವೆ ನೋಡಿ.
667 ಕೋಟಿ ವೆಚ್ಚದಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆ ಅನುಷ್ಠಾನ