
ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ 2026-27 ನೇ ಸಾಲಿನ ಬಜೆಟ್ (Karnataka Budget 2026) ಮಂಡನೆಯಾಗಿದೆ. ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ, ಅತಿಹೆಚ್ಚು ಆಯವ್ಯಯ ಮಂಡಿಸಿದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. ಅವರು 2026ರವರೆಗೆ 17 ಬಜೆಟ್ ಮಂಡನೆ ಮಾಡಿದಂತಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸ್ಕೀಮ್ಗಳಿಗೆ ಅನುದಾನ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸೇರಿದಂತೆ ಅನೇಕ ಘೋಷಣೆಗಳನ್ನು ಬಜೆಟ್ನಲ್ಲಿ ಮಾಡಲಾಗಿದೆ.
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗೆ ಬಜೆಟ್ನಲ್ಲಿ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಅನುದಾನ ಮೀಸಲು, ಶಕ್ತಿ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ಮೀಸಲು, ಗೃಹಜ್ಯೋತಿ ಯೋಜನೆಗೆ ಈ ವರ್ಷ 10,578 ಹಣ ಮೀಸಲು ಇಡಲಾಗಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆಯ ಲೈವ್ ಅಪ್ಡೇಟ್ಸ್ಗೆ ಇಲ್ಲಿ ಕ್ಲಿಕ್ ಮಾಡಿ
ಸದ್ಯ ಈ ಬಜೆಟ್ ಮಂಡನೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಕೀರ್ತಿ ಸಿದ್ದರಾಮಯ್ಯ ಅವರದ್ದಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ 13 ಬಾರಿ ಹಾಗೂ ಬಿಎಸ್ ಯಡಿಯೂರಪ್ಪ 8 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ.