AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2021 Highlights: ಜಿಲ್ಲೆಗೊಂದು ಗೋಶಾಲೆ, ಮೇಕೆ-ಕುರಿ-ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ

Karnataka Budget 2021: ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ನಂತರ ವಿವಿಧ ಜಿಲ್ಲೆಗಳಲ್ಲಿ ಅನಾಥ ಗೋವುಗಳು ರಸ್ತೆಯ ಮೇಲೆ ಕಾಣಿಸಿಕೊಳ್ಳುವ ಪ್ರಮಾಣ ಹೆಚ್ಚಾಗಿತ್ತು. ವಯಸ್ಸಾದ ಮತ್ತು ಅಂಗವಿಕಲ ಗೋವುಗಳನ್ನು ಸಾಕುವ ಕಷ್ಟಗಳ ಬಗ್ಗೆ ರೈತರು ಸಹ ಅಸಹಾಯಕತೆ ತೋಡಿಕೊಂಡಿದ್ದರು.

Karnataka Budget 2021 Highlights: ಜಿಲ್ಲೆಗೊಂದು ಗೋಶಾಲೆ, ಮೇಕೆ-ಕುರಿ-ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 08, 2021 | 1:08 PM

ಬೆಂಗಳೂರು: ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ನಂತರ ವಿವಿಧ ಜಿಲ್ಲೆಗಳಲ್ಲಿ ಅನಾಥ ಗೋವುಗಳು ರಸ್ತೆಯ ಮೇಲೆ ಕಾಣಿಸಿಕೊಳ್ಳುವ ಪ್ರಮಾಣ ಹೆಚ್ಚಾಗಿತ್ತು. ವಯಸ್ಸಾದ ಮತ್ತು ಅಂಗವಿಕಲ ಗೋವುಗಳನ್ನು ಸಾಕುವ ಕಷ್ಟಗಳ ಬಗ್ಗೆ ರೈತರು ಸಹ ಅಸಹಾಯಕತೆ ತೋಡಿಕೊಂಡಿದ್ದರು. ಬಜೆಟ್ ಭಾಷಣದಲ್ಲಿ ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲೆಗೊಂದು ಗೋಶಾಲೆ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಗೋಶಾಲೆಗಳಿವೆ. ಖಾಸಗಿ ನಿರ್ವಹಣೆಯಲ್ಲಿರುವ ಗೋಶಾಲೆಗಳ ಪರಿಸ್ಥಿತಿ ಸರಿಯಿಲ್ಲ ಎಂಬ ಮಾತುಗಳಿವೆ. ಬಜೆಟ್​ನಲ್ಲಿ ಘೋಷಣೆಯಾಗಿರುವ ಗೋಶಾಲೆಗಳು ಖಾಸಗಿ ನಿರ್ವಹಣೆಯ ಗೋಶಾಲೆಗಳ ಪರಿಸ್ಥಿತಿ ಸುಧಾರಿಸಲು ನೆರವಾಗುವುದೋ ಅಥವಾ ಸರ್ಕಾರವೇ ಹೊಸ ಗೋಶಾಲೆಗಳನ್ನು ಸ್ಥಾಪಿಸಲಿದೆಯೋ ಎಂಬ ಬಗ್ಗೆ ನಿಖರ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಯಬಹುದು.

ರಾಜ್ಯದಲ್ಲಿ ಗೋಹತ್ಯೆ ತಡೆಗೆ ಜಿಲ್ಲೆಗೊಂದು ಗೋಶಾಲೆ ನಿರ್ಮಿಸಲಾಗುವುದು. ದೇಸಿ ತಳಿಗಳಾದ ಗೀರ್, ಸಾಹಿವಾಲ್, ಓಂಗೋಲ್, ಥಾರ್​ಪಾರ್ಕರ್ ಮತ್ತು ದೇವಣಿ ತಳಿಗಳ ಸಂವರ್ಧನೆಗಾಗಿ ‘ಸಮಗ್ರ ಗೋಸಂಕುಲ ಸಮೃದ್ಧಿ ಯೋಜನೆ’ ಜಾರಿಗೊಳಿಸಲಾಗುವುದು ಎಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.

ಬೆಂಗಳೂರಿನ ಹೆಸರಘಟ್ಟದಲ್ಲಿ 100 ಎಕರೆ ವಿಸ್ತೀರ್ಣದಲ್ಲಿ ಹಸು, ಕೋಳಿ ಮತ್ತು ವಿವಿಧ ದೇಸಿ ಪಶುತಳಿಗಳ ಸಂವರ್ಧನೆ ಮತ್ತು ಪ್ರದರ್ಶನಕ್ಕಾಗಿ ಥೀಮ್ ಪಾರ್ಕ್ ರೂಪಿಸಲಾಗುವುದು ಎಂದು ಅವರು ಇದೇ ಸಂದರ್ಭ ಘೋಷಿಸಿದರು.

ರಾಜ್ಯದಲ್ಲಿ ಈಚಿನ ದಿನಗಳಲ್ಲಿ ಜನಪ್ರಿಯವಾಗಿರುವ ನಂದಿಗುರ್ಗ ಮೇಕೆ ತಳಿಗಳ ಅಭಿವೃದ್ಧಿಗೆ ₹ 1 ಕೋಟಿ, ನಾರಿಸುವರ್ಣ ಕುರಿತಳಿ ಸಂವರ್ಧನೆಗೆ ಕೊಪ್ಪಳದಲ್ಲಿ ಸಂವರ್ಧನಾ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು. ಆಕಸ್ಮಿಕವಾಗಿ ಕುರಿಗಳು ಸಾವನ್ನಪ್ಪಿದಾಗ ಅವುಗಳ ಮಾಲೀಕರು ಆರ್ಥಿಕ ನಷ್ಟ ಅನುಭವಿಸುತ್ತಾರೆ. ಇಂಥವರಿಗೆ ಪರಿಹಾರ ನೀಡುವ ಯೋಜನೆಯನ್ನು ಈ ವರ್ಷವೂ ಮುಂದುವರಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಇದನ್ನೂ ಓದಿ: ಮಠ-ಸಾಂಸ್ಕೃತಿಕ ಕೇಂದ್ರಗಳಿಗೆ ಅನುದಾನ; ಅಯೋಧ್ಯೆಯಲ್ಲಿ ಯಾತ್ರಿ ನಿವಾಸಕ್ಕೆ ₹ 10 ಕೋಟಿ

ಇದನ್ನೂ ಓದಿ: ಬಜೆಟ್​ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು? ಹೊಸ ಯೋಜನೆಗಳೇನು?

ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್